Home Posts tagged #manjeshwara (Page 9)

ಜ.6 ಮತ್ತು 7ರಂದು ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನ

ಮಂಜೇಶ್ವರ: ಮಂಜೇಶ್ವರ ದ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕದಲ್ಲಿ ಜನವರಿ 6 ಮತ್ತು 7ರಂದು ನಡೆಯಲಿರುವ ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನದ ಭಾಗವಾಗಿರುವ ಚಿತ್ರಪ್ರದರ್ಶನದ ಸಿದ್ಧತೆಗಳು ಪ್ರಗತಿಯಲ್ಲಿದೆ. ಕಾಸರಗೋಡಿನ ಮಾನವ ಸ್ವಭಾವ, ಸಾಂಸ್ಕೃತಿಕ ಇತಿಹಾಸ ಮತ್ತು ಭೌಗೋಳಿಕತೆಯನ್ನು ಮರುಶೋಧಿಸುವ ಚಿತ್ರಗಳನ್ನು ರಚಿಸಲಾಗುತ್ತಿದೆ.ಕಲೆ, ಜೀವನ, ಭಾಷೆ, ಕಲ್ಪನೆ,

ಮೂಸೋಡಿಯಲ್ಲಿ ಪ್ರಯೋಜನಕ್ಕಿಲ್ಲದ ಮೀನುಗಾರಿಕಾ ಬಂದರು

ಮಂಜೇಶ್ವರ: ಮೂಸೋಡಿಯಲ್ಲಿ ನಿರ್ಮಾಣವಾಗಿರುವ ಮಂಜೇಶ್ವರ ಮೀನುಗಾರಿಕಾ ಬಂದರು ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಉಪಯೋಗ ಶೂನ್ಯವಾಗಿರುವುದಾಗಿ ಮೀನು ಕಾರ್ಮಿಕರು ದೊರಿದ್ದಾರೆ. ಇದು ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ಬೋಟ್‍ಗಳು, ಸಣ್ಣ ದೋಣಿಗಳು ಪ್ರವೇಶಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಾಗಿ ಮಿನು ಕಾರ್ಮಿಕರು ಆರೋಪಿಸುತಿದ್ದಾರೆ.ಮೀನುಗಾರಿಕಾ ಬಂದರು ನಿರ್ಮಾಣ ಕಾಮಗಾರಿ 2014 ಕ್ಕೆ ಅಂದಿನ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಉದ್ಘಾಟಿಸಿದ್ದರು.

ಮಂಜೇಶ್ವರದ ಜೋಡುಕಲ್ಲಿನಲ್ಲಿ ಅಕ್ರಮ ಮರಳು ದಂಧೆ : 3 ಟಿಪ್ಪರ್ ಲಾರಿಗಳ ವಶ

ಮಂಜೇಶ್ವರ: ಜೋಡುಕಲ್ಲಿನ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮಂಜೇಶ್ವರ ಪೊಲೀಸರು ನಡೆಸಿದ ದಾಳಿಯಲ್ಲಿ 3 ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅನಧಿಕೃತ ಮರಳಿನ ದಿಬ್ಬವನ್ನು ಕೆಡವಲಾಯಿತು. ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಜೇಶ್ವರ ಎಸ್ಸೈ ಅನ್ಸಾರ್ ರವರ ನೇತೃತ್ವದಲ್ಲಿ ದಾಳಿ ನಡೆದಿದೆ. ಮರಳು ಸಾಗಾಟಕ್ಕೆ ಬಂದಿದ್ದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆಯಲಾಗಿದೆ. ಮೂವರು ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನಧಿಕೃತ

ಬದಿಯಡ್ಕದಲ್ಲೊಂದು ಮನಕಲಕುವ ದೃಶ್ಯ ಒಂದೇ ಕುಟುಂಬದ ಇಬ್ಬರು ಮಕ್ಕಳ ಕಿಡ್ನಿ ವೈಫಲ್ಯ : ನೆರವಿಗಾಗಿ ಮನವಿ

