Home Posts tagged #moodabidre (Page 2)

ಮೂಡುಬಿದಿರೆ : ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ಸ್ಪಂದಿಸಿದ ನೇತಾಜಿ ಬ್ರಿಗೇಡ್

ಮೂಡುಬಿದಿರೆ : ನೇತಾಜಿ ಬ್ರಿಗೇಡ್ ಮೂಡುಬಿದಿರೆ ವತಿಯಿಂದ ಮೂಡುಬಿದಿರೆಯ “ಕೋಟಿ – ಚೆನ್ನಯ್ಯ” ಜೋಡುಕರೆ ಕಂಬಳದಲ್ಲಿ ನಡೆದ 14ನೇ ಸೇವಾ ಯೋಜನೆಯಲ್ಲಿ ಸಂಗ್ರಹವಾದ ರೂ.1,34,894 ಧನವನ್ನು ಆಯ್ದ 5 ಮಂದಿ  ಫಲಾನುಭವಿಗಳಿಗೆ  ಸ್ವರಾಜ್ಯ ಮೈದಾನದ ಬಳಿ ಇರುವ ಶ್ರೀ ಆದಿಶಕ್ತಿ ಮಹಾಮ್ಮಾಯಿ ದೇವಸ್ಥಾನ ಮಾರಿಗುಡಿ ಬಳಿ ಹಸ್ತಾಂತರಿಸಲಾಯಿತು. ಕಣ್ಣಿನ

ಮೂಡುಬಿದಿರೆ: ಆಳ್ವಾಸ್ ವಿರಾಸ್-2023ರ ಮಾಧ್ಯಮ ಕೇಂದ್ರ ಉದ್ಘಾಟನೆ

ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್‌ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ  ಮಾತನಾಡಿದ ಅವರು  ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು  ಹೊಂದಿದೆ. ವಿರಾಸತ್ ಯಶಸ್ಸಿನಲ್ಲಿ ಮಾಧ್ಯಮದ ಪಾತ್ರ ಮಹತ್ತರವಾದುದು ಎಂದರು. ವನ್ಯಜೀವ ಛಾಯಾಗ್ರಾಹಕ,

ಮೂಡುಬಿದಿರೆ: ಮೈಸೂರು ವಿಭಾಗೀಯ ಮಟ್ಟದ ಜಾನಪದ ಕಲಾ ತಂಡಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ “ಮೈಸೂರು ವಿಭಾಗೀಯ ಮಟ್ಟದ ಜಾನಪದ ಕಲಾ ತಂಡಗಳ ತರಬೇತಿ ಕಾರ್ಯಗಾರ”ವು ವಿದ್ಯಾಗಿರಿಯ ಶ್ರೀಮತಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ಗುರುವಾರ ಆರಂಭಗೊಂಡಿತು. ಮೈಸೂರು ವಿಭಾಗದ ಆ.ಕು.ಕ.ಸೇವೆಯ ವಿಭಾಗೀಯ ಜಂಟಿ‌ ನಿರ್ದೇಶಕಿ ಡಾ.ರಾಜೇಶ್ವರಿ ದೇವಿ

ಮೂಡುಬಿದಿರೆ: ವಿಶೇಷ ಚೇತನರ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ದ.ಕ ಜಿಪಂ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವುಗಳ ಸಹಯೋಗದೊಂದಿಗೆ ಸ್ವರಾಜ್ಯ ಮೈದಾನದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ವಿಶೇಷ ಸಾಮಥ್ರ್ಯದ ಮಕ್ಕಳ ಕ್ರೀಡಾ ಕೂಟಕ್ಕೆ ಮೂಡುಬಿದಿರೆ ರೋಟರಿ ಕ್ಲಬ್‍ನ ಅಧ್ಯಕ್ಷ ನಾಗರಾಜ್ ಬಿ.ಚಾಲನೆಯನ್ನು ನೀಡಿದರು.

ಮೂಡುಬಿದಿರೆ: ದ.ಕ. ಜಿಲ್ಲಾಮಟ್ಟದ ಕ್ರೀಡಾಕೂಟ, ಕಡಬದ ಚರಿಷ್ಮಾ ಕೂಟ ದಾಖಲೆ

ಮೂಡುಬಿದಿರೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದ 1500 ಮತ್ತು 3000 ಕಿ.ಮೀ ಓಟದಲ್ಲಿ ಪುತ್ತೂರು ತಾಲೂಕಿನ ಕಡಬ ಸ.ಪ.ಪೂ.ಕಾಲೇಜಿನ ಚರಿಷ್ಮಾ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ. ಎಡಪದವು ಪ.ಪೂ.ಕಾಲೇಜಿನ ಸೌಮ್ಯ ಕೆ.ಪಿ ಅವರು 2004ರಲ್ಲಿ 5:01.70 ಸೆಕುಂಡು ನಲ್ಲಿ ಕ್ರಮಿಸಿ ಮಾಡಿರುವ ದಾಖಲೆಯನ್ನು ಚರಿಷ್ಮಾ ಅವರು 4:53.9 ಸೆಕುಂಡಿನಲ್ಲಿ ಕ್ರಮಿಸುವ ಮೂಲಕ ಹಾಗೂ 3000 ಓಟದಲ್ಲಿ 10:44.7 ಸೆಕುಂಡಿನಲ್ಲಿ

