Home Posts tagged moodabidre (Page 7)

ಆಳ್ವಾಸ್ ನಲ್ಲಿ ಮೈಸೂರು ರಂಗಾಯಣದ  ನಾಟಕ ‘ ಗೋರ್ ಮಾಟಿ’: ಬಂಜಾರ ಬದುಕಿನ ವಿಶೇಷ ರಂಗ ಪ್ರಯೋಗ

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಜೂನ್ 12 ಮತ್ತು 13 ರಂದು ಸಂಜೆ 6.45 ಕ್ಕೆ ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ  ರಂಗಾಯಣ ಮೈಸೂರು ತಂಡದಿಂದ ಗೋರ್ ಮಾಟಿ ಎಂಬ ಕನ್ನಡ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಬಂಜಾರ ಜನಾಂಗದ ಕಲೆ ಸಂಸ್ಕೃತಿ ಬದುಕು ಬವಣೆಗಳ ಸಂಕಥನಗಳಿಂದ ಕೂಡಿದ

ಮೂಡುಬಿದಿರೆ ತಾ.ಪಂ.ವತಿಯಿಂದ ಪರಿಸರ ದಿನಾಚರಣೆ

ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು.ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್ ೯ ಡಿ’ಸೋಜಾ, ತಾ.ಪಂ.ಸಿಬಂದಿ

ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ

ಮೂಡುಬಿದಿರೆ: ಬಹು ವಿರಳವಾದ ವ್ಯಕ್ತಿತ್ವವನ್ನು ಹೊಂದಿದ್ದ ಶಿವರಾಮ ಕಾರಂತರು ತಮಗೆ ಅನಿಸಿದ್ದನ್ನು, ಮನಸ್ಸಿಗೆ ಬಂದದನ್ನು ನೇರವಾಗಿ ಹೇಳುತ್ತಿದ್ದರಲ್ಲದೆ ವಿಮರ್ಶೆ ಮಾಡಿ ಜೀವನ ಮಾಡು ಎಂಬ ವಿಚಾರವನ್ನು ಬಿಟ್ಟು ಹೋದವರು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅವರು ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಮೂಡುಬಿದಿರೆ ಇದರ ವತಿಯಿಂದ ಮೂಡುಬಿದಿರೆ ಕನ್ನಡ ಭವನದ ಮಹಾಕವಿ ರತ್ನಾಕರ ವರ್ಣಿ ವೇದಿಕೆಯಲ್ಲಿ ನಡೆದ 2023ನೇ

ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ ಪ್ರಕಟ

ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನ ಕೊಡಮಾಡುವ ಶಿವರಾಮ ಕಾರಂತ ಪ್ರಶಸ್ತಿಗೆ ಕವಿ ಡಾ. ಚಿನ್ನಸ್ವಾಮಿ ಮೂಡ್ನಾಕೂಡು ಬೆಂಗಳೂರು, ಜಾನಪದ ವಿದ್ವಾಂಸ ಪ್ರೊ.ಕೃಷ್ಣಮೂರ್ತಿ ಹನೂರ, ಕನ್ನಡದ ಕೀಲಿಮಣೆ ವಿನ್ಯಾಸಕಾರ ಉಡುಪಿಯ ಕೆ.ಪಿ ರಾವ್ ಹಾಗೂ ಹೆಗ್ಗೋಡಿನ ನಿನಾಸಂ ಸಂಸ್ಥೆಗೆ ನೀಡಲು ಪ್ರತಿಷ್ಠಾನ ನಿರ್ಧರಿಸಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಡಾ.ಜಯಪ್ರಕಾಶ್ ಮಾವಿನಕುಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳ ಮಾರಾಟ: ಅಧಿಕಾರಿಗಳಿಂದ ತಪಾಸಣೆ

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳನ್ನು ವಾಹನಗಳಲ್ಲಿ ತಂದು ಮಾರಾಟ ಮಾಡುತ್ತಿದ್ದುದ್ದನ್ನು ಸಾರ್ವಜನಿಕರ ದೂರಿನ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳ ತಂಡವು ಶುಕ್ರವಾರ ಮೂಡುಬಿದಿರೆಯಲ್ಲಿ ತಪಾಸಣೆ ನಡೆಸಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಳೆದ ಕೆಲವು ಸಮಯಗಳಿಂದ ವಿವಿಧ ಹಣ್ಣುಗಳ ಸೀಸನ್ ಸಮಯದಲ್ಲಿ ವಾಹನದಲ್ಲಿ ತಂದು ಮೂಡುಬಿದಿರೆ ಪೇಟೆಯ ರಸ್ತೆ ಬದಿಗಳಲ್ಲಿ ನಿಲ್ಲಿಸಿ ಹಾಗೂ ಮಾರ್ಕೆಟ್ ನಲ್ಲಿ ಮಾರಾಟ ಮಾಡುತ್ತಿದ್ದರು. ರಾಸಾಯನಿಕ

