ಮಂಗಳೂರು ಬೋಳಾರದ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್ ಭೂಪಟದಲ್ಲಿ ಯಾರೋ ಕಿಡಿಗೇಡಿಗಳು ಪೀರ್ ದರ್ಗಾ ಕಾಂಪೌಂಡ್ ಎಂದು ತಿದ್ದಿರುವುದಾಗಿ ತಿಳಿದು ಬಂದಿದೆ. ಇದನ್ನು ಸರಿಪಡಿಸುವಂತೆ ದೇವಾಲಯದ ಆಡಳಿತ ಮಂಡಳಿಯವರು ದೂರು ದಾಖಲಿಸಿದ್ದಾರೆ. ಇದು ಕುಕೃತ್ಯ ಎಂದೂ ಖಂಡಿಸಿದ್ದಾರೆ.
ಮೂಡುಬಿದಿರೆ: ಕಳೆದ ಹಲವಾರು ವರ್ಷಗಳಿಂದ ಮೂಡುಬಿದಿರೆಯಲ್ಲಿ ಹಿರಿಯ ಅಟೋ ಚಾಲಕರಾಗಿ, ರಂಗಕಲಾವಿದರಾಗಿ ಗುರುತಿಸಿಕೊಂಡಿದ್ದ ಒಂಟಿಕಟ್ಟೆಯ ಗುರುವಪ್ಪ ಪೂಜಾರಿ ಗುರುವಪ್ಪ ಪೂಜಾರಿಒಂಟಿಕಟ್ಟೆಯ ಗುರುವಪ್ಪ ಪೂಜಾರಿ(68)ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು.ಮೂಡುಬಿದಿರೆಯಲ್ಲಿ ಸುಮಾರು 45 ವರ್ಷಗಳಿಂದ ರಿಕ್ಷಾ ಚಾಲಕರಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಹಲವು ತುಳು ನಾಟಕಗಳಲ್ಲಿ ಅಭಿನಯಿಸಿದ್ದ ಅವರು ಸಾಂಸ್ಕೃತಿಕ, ಧಾರ್ಮಿಕ
ನವಮಂಗಳೂರು ಬಂದರಿಗೆ ಐಷಾರಾಮಿ ಸೆವೆನ್ ಸೀಸ್ ನ್ಯಾವಿಗೇಟರ್ ಪ್ರವಾಸಿ ಹಡಗು ಆಗಮಿಸುವುದರೊಂದಿಗೆ ಈ ಬಾರಿಯ ಕ್ರೋಸ್ ಸೀಸನ್ ಅರಂಭಗೊಂಡಿತು. ನಾರ್ವೆಯ ಒಡೆತನದ, ಬಹಾಮಾಸ್ ಧ್ವಜ ಹೊಂದಿದ್ದು 500 ಪ್ರಯಾಣಿಕರು ಮತ್ತು 350 ಸಿಬಂದಿಯನ್ನು ಹೊಂದಿದೆ. 173 ಮೀಟರ್ ಉದ್ದವಿರುವ ಈ ಹಡಗು ಆಗಿದ್ದು, 28,803 ಟನ್ ಭಾರ, ಮತ್ತು 7.5 ಮೀಟರ್ ಆಳವಿದೆ. ಹಡಗಿನಿಂದ ಇಳಿದ ಕ್ರೂಸ್ ಪ್ರಯಾಣಿಕರಿಗೆ ಚೆಂಡೆ ಮತ್ತು ಯಕ್ಷಗಾನ, ಭರತನಾಟ್ಯ ಪ್ರದರ್ಶನದೊಂದಿಗೆ ಸಾಂಪ್ರದಾಯಿಕ ಸ್ವಾಗತ
ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದ ಸುರತ್ಕಲ್ನ 19ರ ಆಯಿಶಾ ಮತ್ತು 31ರ ಬಜರಂಗ ದಳದ ಪ್ರಶಾಂತ್ ಭಂಡಾರಿ ಮದುವೆ ಆಗಿರುವುದು ಶರಣ್ ಪಂಪ್ವೆಲ್ ಅವರ ಶುಭಾಶಯಪೋಸ್ಟ್ ನಿಂದ ಸ್ಪಷ್ಟಗೊಂಡಿದೆ. ಆಯಿಷಾಳು ಅಕ್ಷತಾ ಆಗಿ ನಮ್ಮ ಪ್ರಶಾಂತರನ್ನು ಹಿಂದೂ ರೀತ್ಯಾ ಮದುವೆ ಆಗಿದ್ದಾರೆ. ಶುಭಾಶಯ ಹೇಳಿ ಈ ಮತಾಂತರ ಸಮರ್ಥಿಸಿದ್ದಾರೆ. ಆಯಿಷಾ ಅಲಿಯಾಸ್ ಅಕ್ಷತಾಳ ಹೆತ್ತವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದವರು. ಆಯಿಷಾ ತಂದೆ ಸುರತ್ಕಲ್ನಲ್ಲಿ
ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಕುಮಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು
ಉಡುಪಿ ಮತ್ತು ಮಣಿಪಾಲದಲ್ಲಿ ಸಂಚರಿಸುವ ಬಸ್ಗಳಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವುದನ್ನು ಪ್ರಾದೇಶಿಕ ಸಾರಿಗೆ ಕಚೇರಿ ಕಡ್ಡಾಯಗೊಳಿಸಿದೆ.ಇತ್ತೀಚೆಗೆ ನಡೆದ ಜನಸ್ಪಂದನ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಿರುವ ಇಂಗ್ಲಿಷ್ ನಾಮಫಲಕಗಳ ಜೊತೆಗೆ ಕನ್ನಡದಲ್ಲಿ ಮಾರ್ಗ ಸಂಖ್ಯೆಗಳು ಮತ್ತು ಗಮ್ಯಸ್ಥಾನವನ್ನು ನಾಮಫಲಕಗಳಲ್ಲಿ ಪ್ರದರ್ಶಿಸುವಂತೆ ಆರ್ಟಿಒ ಎಲ್ಲಾ ಬಸ್ ನಿರ್ವಾಹಕರಿಗೆ ಸೂಚಿಸಿದೆ. ಗಡುವು ಮುಗಿದ ನಂತರ ಬಸ್ ನಿರ್ವಾಹಕರು
ಯಕ್ಷಲೋಕ ವಿಖ್ಯಾತ, ಮಾತಿನ ರಂಗದ ಮಹಾರಥಿ, ಹಿರಿಯ ಯಕ್ಷಗಾನ ಕಲಾವಿದರು, ಸುರತ್ಕಲ್ ಕ್ಷೇತ್ರದ ಶಾಸಕರು, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರು, ಸಂಸ್ಕಾರ ಭಾರತೀಯ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರತಿಷ್ಟಿತ ಪುರಸ್ಕಾರವನ್ನು ಪಡೆದ ಕುಂಬ್ಳೆ ಸುಂದರರಾವ್ರವರ ಸಂಸ್ಮರಣಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಡಿಸೆಂಬರ್ ೧೦, ೨೦೨೩ನೇ ಆದಿತ್ಯವಾರ ಸಾಯಂಕಾಲ ೪.೦೦ರಿಂದ ದೇವಾಂಗ ಸಭಾಭವನ, ಉರ್ವಸ್ಟೋರ್, ಮಂಗಳೂರಿನಲ್ಲಿ ನಡೆಯಲಿರುವುದು.
ಬಿಎಂಆರ್ ಗ್ರೂಪ್ ವತಿಯಿಂದ ಎರಡನೇ ತಿಂಗಳ ಡ್ರಾ ಕಾರ್ಯಕ್ರಮವು ಡಿಸೆಂಬರ್ 9ರಂದು ಕೃಷ್ಣಾಪುರದ ಬಿಎಂಆರ್ ಕಚೇರಿಯಲ್ಲಿ ನಡೆಯಲಿದೆ. ಅದೃಷ್ಟ ಶಾಲಿಗಳಿಗೆ ಆರು ಬಂಪರ್ ಪ್ರೆöÊಸ್ ಗೆಲ್ಲುವ ಅವಕಾಶವಿದ್ದು, ಮೂವರಿಗೆ 75 ಸಾವಿರ ಮೌಲ್ಯದ ಚಿನ್ನದ ನೆಕ್ಲಿಸ್ ಹಾಗೂ ಮೂವರಿಗೆ ಹೋಂಡಾ ಆಕ್ಟಿವಾ ಬಹುಮಾನವಾಗಿ ಗೆಲ್ಲುವ ಅವಕಾಶವಿದೆ. ಡಿಸೆಂಬರ್ 5ರೊಳಗೆ ಹಣ ಪಾವತಿಸಿದವರಿಗೆ 25 ಚಿನ್ನದ ಉಂಗುರ ಮತ್ತು 50 ಮಂದಿಗೆ ಸರ್ಪ್ರೈಸ್ ಬಹುಮಾನ ಗೆಲ್ಲುವ ಅವಕಾಶವಿದೆ. ಹೆಚ್ಚಿನ
ಪಚ್ಚನಾಡಿಯ ಕಸ ವಿಲೇವಾರಿ ಘಟಕದ ಸುತ್ತ ಪೈಪ್ಲೈನ್ ಅಳವಡಿಸಿ ಸ್ಪ್ರಿಂಕ್ಲರ್ ಹಾಕಿ ಆಕಸ್ಮಿಕ ಬೆಂಕಿ ಅನಾಹುತ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಂದೊಗೆ ಮಾತನಾಡಿದರು. ಕಳೆದ ವರ್ಷ ಬೇಸಿಗೆಯಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿತ್ತು. ಹೀಗಾಗಿ ಈ ಬಾರಿ ಮುನ್ನೆಚ್ಚರಿಕೆಯಾಗಿ ಎರಡು ಬೋರ್ವೆಲ್
ಮಂಗಳೂರಿನ ಕದ್ರಿ, ನೀರುಮಾರ್ಗಗಳ ಹಲವೆಡೆ ಕಾಟಿ ನನ್ನ ಕಾಡು ಎಲ್ಲಿದೆ ಎಂದು ಹುಡುಕಿ ಹೋದುದರ ವರದಿಯಾಗಿದೆ. ಮಲೆನಾಡಿನ ಎಲ್ಲ ಕಡೆ ಯಾವ ಬೇಲಿಗಳಿಗೂ ಕಾಟಿ, ಕಾಡುಕೋಣ ಜಗ್ಗುವುದಿಲ್ಲ ಎಂದು ಮಲೆನಾಡಿಗರು ದೂರುತ್ತಿದ್ದಾರೆ. ಕಾಡುಕೋಣಗಳಲ್ಲಿ ಕಾಡೆಮ್ಮೆ ಹೆಣ್ಣು ಇದ್ದರೂ ಕಾಡುಕೋಣ ಎಂದೇ ಕರೆಯುತ್ತಾರೆ. ಇದು ಪುರುಷ ವರ್ಗದ ಮೇಲಾಳ್ಕೆ ಕಿತಾಪತಿ ಎಂದು ಕೆಲವು ಮಹಿಳಾ ಹೋರಾಟಗಾತಿಯರು ದೂರಿದ್ದಾರೆ. ಮಲೆನಾಡಿಗರು ನಮ್ಮ ಬೇಲಿಯನ್ನು ಕಾಡುಕೋಣ ಮುರಿಯುತ್ತಿದೆ ಎಂದು