Home Posts tagged #manjeshwara (Page 13)

ಕುಬಣೂರಿನ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆ

ಮಂಜೇಶ್ವರ: ಮಂಗಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕುಬಣೂರಿನಲ್ಲಿ 30 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆಯಾಗಿದ್ದು ನಿತ್ಯ ಸಂಚಾರಿಗಳು ಸಂಕಷ್ಟಕ್ಕೂಳಗಾಗಿದ್ದಾರೆ. ಇದು ಸುವರ್ಣಗಿರಿ ತೋಡಿಗೆ ಕೃಷಿಗಾಗಿ ನಿರ್ಮಿಸಲಾದ ಸೇತುವೆಯಾಗಿದ್ದು ಅಗಲ ಕಿರಿದಾಗಿ ಸುಗಮ ಸಂಚಾರಕ್ಕೂ ಅಡ್ಡಿಯಾಗಿತ್ತು. ಇದರ ಮೇಲೆ ಕೆಂಪು ಕಲ್ಲು

ಕೇರಳ ಕೋ-ಆಪರೇಟಿವ್ ಎಂಪ್ಲೋಯಿಸ್ ಕೌನ್ಸಿಲ್ ಮಂಜೇಶ್ವರ : ಬಸ್ಸು ತಂಗುದಾಣ ಕೊಡುಗೆ

ಮಂಜೇಶ್ವರ : ಕೇರಳ ಕೋ- ಆಪರೇಟಿವ್ ಎಂಪ್ಲೋಯೀಸ್ ಕೌನ್ಸಿಲ್ ಮಂಜೆಶ್ವರ ಯೂನಿಟ್ ಇವರ ವತಿಯಿಂದ ಕೊಡುಗೆಯಾಗಿ ಸುಮಾರು ಎರಡೂವರೆ ಲಕ್ಷ ರೂ. ವೆಚ್ಚದಲ್ಲಿ ಮಂಜೇಶ್ವರ ಒಳಪೇಟೆಯಲ್ಲಿ ನಿರ್ಮಿಸಲಾದ ಸುಸಜ್ಜಿತ ಹೈಟೆಕ್ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಸೋಮವಾರದಂದು ಸಂಜೆ ಲೋಕಾರ್ಪಣೆಗೊಂಡಿತು.   ಜನನಿಬಿಡ ಪ್ರದೇಶವಾದ ಮಂಜೇಶ್ವರ ಒಳಪೇಟೆಯಲ್ಲಿ ಮೂಲಭೂತ ಸೌಕರ್ಯಗಳಲ್ಲೊಂದಾದ ಹೈಟೆಕ್ ಮಾದರಿಯ ಶೌಚಾಲಯಗಳನ್ನೊಳಗೊಂಡ ಬಸ್ಸು ತಂಗುದಾಣ ಲೋಕಾರ್ಪಣೆಗೊಂಡಿರುವುದು

ಮಂಜೇಶ್ವರದಲ್ಲಿ ಕೇಂದ್ರದ ಜನವಿರೋಧಿ ನೀತಿ ಖಂಡಿಸಿ ಸಿಪಿಐಎಂನಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗೆದುರಾಗಿ ರಾಜ್ಯ ವ್ಯಾಪಕವಾಗಿ ಕೇಂದ್ರ ಸರಕಾರದ ಕಚೇರಿಗಳ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹಲವೆಡೆಗಳಲ್ಲೂ ಪ್ರತಿಭಟನಾ ಧರಣಿ ನಡೆಯಿತು. ಸಿಪಿಐಎಂ ಕುಂಜತೂರು ಲೋಕಲ್ ಸಮಿತಿ ವತಿಯಿಂದ ಕುಂಜತ್ತೂರು ಅಂಚೆ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಸಿಪಿಐಎಂ ಮಂಜೇಶ್ವರ ಏರಿಯಾ ಸೆಕ್ರಟರಿ ಕೆ ವಿ ಕುಂಞಿರಾಮನ್ ಉದ್ಘಾಟಿಸಿ ಮಾತಾಡಿದರು. ಶ್ರೀಧರ ಅಧ್ಯಕ್ಷತೆ ವಹಿಸಿದ್ದರು.