ಮೂಡುಬಿದಿರೆ: ಅಗ್ನಿಶಾಮಕ ಠಾಣೆಯಲ್ಲಿ ಆಯುಧ ಪೂಜೆ

ಮೂಡುಬಿದಿರೆ ಒಂಟಿಕಟ್ಟೆ ಕಡಲಕೆರೆ ಬಳಿ ಇರುವ ತಾಲೂಕು ಅಗ್ನಿಶಾಮಕ ಠಾಷೆಯಲ್ಲಿ ಸೋಮವಾರ ಆಯುಧ ಪೂಜೆ ಮತ್ತು ವಾಹನ‌ಪೂಜೆ ನಡೆಯಿತು.ಆಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಪ್ರಸಾದ್ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಸಿಬಂಧಿ ವರ್ಗ ಹಾಗೂ ಊರವರು ಈ ಸಂದರ್ಭದಲ್ಲಿದ್ದರು.

ಮೂಡುಬಿದಿರೆ:ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್ ಚಾಂಪಿಯಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಮತ್ತು ಮಹಿಳಾ ತಂಡಗಳು ಸಮಗ್ರ ಪ್ರಶಸ್ತಿ ಪಡೆದಿದೆ. ಪುರುಷರ ವಿಭಾಗದಲ್ಲಿ ಒಟ್ಟು 6 ಚಿನ್ನ 3 ಬೆಳ್ಳಿ, ಒಂದು ಕಂಚಿನ ಪದಕ ಪಡೆದರೆ, ಮಹಿಳಾ ವಿಭಾಗದಲ್ಲಿ ಒಟ್ಟು 5 ಚಿನ್ನ, 5 ಬೆಳ್ಳಿ ಪಡೆದು ತಂಡ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್‌ನ ಉಷಾ ಎಸ್.ಆರ್ 87 ಕೆ.ಜಿ ದೇಹತೂಕ ವಿಭಾಗದಲ್ಲಿ ಬೆಸ್ಟ್ ಲಿಫ್ಟರ್ ಪ್ರಶಸ್ತಿಗೆ ಭಾಜನರಾದರು. ಕ್ರೀಡಾಪಟುಗಳ

ಮೂಡುಬಿದಿರೆ: ಆಟೋ ರಿಕ್ಷಾ-ಬಸ್ ಮುಖಾಮುಖಿ ಡಿಕ್ಕಿ : ವೃದ್ಧೆ ಸಾವು

ಮೂಡುಬಿದಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ಸು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಮೃತಪಟ್ಟ ಸಂಪಿಗೆಯಲ್ಲಿ ನಡೆದಿದೆ. ಸುರತ್ಕಲ್ ನ ಆಲಿಯಮ್ಮ (76) ಮೃತಪಟ್ಟ ವೃದ್ಧೆ. ಮೂಡುಬಿದಿರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುರತ್ಕಲ್‌ನಿಂದ ಬೀಪಾತಿಮ್ಮ, ಆಯೀಷಾ ಹಾಗೂ ಆಲಿಯಮ್ಮ ಎಂಬವರು ಬರುತ್ತಿದ್ದ ಸಂದರ್ಭದಲ್ಲಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಸಂಪಿಗೆಯಲ್ಲಿ ಮೂಡುಬಿದಿರೆಯಿಂದ

ಮೂಡುಬಿದಿರೆ: ಗಾಂಜಾ ಮಾರಾಟ, ಮೂವರು ಪೊಲೀಸರ ವಶಕ್ಕೆ

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ವಶಕ್ಕೆ ಪಡೆದುಕೊಂಡಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22 ವ), ಫರ್ಹಾನ್ ಖಾನ್ (18ವ) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು ಮೂವರು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದು ಖಚಿತ

ಮೂಡುಬಿದಿರೆ: ನೀರುಡೆ ನಿವಾಸಿ ಓಲ್ವಿನ್ ಪಿಂಟೋ ನಾಪತ್ತೆ

ಮೂಡುಬಿದಿರೆ: ತಾಲೂಕಿನ ನಿಡ್ಡೋಡಿ ಗ್ರಾ. ಪಂ ವ್ಯಾಪ್ತಿಯ ನೀರುಡೆ ನಿವಾಸಿ ಓಲ್ವಿನ್ ಪಿಂಟೋ(59) ಅವರು ಸೆ.8ರಿಂದ ನಾಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 3 ವರ್ಷಗಳ ಹಿಂದೆ ಮಂಗಳೂರು ತಲಪಾಡಿಯಲ್ಲಿ ಹಾಸ್ಟೇಲ್ ಒಂದರಲ್ಲಿ ಕೆಲಸ ಮಾಡುಕೊಂಡಿದ್ದವರು, ಇತ್ತೀಜೆಗೆ ಮನೆಗೆ ಬಂದು ಕೃಷಿ ಕೆಲಸ ಮಾಡುತ್ತಿದ್ದರು. ಸೆ.8 ರಂದು ಸಂಜೆ 4.30 ಕ್ಕೆ ಮನೆಯಲ್ಲಿ ತನ್ನ ಮೊಬೈಲ್ ಬಿಟ್ಟು ಮನೆಯಿಂದ ಹೊರಗೆ ಹೋದವರು ಮತ್ತೆ ಮರಳಿ ಮನೆಗೆ ಬಾರದೇ