ಮಂಜೇಶ್ವರ : ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿರುವ ಏತಡ್ಕ ವಳಕುಂಜದಲ್ಲಿ ವಾಸವಾಗಿರುವ ಜನಾರ್ಧನ ಎಂಬವರ ಇಬ್ಬರು ಮಕ್ಕಳು ನೂರಾರು ಕನಸುಗಳನ್ನು ಹೊತ್ತುಕೊಂಡು ತನ್ನ ಭವಿಷ್ಯವನ್ನು ರೂಪಿಸಿಕೊಳ್ಳುವ ವಯಸ್ಸಿನಲ್ಲೇ ತನ್ನ ಎರಡೂ ಕಿಡ್ನಿ ವೈಫಲ್ಯಕ್ಕೊಳಗಾಗಿ ಖರ್ಚು ವೆಚ್ಚಕ್ಕೆ ಯಾವುದೇ ದಾರಿ ಇಲ್ಲದೆ ಚಿಕಿತ್ಸೆಗೆ ಹಾಗೂ ಸಂಬಂಧಿತ ಖರ್ಚು ವೆಚ್ಚಕ್ಕೆ ಉದಾರ ದಾನಿಗಳಿಂದ ಕುಟುಂಬ ನೆರವು ಯಾಚಿಸಿದೆ. ಕಳೆದ ಹಲವಾರು ವರ್ಷಗಳಿಂದ ಬೀಡಿ

ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷ ಪ್ರಾಯದ ಬಾಲಕನ ಧಾರುಣ ಅಂತ್ಯ

ಮಂಜೇಶ್ವರ : ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ನಗರದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಸಮದ್ ಎಂಬವರ ಪುತ್ರ ಶೆಹಝಾದ್ (2) ಸಾವನ್ನಪ್ಪಿದ ದುರ್ದೈವಿ. ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿದೆ. ಶುಚೀಕರಣಕ್ಕಾಗಿ ತೆರೆದಿಟ್ಟ ಮನೆಯ ಅಂಗಳದ ಹಿಂಬಾಗದಲ್ಲಿರುವ ತ್ಯಾಜ್ಯ ಗುಂಡಿಗೆ ಬಾಲಕ ಆಟವಾಡುತ್ತಿರುವ ಮಧ್ಯೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಬಾಲಕನನ್ನು ಮೇಲಕ್ಕೆತ್ತಿ ಆಸ್ಪತೆಗೆ ಸಾಗಿಸಿದರೂ

ಮಂಜೇಶ್ವರದಲ್ಲಿ ಸಂಭ್ರಮದ ಬೀಚ್ ಪೆಸ್ಟ್ ಗೆ ಚಾಲನೆ

ಮಂಜೇಶ್ವರ: ಉದ್ಯಾವರ ಎಎಚ್‍ಎಸ್ ತಂಡದ ಪ್ರಾಯೋಜಕತ್ವದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತಿನ ಸಹಕಾರದೊಂದಿಗೆ ಸಪ್ತ ಭಾಷಾ ಸಂಗಮ ಭೂಮಿಯಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್ ನಲ್ಲಿ ಸಂಭ್ರಮದ ಬೀಚ್ ಫೆಸ್ಟ್ ಗೆ ಚಾಲನೆ ದೊರಕಿತು. ಇನ್ನು ಮುಂದಿನ ಒಂದು ತಿಂಗಳಿನಲ್ಲಿ ನಡೆಯಲಿರುವ ಬೀಚ್ ಫೆಸ್ಟ್ ಮಂಜೇಶ್ವರದ ಬೀಚ್‍ನಲ್ಲಿ ಉತ್ಸವದ ಸಂಭ್ರಮವಾಗಲಿದೆ. ಈ ಸಲದ ಮಂಜೇಶ್ವರ ಕಂಡು ಕೊಳಕೆ ಬೀಚ್ ಫೆಸ್ಟ್ ವಿವಿಧ ವಿನ್ಯಾಸಗಳನ್ನು ಹೊಂದಿದ್ದು, ಮಕ್ಕಳಿಗೆ ಹಾಗೂ

ಶ್ರೇಷ್ಠ ಗಾಯಕರ ಸ್ವರ ಅನುಕರಣೆಯೊಂದಿಗೆ ಪ್ರಸಿದ್ಧಿ ಪಡೆದ ಶಾಲಿ

ಮಂಜೇಶ್ವರ: ಸಂಗೀತದಿಂದ ಶಾಂತಿ ಸಾಮರಸ್ಯ ಸಾಧ್ಯ ಎಂಬುದನ್ನು ಸಮಾಜಕ್ಕೆ ತೋರಿಸಿ ಕೊಟ್ಟಿರುವ ಕೇರಳ ಕರ್ನಾಟಕ ಗಡಿ ಪ್ರದೇಶಗಳಲ್ಲಿ ತನ್ನ ಇಂಪಾದ ಮಧುರವಾದ ಕಂಠದಿಂದ ಇಲ್ಲೊಬ್ಬ ಕಲಾವಿದರೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತಿದ್ದಾರೆ. ತನ್ನ ಇಂಪಾದ ಹಾಡುಗಳಿಂದ ಹಲವು ವೇದಿಕೆಗಳಲ್ಲಿ ಗುರುತಿಸಿಕೊಂಡಿರುವ ಈ ಕಲಾವಿದ ನೊಂದವರ ಪಾಲಿಗೂ ಆಶಾ ಕಿರಣವಾಗಿ ಚ್ಯಾರಿಟೇಬಲ್ ವತಿಯಿಂದ ನಡೆಸುವ ವೇದಿಕೆಗಳಲ್ಲೂ ಜನ ಮನ ಗೆದ್ದಿದ್ದಾರೆ. ಮಂಗಳೂರು ನಿವಾಸಿಯಾಗಿರುವ ಶಾಲಿ

ವಿದ್ಯುತ್ ಶಾಕ್ ತಗುಲಿ ಬಾಲಕ ಸಾವು

ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ ಅವರ ಪುತ್ರ ಜತೇಶ್ (7 ವ) ಮೃತ ಬಾಲಕ. ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೆÇಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಾಗರಿಕರು

ಕೇರಳದ ಅನನ್ಯತೆ ಅರಸಿ ಗ್ರಾಮಗಳ ಪ್ರವಾಸದಲ್ಲಿರುವ ಯುವಕರು

ಮಂಜೇಶ್ವರ: ಜಗತ್ತಿನ ಮಲಯಾಳಿಗಳಿಗೆ ಕೇರಳದ ಬಗ್ಗೆ ವಿಭಿನ್ನ ಅಭಿವ್ಯಕ್ತಿ ನೀಡುವ ಹಾಗೂ ಕೇರಳವನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ಮಲಪ್ಪುರಂ ಜಿಲ್ಲೆಯ ಇಬ್ಬರು ಯುವಕರು ಕೇರಳದ ಅನನ್ಯತೆ ಅರಸಿ ಗ್ರಾಮಗಳ ಪ್ರವಾಸದ ಹೆಸರಿನಲ್ಲಿ ಕೇರಳದ ಉತ್ತರ ಭಾಗವಾದ ಗಡಿನಾಡ ಪ್ರದೇಶಕ್ಕೆ ತಲುಪಿದ್ದಾರೆ. ಕೇರಳ ಎಂದರೇನು ಎಂಬುದನ್ನು ತಿಳಿದುಕೊಳ್ಳಲು ಹಾಗೂ ಅಲ್ಲಿನ ಭಾಷೆ, ಸಂಸ್ಕೃತಿ, ಅಭಿರುಚಿ, ವಿವಿಧ ವ್ಯಾಪಾರ, ಕೃಷಿ, ಪ್ರವಾಸೋದ್ಯಮ ಮತ್ತಿತರ ಅಪರೂಪದ

ಮಂಜೇಶ್ವರ: ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆ

ಮಂಜೇಶ್ವರ: ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆಯ ಸಮಾರೋಪ ಸಮಾರಂಭ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಕಾರ್ಯಕ್ರಮದ ಸಂದೇಶವನ್ನು ಶಿಕ್ಷಕರುಗಳಾದ ರವೀಂದ್ರ ರೈ, ಅಶ್ರಫ್ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಬಾಲಕೃಷ್ಣ. ಜಿ. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಮೋಹಿನಿ, ಉಪಾಧ್ಯಕ್ಷೆ ಮುಮ್ತಾಜ್, ಎಸ್.ಎಂ.ಸಿ.ವೈಸ್ ಚೇರ್ಮನ್ ಕೆ.ಪಿ.ಮೊಹಮ್ಮದ್,