Home Posts tagged #mla bhagirati murulya

ಬೆಳ್ಳಾರೆ: ಜೂ. 8ರಂದು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ.: ಬೆಳ್ಳಾರೆಯಲ್ಲಿ 26ನೇ ಶಾಖೆ ಪ್ರಾರಂಭ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಇದರ 26ನೇ ಶಾಖೆಯ ಬೆಳ್ಳಾರೆಯ ಪ್ರಸಾದ್ ಟೆಕ್ಸ್ ಟೈಲ್ ಕಟ್ಟಡದ ನೆಲ ಮಹಡಿಯಲ್ಲಿ ಜೂನ್ 8ರಂದು ಉದ್ಘಾಟನೆಗೊಳ್ಳಲಿದೆ. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ೨೬ನೇ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಕ್ರೆಡಿಟ್ ಕೊ ಓಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕೆ. ಜೈರಾಜ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗ್ಗಿನ ಉಪಾಹಾರ ಪ್ರಸಾದ ಯೋಜನೆಗೆ ಚಾಲನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಾಹಾರ ಪ್ರಸಾದದ ವ್ಯವಸ್ಥೆ ಯೋಜನೆ ಇಂದಿನಿಂದ ವಿದ್ಯುಕ್ತವಾಗಿ ಆರಂಭವಾಯಿತು. ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಡಾl ವಿದ್ಯಾಪ್ರಸನ್ನ ಶ್ರೀಗಳು ದೀಪ ಬೆಳಗಿಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, . ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ,

ಸುಳ್ಯ: ದಿ. ಅಟಲ್ ಬಿಹಾರಿ ವಾಜಪೇಯಿ ಪುಣ್ಯ ದಿನ ಆಚರಣೆ

ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಸುಳ್ಯದ ನರೇಂದ್ರ ವಿಹಾರದಲ್ಲಿ ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನವನ್ನು ಆಚರಿಸಲಾಯಿತು. ಈ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಟ್ರಸ್ಟಿನ ಕೋಶಾಧಿಕಾರಿಗಳಾದ ಎ ವಿ ತೀರ್ಥರಾಮ, ಮಾನ್ಯ ಶಾಸಕರು ಹಾಗೂ ಟ್ರಸ್ಟಿಗಳಾದ ಕು. ಭಾಗೀರಥಿ ಮುರುಳ್ಯ ಮತ್ತು ಭಾರತೀಯ ಜನತಾ ಪಾರ್ಟಿಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಟ್ರಸ್ಟಿಗಳಾದ ವಿನಯ್ ಕುಮಾರ್ ಕಂದಡ್ಕರವರು

ಮಡಿಕೇರಿ: ಜುಲೈ 6ರಂದು ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ

ಮಡಿಕೇರಿ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಜುಲೈ 6ರಂದು ಬೆಳಿಗ್ಗೆ 10.30ಕ್ಕೆ ಕೇರ್ಪಳ ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಆರೋಗ್ಯ ಖಾತೆ ಸಚಿವ ದಿನೇಶ್‌ ಗುಂಡೂರಾವ್

ಸುಳ್ಯ : ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ- ಪರಿಹಾರ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಂಸದರು

ಮಂಗಳೂರು : ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಿಎಸ್‌ಎನ್‌ಎಲ್ ನೆಟ್ ವರ್ಕ್ ಸಮಸ್ಯೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಪರಿಹಾರದ ಕುರಿತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿ ಚರ್ಚಿಸಿದರು. ಸುಳ್ಯ ತಾಲೂಕಿನ ತೊಡಿಕಾನದ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಕಡೆ ನೆಟ್‌ವರ್ಕ್

ಮಂಗಳೂರು : ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶ

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಇಂದು ನಮ್ಮ ಪ್ರಮುಖ ಬೂತ್ ಕಾರ್ಯಕರ್ತರು ಜೊತೆಗಿದ್ದೀರಿ.

ಸುಳ್ಯ: ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಲು ಜನತಾ ದರ್ಶನ

ಸುಳ್ಯ: ಉಜ್ವಲ್ ಯೋಜನೆಯಡಿ ಗ್ಯಾಸ್ ಸಂಪರ್ಕ ವಿತರಣೆ

ಅರಂತೋಡು ತೆಕ್ಕಿಲ್ ಎಚ್.ಪಿ. ಗ್ಯಾಸ್ ವಿತರಣಾ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ವಿತರಣಾ ಸಮಾರಂಭವು ಅರಂತೋಡು-ತೊಡಿಕಾನ ಪ್ರಾಥಮಿಕ ಕ್ರಷಿಪತ್ತಿನಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆಯಿತು. ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಕು| ಭಾಗಿರಥಿ ಮುರುಳ್ಯ ಚಾಲನೆ ನೀಡಿದರು. ಅವರು ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು

ಕಡಬ ಸಮುದಾಯ ಆಸ್ಪತ್ರೆ – ಡಯಾಲಿಸಿಸ್ ಕೇಂದ್ರ ಶೀಘ್ರ ಆರಂಭಿಸುವ ಭರವಸೆ : ಭಾಗೀರಥಿ ಮುರುಳ್ಯ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆಸ್ಪತ್ರೆಯ ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ಡಯಾಲಿಸಿಸ್ ಕೇಂದ್ರ ಆರಂಭಿಸಲು ಶೀರ್ಘ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|ಸುಚಿತ್ರಾ ರಾವ್ ಆಸ್ಪತ್ರೆಯ ಸಿಬಂದಿ ಕೊರತೆ ಹಾಗೂ ಇತರ ಅಗತ್ಯತೆಗಳ ಕುರಿತು ಶಾಸಕಿಗೆ ಮಾಹಿತಿ ನೀಡಿದರು. ಆಸ್ಪತ್ರೆಗೆ ಹೊಸ ಡಿಜಿಟಲ್ ಎಕ್ಸ್‍ರೇ ಯಂತ್ರ ನೀಡಲಾಗಿದ್ದರೂ

ಕಡಬ ಪತ್ರಕರ್ತರಿಂದ ಶಾಸಕಿಗೆ ಅಭಿನಂದನೆ

ಕಡಬ: ಸೋಮವಾರ ಕಡಬಕ್ಕೆ ಆಗಮಿಸಿದ್ದ ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಕಡಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅವರ ನೇತೃತ್ವದಲ್ಲಿ ಶಾಸಕರನ್ನು ಹೂಗುಚ್ಚ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಪತ್ರಕರ್ತರ ಸಹಕಾರ ಕೋರಿದರು. ಈ ವೇಳೆ