Home Posts tagged moodabidre (Page 9)

ಮೂಡುಬಿದಿರೆ: ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ ನಿಧನ

ಮೂಡುಬಿದಿರೆ: ಇಲ್ಲಿನ ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ (94) ಪೇಪರ್ ಮಿಲ್ ಬಳಿ ತಮ್ಮ ನಿವಾಸದಲ್ಲಿ ಬುಧವಾರ ನಿಧನ ಹೊಂದಿದರು.ರಾಷ್ಟ್ರಭಾಷಾ ವಿಶಾರದರಾಗಿದ್ದ ಅವರು ಐದು ದಶಕಗಳಿಂದ ಬಸದಿಯ ಪುರೋಹಿತರಾಗಿ, ಬಸದಿಯಲ್ಲಿ ನಿಂತು ಹೋಗಿದ್ದ ರಥೋತ್ಸವವನ್ನುಮತ್ತೆ ಆರಂಭಿಸಿದ್ದರು. ನವರಾತ್ರಿ ಪೂಜೆ, ಲಕ್ಷಕುಂಕುಮಾರ್ಚನ ಸಪ್ತಾಹ ಸಹಿತ

ಮೂಡುಬಿದಿರೆ: ಮೊದಲ ಮತ ಚಲಾಯಿಸಲಿರುವ ನೂತನ ಮತದಾರರಿಗೆ ಮತದಾನದ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ ಹಾಗೂ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕಿನ ಮಹಾವೀರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವು ಸೋಮವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟಚಲಪತಿ ಅವರು ಯುವ ವಿದ್ಯಾರ್ಥಿಗಳಿಗೆ ಮತದಾನ ತಮ್ಮ‌ಜೀವನದಲ್ಲಿ ಎಷ್ಟು

ಹೊಕ್ಕಾಡಿಗೋಳಿ : ವೀರ-ವಿಕ್ರಮ ಜೋಡುಕರೆ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: ಶ್ರೀ ಮಹಿಷಮರ್ಧಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ ನಡೆಯುವ ಶ್ರೀ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವನ್ನು ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳದ ಕರೆಗೆ ಪ್ರಸಾದ್ ಅರ್ಪಿಸಿ, ದೀಪ ಬೆಳಗಿಸುವ ಮೂಲಕ ಚಾಲನೆಯನ್ನು ನೀಡಿದರು.ನಂತರ ಮಾತನಾಡಿದ ಅವರು ಈ ಹಿಂದೆ ನಡೆಯುತ್ತಿದ್ದ ಕಂಬಳಗಳ ಸಂದರ್ಭದಲ್ಲಿ ಎಲ್ಲರೂ ಕಂಬಳಕ್ಕಾಗಿ ಕಾಯುತ್ತಿದ್ದ ಸಂದರ್ಭವಿತ್ತು ಆದರೆ ಈ ಬಾರಿಯ ಕಂಬಳವು ಎರಡೆರಡು ಕಡೆಗಳಲ್ಲಿ

ತೆಂಕಮಿಜಾರು ಗ್ರಾ.ಪಂ: ವಿಶೇಷ ಚೇತನರಿಗೆ ಚೆಕ್ ವಿತರಣೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂಚಾಯತ್ ನಲ್ಲಿ ಮಂಗಳವಾರ 2023-24ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ 49 ಮಂದಿ ವಿಶೇಷಚೇತನರಿಗೆ ತಲಾ 2000ದಂತೆ ರೂ 98000 ಚೆಕ್ಕನ್ನು ವಿತರಿಸಲಾಯಿತು.ವೆನ್ ಲಾಕ್ ಆಸ್ಪತ್ರೆಯ ಎಂಆರ್ ಡಬ್ಲ್ಯೂ ಜಯಪ್ರಕಾಶ್ ವಿಶೇಷ ಚೇತನರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.ಪಂಚಾಯತ್

ಮೂಡುಬಿದಿರೆ: ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ: ಕಾಂಗ್ರೆಸ್‌ನಿಂದ ಪ್ರತಿಭಟನೆ ಆಕ್ರೋಶ

ಮೂಡುಬಿದಿರೆ: ಲೋಕಸಭೆಯಲ್ಲಿ 400 ಸದಸ್ಯ ಬಲ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆಂಬ ಹೇಳಿಕೆ ನೀಡಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಭಾವಚಿತ್ರಕ್ಕೆ ಪೊರಕೆಯಲ್ಲಿ ಹೊಡೆಯುವ ಮೂಲಕ ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ತಾಲೂಕು ಆಡಳಿತ ಸೌಧದ ಮುಂಭಾಗ ನಡೆದಿದೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ನಮ್ಮ ದೇಶಕ್ಕೆ ಬೇಕಾದಂತಹ ಸಂವಿಧಾನವನ್ನು ಬರೆದವರು

ಮೂಡುಬಿದಿರೆ :ಮಿಥುನ್ ರೈ ಭಾವಚಿತ್ರವಿದ್ದ ಫ್ಲೆಕ್ಸ್‌ಗೆ ಹಾನಿ

ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆಯಲಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಸ್ವಾಗತ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಮೂಡುಬಿದಿರೆ ಪರಿಸರದಲ್ಲಿ ಹಾಕಿರುವ ಫ್ಲೆಕ್ಸ್‌ಗಳನ್ನು ಯಾರೋ ದುಷ್ಕರ್ಮಿಗಳು ಹರಿದು ಹಾಕಿದ್ದಲ್ಲದೆ ಮಿಥುನ್ ರೈ ಪೋಟೋಕೆ ಹಾನಿ ಮಾಡಿದ್ದಾರೆ.   ಈ ಬಗ್ಗೆ  ಕಾಂಗ್ರೆಸ್ ಮುಖಂಡರು ಮೂಡುಬಿದಿರೆ  ಠಾಣೆಗೆ ದೂರು ನೀಡಿ  ಫ್ಲೆಕ್ಸ್

ಮೂಡುಬಿದಿರೆ : ಆಳ್ವಾಸ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಮೂಡುಬಿದಿರೆ : ‘ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ, ಮೌಲ್ಯ ಹಾಗೂ ಗೌರವವು ಅವಶ್ಯವಾಗಿದೆ. ಮಹಿಳೆಯರ ಆಶಯ ಪರಿಗಣಿಸದೇ ಯಾವುದೇ ಪ್ರಗತಿ ಸಾಧ್ಯವಿಲ್ಲ ಎಂಬುದನ್ನು ಪುರುಷರು ಅರಿತುಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ಹೇಳಿದರು.ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ -2024ರ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿವಿಧ ಸಂಘ -ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಳ್ವಾಸ್ ಕಾಲೇಜಿನ

ಮೂಡುಬಿದಿರೆ : ಮಧುಮೇಹ ಚಿಕಿತ್ಸಾ ತಜ್ಞ ಡಾ. ಎಂ.ವಿದ್ಯಾಧರ ಶೆಟ್ಟಿ ನಿಧನ

ಮೂಡು ಬಿದಿರೆ : ಮಧುಮೇಹ ಚಿಕಿತ್ಸಾ ತಜ್ಞ, ವೈದ್ಯರಾಗಿ ಐದು ದಶಕಗಳ ಸೇವೆ ಸಲ್ಲಿಸಿದ್ದ ಮೂಡುಬಿದಿರೆ ಮೂಲದ ಡಾ. ಎಂ. ವಿದ್ಯಾಧರ ಶೆಟ್ಟಿ (76 ವ) ಶನಿವಾರ ಮುಂಜಾವ ಮಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ಧಾರೆ. ಮಂಗಳೂರಿನ ವಿಜಯಾ ಕ್ಲೀನಿಕ್ ಬಳಿಕ ಮೂಡುಬಿದಿರೆಯ ಜಿ.ವಿ.ಪೈ ಆಸ್ಪತ್ರೆಯಲ್ಲಿ ಮುಖ್ಯ ಅಧೀಕ್ಷಕ ವೈದ್ಯರಾಗಿದ್ದ ಅವರು ಮಂಗಳೂರ ಬಳಿಕ ಮೂಡುಬಿದಿರೆಯಲ್ಲೂ ರೋಟರಿ ಕ್ಲಬ್ ವಿವಿಧ ಹುದ್ದೆಗಳಲ್ಲಿದ್ದು ಬಳಿ

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ ಪ್ರವೇಶಕ್ಕೆ 15,986 ವಿದ್ಯಾರ್ಥಿಗಳು ಹಾಜರು

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯು ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣ ಪಡೆಯಲು ರಾಜ್ಯದ ವಿದ್ಯಾರ್ಥಿಗಳಿಗೆ ಭಾನುವಾರದಂದು ಪ್ರವೇಶ ಪರೀಕ್ಷೆ ನಡೆಸಿದ್ದು ನಾಡಿನ ಮೂಲೆ ಮೂಲೆಯಿಂದ ವಿದ್ಯಾಗಿರಿಗೆ 15,986 ಹೆಚ್ಚಿನ ವಿದ್ಯಾರ್ಥಿಗಳು ಅವರ ಪೋಷಕರು, ಜತೆಗೂಡಿ ಆಗಮಿಸಿ ವಿದ್ಯಾಗಿರಿ ಮತ್ತು ಪುತ್ತಿಗೆಯಲ್ಲಿ ಪರೀಕ್ಷೆಯನ್ನು ಬರೆದಿದ್ದಾರೆ. ಪ್ರತೀ ವರ್ಷದಂತೆ ಈ ಬಾರಿಯೂ ತನ್ನ ಕನಸಿನ ನಾಡಿನ ಏಕೈಕ ಶೂನ್ಯ ಶುಲ್ಕದ ಕನ್ನಡ ಮಾಧ್ಯಮ ಶಾಲೆಗೆ ಉಚಿತ ದಾಖಲಾತಿ

ಅಯೋಧ್ಯೆಯಲ್ಲಿ ಪಲ್ಲಕಿ ಸೇವೆಗೈದ ಮೂಡುವೇಣುಪುರದೊಡೆಯನ ಸೇವಕರು

ಮೂಡುಬಿದಿರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲ ಪೂಜೆ ಮತ್ತು ಉತ್ಸವದಲ್ಲಿ, ಮೂಡುಬಿದಿರೆ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹನುಮಂತ ದೇವಸ್ಥಾನದ ಸ್ವಯಂಸೇವಕರ ತಂಡ ನಿರಂತರ 3 ದಿನಗಳ ಕಾಲ ಪಲ್ಲಕ್ಕಿ ಹೊರುವ ಸೇವೆಯಲ್ಲಿ ಪಾಲ್ಗೊಂಡರು. ಮದ್ವ ನವಮಿ ಶುಭ ಸಂದರ್ಭದಲ್ಲಿ ಮೂಲ ಮೂರ್ತಿ ಶ್ರೀ ಬಾಲ ರಾಮನಿಗೆ ಭೋಗ ನೈವೇದ್ಯವನ್ನು ನೀಡುವ ಅವಕಾಶವನ್ನೂ ಪಡೆದು