ಮೂಡುಬಿದಿರೆ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೊಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್ ಕಾಮತ್ ಎಂ., ಕಾರ್ಯದರ್ಶಿಯಾಗಿ ಶರತ್ ದೇವಾಡಿಗ, ಕೋಶಾಧಿಕಾರಿಯಾಗಿ ರಾಘವೇಂದ್ರ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬೆಳುವಾಯಿ ಸೀತಾರಾಮ ಆಚಾರ್ಯ, ಪ್ರಸನ್ನ
ಮೂಡುಬಿದಿರೆ: ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ವಿಶ್ವಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಡಿಸೆಂಬರ್ 25 ರಂದು ಲಕ್ಷ ದೀಪೋತ್ಸವ ಕಾರ್ಯಕ್ರಮವು ಅತ್ಯಂತ ಸಡಗರದಿಂದ ಜರುಗಲಿದೆ.ಅತಿಶಯ ಸಿದ್ಧಕ್ಷೇತ್ರವಾದ ಮೂಡುಬಿದಿರೆಯ ಈ ಪುಣ್ಯಕ್ಷೇತ್ರದಲ್ಲಿ ಅಂದು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟಿವೆ. ಸಂಜೆ 6 ರಿಂದ: ವಿವಿಧ ಭಜನಾ ತಂಡಗಳಿಂದ ಭಕ್ತಿ ಸುಧೆ – ಜಿನ ಭಜನಾ
ಮೂಡುಬಿದಿರೆ : ಇಲ್ಲಿನ ಅಲಂಗಾರು ಬಡಗುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಜಿ ಯಕ್ಷ ಫೌಂಡೇಶನ್ ವತಿಯಿಂದ ಮಂಗಳವಾರ ನಡೆದ ಶ್ರೀ ಹರಿಲೀಲಾ ಯಕ್ಷಗಾನದ ೫ನೇ ವರ್ಷದ ಪ್ರಶಸ್ತಿ ಪ್ರದಾನ ಮತ್ತು ಯಕ್ಷ ನಾದೋತ್ಸವವು ಮಂಗಳವಾರ ನಡೆಯಿತು. ಅರ್ಥಧಾರಿ, ಯಕ್ಷಗಾನ ವಿಮರ್ಶಕ ಡಾ. ಎಂ. ಪ್ರಭಾಕರ ಜೋಶಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಗಳಲ್ಲಿ ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆಯ ಶಬ್ಧ ಹೆಚ್ಚುತ್ತಿದ್ದು ಇದರಿಂದಾಗಿ ಪಂಚವಾದ್ಯಗಳೂ ಮೂಲೆ ಗುಂಪಾಗುತ್ತಿದೆ
ಮೂಡುಬಿದಿರೆ : ಡಿ.13ರಿಂದ 18ರವರೆಗೆ ಕೊಲ್ಕೊತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಇಲ್ಲಿನ ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಸಂಗೀತಾ ಪೂಜಾರಿ ಮತ್ತು ನಿಖಿತಾ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರತ್ನಾಕರ ಪುತ್ತೂರಾಯ ತಿಳಿಸಿದ್ದಾರೆ.
ಮೂಡುಬಿದಿರೆ : ಪುರಸಭಾ ವ್ಯಾಪ್ತಿಯ ಸಾವ೯ಜನಿಕ ಸ್ಥಳಗಳಲ್ಲಿ, ಖಾಲಿ ಸೈಟ್ಟ್ ನಲ್ಲಿ, ರಸ್ತೆ ಬದಿಗಳಲ್ಲಿ, ತೋಡಿನಲ್ಲಿ ಹೀಗೆ ಎಲ್ಲೆಂದರಲ್ಲಿ ಕಸ ಬಿಸಾಡುವವರೇ ಜೋಕೆ.. ನಿಮಗೆ ಪುರಸಭೆಯಿಂದ ಬೀಳುತ್ತೆ 10,000 ದಂಡ. ಮೂಡುಬಿದಿರೆ ಪುರಸಭೆಯು ಸಮಪ೯ಕ ತ್ಯಾಜ್ಯ ನಿವ೯ಹಣೆಯ ಬಗ್ಗೆ ಕಳೆದ ಹಲವು ವರುಷಗಳಿಂದ ಶ್ರಮ ವಹಿಸುತ್ತಾ ಬರುತ್ತಿದೆ. ಮನೆಗಳಲ್ಲಿ, ಉದ್ಯಮದಲ್ಲಿ, ವ್ಯಾಪಾರದಲ್ಲಿ, ವಸತಿ ಸಮುಚ್ಛಯಗಳಲ್ಲಿ ಉತ್ಪಾದನೆಯಾಗುವ ಘನ ತ್ಯಾಜ್ಯವನ್ನು ಕಡ್ಡಾಯವಾಗಿ