ಮೂಡುಬಿದಿರೆ: ಪಂಜಿನ ಮೆರವಣಿಗೆಯೊಂದಿಗೆ ಮತದಾನದ ಜಾಗೃತಿ

ಮೂಡುಬಿದಿರೆ: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ್ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ತಾಲೂಕು ಕಛೇರಿ ನೇತೃತ್ವದಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸಹಾಯಕ ಚುನಾವಣಾಧಿಕಾರಿ ರಾಜು ಕೆ., ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, ಮೂಡುಬಿದಿರೆ ತಹಶೀಲ್ದಾರ್

ಮೂಡುಬಿದಿರೆ: ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ ನಿಧನ

ಮೂಡುಬಿದಿರೆ: ಇಲ್ಲಿನ ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ (94) ಪೇಪರ್ ಮಿಲ್ ಬಳಿ ತಮ್ಮ ನಿವಾಸದಲ್ಲಿ ಬುಧವಾರ ನಿಧನ ಹೊಂದಿದರು.ರಾಷ್ಟ್ರಭಾಷಾ ವಿಶಾರದರಾಗಿದ್ದ ಅವರು ಐದು ದಶಕಗಳಿಂದ ಬಸದಿಯ ಪುರೋಹಿತರಾಗಿ, ಬಸದಿಯಲ್ಲಿ ನಿಂತು ಹೋಗಿದ್ದ ರಥೋತ್ಸವವನ್ನುಮತ್ತೆ ಆರಂಭಿಸಿದ್ದರು. ನವರಾತ್ರಿ ಪೂಜೆ, ಲಕ್ಷಕುಂಕುಮಾರ್ಚನ ಸಪ್ತಾಹ ಸಹಿತ ವಿವಿಧ ಜೈನ ಧಾರ್ಮಿಕ ಆರಾಧನೆಗಳಲ್ಲಿ ಪುರೋಹಿತರಾಗಿ ಪಾಲ್ಗೊಂಡಿದ್ದರು.ಜೈನ ಧಾರ್ಮಿಕ ಆರಾಧನಾ

ಮೂಡುಬಿದಿರೆ: ಮೊದಲ ಮತ ಚಲಾಯಿಸಲಿರುವ ನೂತನ ಮತದಾರರಿಗೆ ಮತದಾನದ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ ಹಾಗೂ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕಿನ ಮಹಾವೀರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವು ಸೋಮವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟಚಲಪತಿ ಅವರು ಯುವ ವಿದ್ಯಾರ್ಥಿಗಳಿಗೆ ಮತದಾನ ತಮ್ಮ‌ಜೀವನದಲ್ಲಿ ಎಷ್ಟು

ಹೊಕ್ಕಾಡಿಗೋಳಿ : ವೀರ-ವಿಕ್ರಮ ಜೋಡುಕರೆ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: ಶ್ರೀ ಮಹಿಷಮರ್ಧಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ ನಡೆಯುವ ಶ್ರೀ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವನ್ನು ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳದ ಕರೆಗೆ ಪ್ರಸಾದ್ ಅರ್ಪಿಸಿ, ದೀಪ ಬೆಳಗಿಸುವ ಮೂಲಕ ಚಾಲನೆಯನ್ನು ನೀಡಿದರು.ನಂತರ ಮಾತನಾಡಿದ ಅವರು ಈ ಹಿಂದೆ ನಡೆಯುತ್ತಿದ್ದ ಕಂಬಳಗಳ ಸಂದರ್ಭದಲ್ಲಿ ಎಲ್ಲರೂ ಕಂಬಳಕ್ಕಾಗಿ ಕಾಯುತ್ತಿದ್ದ ಸಂದರ್ಭವಿತ್ತು ಆದರೆ ಈ ಬಾರಿಯ ಕಂಬಳವು ಎರಡೆರಡು ಕಡೆಗಳಲ್ಲಿ

ತೆಂಕಮಿಜಾರು ಗ್ರಾ.ಪಂ: ವಿಶೇಷ ಚೇತನರಿಗೆ ಚೆಕ್ ವಿತರಣೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂಚಾಯತ್ ನಲ್ಲಿ ಮಂಗಳವಾರ 2023-24ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ 49 ಮಂದಿ ವಿಶೇಷಚೇತನರಿಗೆ ತಲಾ 2000ದಂತೆ ರೂ 98000 ಚೆಕ್ಕನ್ನು ವಿತರಿಸಲಾಯಿತು.ವೆನ್ ಲಾಕ್ ಆಸ್ಪತ್ರೆಯ ಎಂಆರ್ ಡಬ್ಲ್ಯೂ ಜಯಪ್ರಕಾಶ್ ವಿಶೇಷ ಚೇತನರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.ಪಂಚಾಯತ್