ಅಂತರ್ ರಾಜ್ಯ ಗಡಿ ನಿಯಂತ್ರಣ:ಕೆ.ಆರ್.ಜಯಾನಂದ ಸಲ್ಲಿಸಿದ್ದ ಅರ್ಜಿಯಲ್ಲಿ ಮಧ್ಯಂತರ ಆದೇಶ ಪ್ರಕಟ

ಮಂಜೇಶ್ವರ : ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸಲು ಕರ್ನಾಟಕ ರಾಜ್ಯ ಸರ್ಕಾರ ಗಡಿಗಳಲ್ಲಿ ನಿಷೇಧ ಹೇರಿರುವುದಕ್ಕಾಗಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ.ಆರ್.ಜಯಾನಂದ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಆ.25 ಕ್ಕೆ ಮುಂದೂಡಿದ್ದು, ಈ ಮಧ್ಯೆ ದಕ್ಷಿಣ ಕನ್ನಡ ಪ್ರವೇಶಿಸಲು ಆಂಬುಲೆನ್ಸ್ ಗಳ ಹೊರತು ಇತರ ವಾಹನಗಳಲ್ಲೂ ಚಿಕಿತ್ಸೆಗೆ ತೆರಳುವವರನ್ನು ಯಾವುದೇ ಪರಿಶೋಧನೆಗೊಳಪಡಿಸದೆ(ಆರ್ ಟಿ ಪಿ ಸಿ ಆರ್ ) ತೆರಳಲು ಅವಕಾಶ ನೀಡಬೇಕು ಎಂದು ಮಂಗಳವಾರ ಹೈಕೋರ್ಟ್ ಮಧ್ಯಂತರ

ಮಂಜೇಶ್ವರ: ಕಾವಲುಗಾರನ ತೆಲೆಗೆ ಹೊಡೆದು ಗೋಣಿಯಲ್ಲಿ ಕಟ್ಟಿ ಹಾಕಿ ದರೋಡೆ

ಕಾವಲುಗಾರನ ತಲೆಗೆ ಹೊಡೆದು ಗೋಣಿಯೊಯೊಳಗೆ ಕಟ್ಟಿ ಹಾಕಿ ಮಂಜೇಶ್ವರದ ಹೃದಯ ಭಾಗವಾದ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ರಾಜಧಾನಿ ಜ್ಯುವೆಲ್ಲರಿಯ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಭಾರಿ ಮೌಲ್ಯದ ಬೆಳ್ಳಿ ಆಭರಣ ಹಾಗೂ ಲಕ್ಷಾಂತರ ರೂ. ನಗದನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಎರಡು ಗಂಟೆಯ ಸುಮಾರಿಗೆ ಎರಡು ಕಾರಿನಲ್ಲಿ ಆಗಮಿಸಿದ ಎಂಟು ಮಂದಿಯ ತಂಡ ಈ ಕೃತ್ಯ ನಡೆಸಿದೆ. ಕಾವಲುಗಾರ ಕಡಂಬಾರ್ ನಿವಾಸಿ ಅಬ್ದುಲ್ಲ ದರೋಡೆಕೋರರ ಹಲ್ಲೆಯಿಂದ ಗಾಯಗೊಂಡು

ಇಸ್ರೇಲ್ ಪತ್ತೇದಾರಿ ಸಾಫ್ಟ್‌ವೇರ್ ಪೆಗಾಸಸ್ ವಿಚಾರ : ಮಂಜೇಶ್ವರದಲ್ಲಿ ಎಐವೈ ಎಫ್‌ನಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ ದೂರವಾಣಿ ವಿವರಗಳನ್ನು ಸೋರಿಕೆ ಮಾಡಿರುವುದು ಅತ್ಯಂತ ಗಂಭೀರವಾಗಿದೆ.ಇರ ವಿರುದ್ಧ ಎ ಐ ವೈ ಎಫ್ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ ಕೃಷ್ಣನ್ ಪೆಗಾಸಸ್ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಸೇವೆ ಸಲ್ಲಿಸುತ್ತದೆ. ಆದ್ದರಿಂದ ಕೇಂದ್ರ ಸಚಿವರು ಸೇರಿದಂತೆ

ಜಾತಿ ಪ್ರಮಾಣಪತ್ರ ನೀಡಲು ವಿಳಂಬ ವಿಚಾರ:  ಕುಂಜತ್ತೂರು ವಿಲೇಜ್ ಅಧಿಕಾರಿಯ ವಿರುದ್ಧ ಆಕ್ರೋಶ

ಮಂಜೇಶ್ವರ: ಎಲ್ಲಾ ರೀತಿಯ ದಾಖಲೆಗಳನ್ನು ಹಾಜರು ಪಡಿಸಿದರೂ ಇಲ್ಲ ಸಲ್ಲದ ಕಾರಣಗಳನ್ನು ಮುಂದಿಟ್ಟು ಜಾತಿ ಪ್ರಮಾಣ ಪತ್ರ ನೀಡಲು ವಿಳಂಭ ಮಾಡಿದ ಕುಂಜತ್ತೂರು ವಿಲೇಜ್ ಅಧಿಕಾರಿಯ ತಾತ್ಕಾಲಿಕ ಉಸ್ತುವಾರಿಯಲ್ಲಿರುವ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಪಿಐ ಪಕ್ಷದ ಅಧೀನತೆಯಲ್ಲಿರುವ ಎಐವೈಎಫ್ ಸಂಘಟನೆಯ ಮಂಜೇಶ್ವರ ವಲಯಾಧ್ಯಕ್ಷ ದಯಾಕರ ಹಾಗೂ ಸಾಮಾಜಿಕ ಕಾರ್ಯಕರ್ತ ಇಬ್ರಾಹಿಂ ಕುಂತೂರು, ಮಂಜೇಶ್ವರ ಗ್ರಾ. ಪಂ. ಉಪಾಧ್ಯಕ್ಷ ಸಿದ್ದೀಖ್, ಕಾಂಗ್ರೆಸ್

ಬೋರ್ಕಳ-ಉಪ್ಪಳ ಸಂಪರ್ಕಿಸುವ ರಸ್ತೆಯ ದುಸ್ಥಿತಿ: ರಸ್ತೆಯಲ್ಲೇ ಹರಿಯುತ್ತಿರುವ ಮಳೆ ನೀರು

ಮಂಜೇಶ್ವರ: ಮಂಜೇಶ್ವರ ವರ್ಕಾಡಿ ಪಂಚಾಯತಿಗೆ ಒಳಪಟ್ಟ ಆನೆಕ್ಕಲ್ಲು ಕತ್ತರಕೋಡಿ ಬೋರ್ಕಳ ಮಾರ್ಗವಾಗಿ ಉಪ್ಪಳಕ್ಕೆ ಹೋಗುವ ರಸ್ತೆಯ ಸ್ಥಿತಿ ತುಂಬಾ ಶೋಚನೀಯವಾಗಿದೆ. ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಹಾಗೂ ನೂರಾರು ಕಾಲ್ನಡಿಗೆ ಯಾತ್ರಿಕರು ಆಶ್ರಯಿಸುವ ಏಕೈಕ ರಸ್ತೆಯಾಗಿದೆ. ಜನರು ನಡೆದು ಹೋಗಲು ಅಥವಾ ತುರ್ತು ಸಮಯಗಳಲ್ಲಿ ರೋಗಿಗಳನ್ನು ಕೊಂಡೊಯ್ಯಲು ಬೇರೆ ದಾರಿಯಿಲ್ಲ ಏಕೆಂದರೆ ಈ ಮಳೆಗಾಲದಲ್ಲಿ ಜನರು ನಡೆಯುವುದು ತುಂಬಾ ಕಷ್ಟದಿಂದ ಹಾಗೂ ವಾಹನಗಳ ಸಂಚಾರವೂ

ಮಂಜೇಶ್ವರದಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಮಂಜೇಶ್ವರ : ಕೇಂದ್ರ ಸರಕಾರದ ದುರಾಡಳಿತದಿಂದಾಗಿ ದೇಶ ತತ್ತರಿಸಿ ಹೋಗಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಅಚ್ಚೇ ದಿನ್ ಕೊಡುಗೆಯಾಗಿದೆ. ಈ ದೇಶದಿಂದ ಮೋದಿ ಆಡಳಿತವನ್ನು ಕಿತ್ತೆಸೆಯುವ ಮೂಲಕ ದೇಶವನ್ನು ರಕ್ಷಿಸುವ ಕೆಲಸ ಆಗಲೇಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಹೇಳಿದ್ದಾರೆ. ಅವರು ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯ ವತಿಯಿಂದ

ಮಂಜೇಶ್ವರದಲ್ಲಿ ಮದ್ಯಸಾಗಟದ ಆಟೋ ರಿಕ್ಷಾ ಪಲ್ಟಿ ರಿಕ್ಷಾ ಚಾಲಕ ಪರಾರಿ

ಮಂಜೇಶ್ವರ: ಪೊಲೀಸರ ಕಣ್ತಪ್ಪಿಸಿ ಕರ್ನಾಟಕದ ಒಳ ರಸ್ತೆಯಿಂದ ಅಮಿತ ವೇಗದಲ್ಲಿ ಆಗಮಿಸಿದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಗೆ ಅಲ್ಪ ಮುಂದೆ ಪಲ್ಟಿಯಾಗಿದೆ. ಚಾಲಕನಿಗೆ ಅಲ್ಪ ಗಾಯವಾಗಿದ್ದರೂ ಇದ್ದಲ್ಲಿಂದ ಎದ್ದು ಪರಾರಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ಕುಂಜತ್ತೂರು ಪದವು ರಸ್ತೆಯಂದ ಮದ್ಯವನ್ನು ಹೇರಿಕೊಂಡು ಆಗಮಿಸಿದ ರಿಕ್ಷಾ ಪಲ್ಟಿಯಾಗಿದೆ. ಬಳಿಕ ಊರವರು