ಮೂಡುಬಿದಿರೆ: ಇಲ್ಲಿನ ಕಡಲಕೆರೆಯಲ್ಲಿರುವ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪ್ರೀತಿ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ರಾಜ್ಯ ಮಟ್ಟದಲ್ಲಿ ಸಮಗ್ರ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ 4 x 100 ಮೀಟರ್ ರಿಲೇ: ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಿಂದೆ ಅವರು 400 ಮೀಟರ್ ಫ್ರೀ ಸ್ಟೈಲ್- ದ್ವಿತೀಯ ಸ್ಥಾನ, 400 ಮೀಟರ್ ಫ್ರೀ ಸ್ಟೈಲ್- ಪ್ರಥಮ
ಮೂಡುಬಿದಿರೆ : ಅರ್ಚಕ ವೃತ್ತಿ ಮಾಡಿಕೊಂಡಿದ್ದ ಯುವಕನೋವ೯ ಅಳಿಯೂರಿನ ವಸತಿ ಸಮುಚ್ಚಯವೊಂದರಲ್ಲಿ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹರೀಶ್ ಲಕ್ಷ್ಮೀಕಾಂತ್ ರಾವ್ (33ವ) ಆತ್ಮಹತ್ಯೆಕೊಂಡ ಯುವಕ. ವಸತಿ ಸಮುಚ್ಛಯದಲ್ಲಿ ಮನೆ ಮಾಡಿಕೊಂಡಿದ್ದ ಮೃತರು ಪತ್ನಿ ಹಾಗೂ ಮನೆಯವರನ್ನು, ಅಪಾರ ಬಂಧುಗಳನ್ನು ಆಗಲಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಮೂಡುಬಿದಿರೆ: ಹಿರಿಯ ಉದ್ಯಮಿ, ಪಂಚಾಯತ್ ಬೋರ್ಡ್ ಮಾಜಿ ಸದಸ್ಯ, ಸಾಮಾಜಿಕ ಪ್ರಮುಖ ಜಿ. ಮೋಹನ ಶೆಣೈ ( 88ವ) ಬೆಂಗಳೂರಿನ ವಾತ್ಸಲ್ಯ ನಿವಾಸದಲ್ಲಿ ಸೋಮವಾರ ನಿಧನ ಹೊಂದಿದರು. ಅವರು ಪತ್ನಿ, ಆರು ಮಂದಿ ಪುತ್ರರನ್ನು ಅಗಲಿದ್ದಾರೆ.ವರ್ತಕರಾಗಿ, ಉದ್ಯಮಿಯಾಗಿ ಮೂಡುಬಿದಿರೆಯಲ್ಲಿ ಸಾಮಾಜಿಕ ರಂಗದಲ್ಲಿಯೂ ಶೆಣೈಯವರು ಗುರುತಿಸಿಕೊಂಡಿದ್ದರು. ಜಿ. ವಾಸುದೇವ ಪೈ ಅವರಂತಹ ಸಾಮಾಜಿಕ ಧುರೀಣರ ನಿಕಟವರ್ತಿಯಾಗಿ ಸಮಾಜ ಮಂದಿರ ಸಭಾ,ಜಿ.ವಿ.ಪೈ ಮೆಮೋರಿಯಲ್ ಟ್ರಸ್ಟ್ , ರೋಟರಿ
ಮೂಡುಬಿದಿರೆ : ಡಾ. ಕಿಲಾರು ಗೋಪಾಲಕೃಷ್ಣ ಪ್ರತಿಷ್ಠಾನ ( ರಿ) ಸಂಪಾಜಿ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿಯಲ್ಲಿ ಕೊಡ ಮಾಡುವ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ ಯನ್ನು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಅವರಿಗೆ ಸಂಪಾಜಿ ಯಕ್ಷೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.ಯಕ್ಷಗಾನ ವಿದ್ವಾಂಸರಾದ ಡಾ ಪ್ರಭಾಕರ ಜೋಶಿ ಅಭಿನಂದನಾ ಮಾತುಗಳನ್ನಾಡಿ ನಾರಾವಿ ಯಂತಹ ಗ್ರಾಮೀಣ ಪ್ರದೇಶದಲ್ಲಿ
ಮೂಡುಬಿದಿರೆ: ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ , ಆಂಧ್ರ ಪ್ರದೇಶದ ರಾಜ್ಯಪಾಲ ಮೂಡುಬಿದಿರೆ ಮೂಲದ ಎಸ್. ಅಬ್ದುಲ್ ನಝೀರ್ ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಜೀವಮಾನದ ಸಾಧನೆಗಾಗಿ ನ 5ರಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ.ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಬೆಳಿಗ್ಗೆ 11.30 ರಿಂದ ನಡೆಯಲಿರುವ ರಾಜ್ಯ ಕಾನೂನು ವಿಶ್ವ ವಿದ್ಯಾನಿಯದ 7ನೇ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವ ಪ್ರದಾನ




























