Home Posts tagged #moodabidre (Page 15)

ಮೂಡುಬಿದಿರೆಯ ವಾಲ್ಪಾಡಿಯಲ್ಲಿ ಸೋಣದ ಕೋಲ

ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ವಾಲ್ಪಾಡಿ ಗ್ರಾಮದಲ್ಲಿ ಶ್ರೀ ರಾಜಂದೈವ ಮತ್ತು ಬ್ರಹ್ಮ ಬೈದರ್ಕಳ ದೈವಸ್ಥಾನ ಇಲ್ಲಿ ಮಂಗಳವಾರ ಕೊಡಮಣಿತ್ತಾಯ ಮತ್ತು ಕುಕ್ಕಿನಂತ್ತಾಯ ದೈವಗಳಿಗೆ ಸೋಣದ ಕೋಲ ನಡೆಯಿತು. ಸುಮಾರು 105 ವರ್ಷಗಳ ಇತಿಹಾಸವಿರುವ ಈ ದೈವಸ್ಥಾನವನ್ನು ಏಳ್ನಾಡು ಗುತ್ತಿನವರು ಕಟ್ಟಿ ಬೆಳೆಸಿದ್ದರು. ನಂತರ ನಾಗಣ್ಣ ಹೆಗ್ಡೆ ಅವರ

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ : ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ಪ್ರತಿಯೊಬ್ಬ ಮಗುವಿನಲ್ಲೂ ಅದರದ್ದೇ ಆದ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರಗೆಳೆಯುವ ಪ್ರಯತ್ನವನ್ನು ಶಿಕ್ಷಕರು ಮಾಡಬೇಕಾಗಿದೆ. ನಮ್ಮ ಉಸಿರು ಇರುವವರೆಗೆ ನಾವು ವಿದ್ಯಾರ್ಥಿಗಳೇ. ಹಾಗಾಗಿ ನಾವು ನಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಿದಾಗ ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡಿದಂತ್ತಾಗುತ್ತದೆ. ಅಲ್ಲದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್

ಮೂಡುಬಿದಿರೆ ಗಣೇಶೋತ್ಸವ ಶೋಭಾಯಾತ್ರೆ : ತೆಂಗಿನ ಗೆರಟೆಯಲ್ಲಿ ಕಷಾಯ ಸೇವನೆ

ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಉತ್ತಮ ಆರೋಗ್ಯದ ದೃಷ್ಠಿಯಿಂದಲೋ ಅಥವಾ ಆರ್ಥಿಕವಾಗಿ ಹಿಂದುಳಿದುದರಿಂದ ಗ್ಲಾಸ್ ಅಥವಾ ಸ್ಟೀಲ್ ಲೋಟಗಳನ್ನು ತೆಗೆದುಕೊಳ್ಳಲು ಅಸಹಾಯಕರಾಗಿರುವುದರಿಂದಲೋ ಏನೋ ತೆಂಗಿನ ಗೆರಟೆಯಲ್ಲಿಯೇ ಚಹಾ, ನೀರು ಅಥವಾ ಆಹಾರ ಪದಾರ್ಥಗಳನ್ನು ಸೇವಿಸುತ್ತಿದ್ದರು. ನಂತರದ ದಿನಗಳಲ್ಲಿ ನಾವು ಅಭಿವೃದ್ಧಿ ಹೊಂದುತ್ತಿದ್ದಂತೆ ಪ್ಲಾಸ್ಟಿಕ್ ಲೋಟ, ಸ್ಟೀಲ್ ಲೋಟ ಮತ್ತು ಪೇಪರ್ ಲೋಟಗಳಿಗೆ ಮಾರು ಹೋದೆವು. ಆದರೆ ಇದೀಗ ಮತ್ತೆ ನಾವು ಹಿಂದಿನ ಕಾಲದತ್ತ ಮುಖ

ಮೂಡುಬಿದರೆ: ಮನೆಗೆ ನುಗ್ಗಿ ಮಹಿಳೆಗೆ ತಲವಾರು ಝಳಪಿಸಿ ಕರಿಮಣಿ ಸರ ದರೋಡೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಬಡಗ ಮಿಜಾರು ಗ್ರಾಮದ ಬೇರಿಂಜೆಯ ಮನೆಯೊಂದಕ್ಕೆ ಮುಸುಕುಧಾರಿ ವ್ಯಕ್ತಿಗಳಬ್ಬರು ನುಗ್ಗಿ ತಲವಾರು ಝಳಪಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ. ಸ್ಥಳೀಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ದುಡಿಯುತ್ತಿರುವ ಕಮಲ ಶೆಟ್ಟಿ ದರೋಡೆಗೊಳಗಾದ ಮಹಿಳೆ ಇವರ ಇಬ್ಬರು ಗಂಡು ಮಕ್ಕಳು ಮೃತಪಟ್ಟಿದ್ದು, ಪತಿ ಕಳೆದ ವರ್ಷ ನಿಧನ ಹೊಂದಿದ್ದರು.

ಮೂಡುಬಿದಿರೆಯಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೂಡುಬಿದಿರೆ ಮತ್ತು ಸಂತ ಥೋಮಸ್ ವಿದ್ಯಾ ಸಂಸ್ಥೆ ಆಲಂಗಾರು ಇವುಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಅಬಾಲ್ ಪಂದ್ಯಾಟವು ಆಲಂಗಾರು ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ದೀಪ ಬೆಳಗಿಸಿ, ವಾಲಿಬಾಲ್‍ನ್ನು ರಿಬ್ಬನ್‍ನಿಂದ

ಮೂಡುಬಿದರೆಯಲ್ಲಿ ಬೋರುಗುಡ್ಡೆಯಲ್ಲಿ ಸಂಜೀವಿನಿ ಮಾಸಿಕ ಸಂತೆ

ಮೂಡುಬಿದಿರೆ: ತಾವು ಮನೆಯಲ್ಲಿ ಬೆಳೆಸಿದ ತರಕಾರಿಗಳಾದ ಬಸಳೆ, ಹೀರೆಕಾಯಿ, ಸೌತೆಕಾಯಿ, ಅಮಟೆಕಾಯಿ, ಬಾಳೆಕಾಯಿ, ಸ್ವ ಉದ್ಯೋಗಕ್ಕಾಗಿ ತಯಾರಿಸಿದ ಉಪ್ಪಿನಕಾಯಿ, ಹಿಡಿಸೂಡಿಯ ಕಟ್ಟುಗಳು, ಬೀಳುಗಳಿಂದ ತಯಾರಿಸಿದ ಬುಟ್ಟಿಗಳು, ತೆಂಗಿನ ಗೆರಟೆಯನ್ನು ಬಳಸಿ ಮಾಡಿದ ಸೌಟುಗಳು, ವೇಸ್ಟ್ ಬಟ್ಟೆಗಳನ್ನು ಬಳಸಿ ಮಾಡಿದ ಬಣ್ಣ ಬಣ್ಣದ ಕಾಲು ಒರೆಸುವ ಬಟ್ಟೆಗಳು, ತಿಂಡಿ-ತಿನಿಸುಗಳು, ಮಾರಾಟಗಳೊಂದಿಗೆ ಮಹಿಳೆಯರು ಭರ್ಜರಿ ವ್ಯಾಪಾರ-ವಹಿವಾಟನ್ನು ಮಾಡುವ ಮೂಲಕ ಸ್ವಾವಲಂಬಿಗಳಾಗಿ

ಮೂಡುಬಿದರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೂಡುಬಿದಿರೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ

ಮೂಡಬಿದ್ರಿ ಅಡಿಕೆ ಬೆಳೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮ

ಸಮೃದ್ಧಿ (ರಿ) ಮೂಡಬಿದ್ರಿ ಹಾಗೂ ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಇಂದು ಮೂಡಬಿದ್ರಿಯಲ್ಲಿ ನಡೆದ ಅಡಿಕೆ ಬೆಳೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಭಾಗವಹಿಸಿ ಶುಭಹಾರೈಸಿದರು

ಜಿಲ್ಲಾ ಕಂಬಳ ಸಮಿತಿಯನ್ನು ಹೈಜಾಕ್ ಆರೋಪ : ಕಂಬಳ ಸಮಿತಿಯ ಅಧ್ಯಕ್ಷ ರೋಹಿತ್ ಹೆಗ್ಡೆ ರಾಜೀನಾಮೆಗೆ ಪಟ್ಟು

ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯನ್ನು ಹೈಜಾಕ್ ಮಾಡಿ ಗುಣಪಾಲ ಕಡಂಬರ ಕಂಬಳ ಅಕಾಡೆಮಿಯನ್ನು ಫೋಕಸ್ ಮಾಡಲಾಗುತ್ತಿದೆ. ಸುಕುಮಾರ್ ಶೆಟ್ಟಿ, ಚಂದ್ರ ಆಳ್ವ, ಪಾಟಿಲ ಭಾಸ್ಕರ್ ಕೋಟ್ಯಾನ್, ಶಾಂತರಾಮ ಶೆಟ್ಟಿ, ನವೀನ್, ಸತೀಶ್ಚಂದ್ರ ಸಾಲ್ಯಾನ್ ಅವರಂತಹ ಹಿರಿಯ ಯಜಮಾನರು ಅಕಾಡೆಮಿ ಅಧ್ಯಕ್ಷರ ಏಕಪಕ್ಷೀಯ ನಿರ್ಧಾರಗಳನ್ನು ಸಹಿಸಿಕೊಂಡಿರುವುದು ಅಚ್ಚರಿ ಮೂಡಿಸುತ್ತಿದೆ. ಜಿಲ್ಲಾ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ

ಮಾರ್ಚ್ ಒಳಗಡೆ ಕಂಬಳಕೂಟ ಮುಕ್ತಾಯಕ್ಕೆ ನಿರ್ಧಾರ

ಮೂಡುಬಿದಿರೆ: 24 ಗಂಟೆಯೊಳಗಡೆ ಕಂಬಳ ಮುಗಿಸುವುದು, ರೆಫ್ರಿಗಳಿಗೆ ಭದ್ರತೆ, ವ್ಯವಸ್ಥಾಪಕರಿಂದ ಸೂಕ್ತ ವ್ಯವಸ್ಥೆ, ಕೋಣಗಳನ್ನು ಕಟ್ಟುವ ವ್ಯವಸ್ಥೆ, ವ್ಯವಸ್ಥಿತ ಕಂಬಳವನ್ನು ಆಯೋಜಿಸುವ ಬಗ್ಗೆ ಹಾಗೂ ನವೆಂಬರ್ ತಿಂಗಳಿನಲ್ಲಿ ಪ್ರಾರಂಭಗೊಳ್ಳುವ ಕಂಬಳಕೂಟಗಳನ್ನು ಕೋಣಗಳ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ವರ್ಷದ ಮಾರ್ಚ್ನೊಳಗಡೆ ಮುಕ್ತಾಯಗೊಳಿಸುವ ಕುರಿತು ಸಮಾಜಮಂದಿರದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು