Home Posts tagged #moodbidri (Page 2)

ಮೂಡುಬಿದಿರೆ: ಸುಸಜ್ಜಿತವಾದ ಪೊಲೀಸ್ ಠಾಣೆ, ಮೈನ್ ಶಾಲೆಗಳಿಗೆ ಕಟ್ಟಡಗಳ ಬೇಡಿಕೆ

ಮೂಡುಬಿದಿರೆಯ ಆರಕ್ಷಕರ ಠಾಣೆಯು ಸುಸಜ್ಜಿತವಾಗಿಲ್ಲ, ಪೊಲೀಸರಿಗೆ ಬೇಕಾಗುವ ಮೂಲಭೂತವಾದ ವ್ಯವಸ್ಥೆ ಸರಿಯಾಗಿಲ್ಲ, 60 ಸಿಬಂದಿಗಳ ಅವಶ್ಯಕತೆ ಇರುವ ಠಾಣೆಯಲ್ಲಿ ಕೇವಲ 40 ಸಿಬಂದಿಗಳಷ್ಟೇ ಇದ್ದಾರೆ, ಇದರಿಂದಾಗಿ ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಶಾಸಕರ ಗಮನಕ್ಕೆ ತಂದರು.

ಮೂಡುಬಿದಿರೆ: ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ : ಎಡಪದವು ವಿವೇಕಾನಂದ ಪ.ಪೂ ಕಾಲೇಜಿನ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ

ಮೂಡುಬಿದಿರೆ: ಇಂಟರ್‌ನ್ಯಾಷನಲ್ ಫ್ಲೋರ್ ಬಾಲ್ ಫೆಡರೇಶನ್ ಹಾಗೂ ಫ್ಲೋರ್ ಬಾಲ್ ಅಸೋಸಿಯೇಷನ್ ತಮಿಳುನಾಡು ಮತ್ತು ಫಿಟ್ ಇಂಡಿಯಾ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಜ.25-28 ವರೆಗೆ ನಡೆದ 17ನೇ ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ 2023-24ರಲ್ಲಿ ಕರ್ನಾಟಕ ತಂಡವು ಜಯಗಳಿಸಿದ್ದು, ಈ ತಂಡದಲ್ಲಿ ಎಡಪದವು ಸ್ವಾಮಿ ವಿವೇಕಾನಂದ ಪ.ಪೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಆಟವಾಡಿದ್ದು ಅವರನ್ನು ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ

ಮೂಡುಬಿದಿರೆ: ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : ಆಳ್ವಾಸ್ ನ ಉಷಾಗೆ ಬೆಳ್ಳಿ ಪದಕ

ಮೂಡುಬಿದಿರೆ: ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಉಷಾ ಎಸ್.‌ ಆರ್‌ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಸ್ನಾಚ್ ವಿಭಾಗದಲ್ಲಿ 91 ಕೆ.ಜಿ, ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ118 ಕೆ.ಜಿ ಒಟ್ಟು 209 ಕೆಜಿ ಭಾರ ಎತ್ತಿದ್ದಾರೆ. ಕರ್ನಾಟಕ ರಾಜ್ಯ ದಾಖಲೆ ಆಗಿದೆ. 87 ಕೆ.ಜಿ ತೂಕದ ವಿಭಾಗದಲ್ಲಿ ಸ್ವರ್ಧಿಸಿದ್ದರು.

ಮೂಡುಬಿದಿರೆ: ಅಂಚೆ ಪಾಲಕ ಅಶೋಕ್ ವಿರುದ್ಧ ವಂಚನೆ ದೂರು ದಾಖಲು

ಮೂಡುಬಿದಿರೆ: ಮೂರು ವರ್ಷಗಳ ಹಿಂದೆ ಕಡಂದಲೆ ಗ್ರಾಮೀಣ ಅಂಚೆ ಕಚೇರಿಯಲ್ಲಿ ಗ್ರಾಹಕರ ಸುಮಾರು ರೂ 13.50 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಅಂಚೆ ಪಾಲಕ ಅಶೋಕ್ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ.2010ರಿಂದ 2021ರ ಅವಧಿಯಲ್ಲಿ ಅಶೋಕ್ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಸುಮಾರು 22 ಅಂಚೆ ಗ್ರಾಹಕರ ಉಳಿತಾಯ ಖಾತೆ ಮತ್ತು 4 ಗ್ರಾಹಕರ ವಿವಿಧ ವಿಮಾ ಪಾಲಿಸಿಗಳ ಸುಮಾರು 13.50 ಲಕ್ಷ ಹಣವನ್ನು

ಮೂಡುಬಿದಿರೆ: ಕಿಡ್ನಿ ವೈಫಲ್ಯ, ಚಿಕಿತ್ಸೆಗೆ ಸ್ಪಂದಿಸಿದ ಸಾಯಿ ಮಾರ್ನಾಡ್ ಸೇವಾ ಸಂಘ

ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಾರ್ಪಾಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಸತೀಶ್ ಪೂಜಾರಿ ಅವರಿಗೆ ಡಯಾಲಿಸಿಸ್ ನ ವೆಚ್ಚಕ್ಕಾಗಿ ಸಾಯಿ ಮಾರ್ನಾಡ್ ಸೇವಾ ಸಂಘ(ರಿ) ರೂ.10,000 ಸಹಾಯಧನವನ್ನು ನೀಡಿ ಸ್ಪಂದಿಸಿದೆ.    ಸತೀಶ್ ಅವರ ಎರಡೂ ಕಿಡ್ನಿಗಳು ವೈಫಲ್ಯ ಹೊಂದಿದ್ದು ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಬೇಕಾಗಿದ್ದು ಒಮ್ಮೆಗೆ ಚಿಕಿತ್ಸೆಗೆ 3ರಿಂದ 4 ಸಾವಿರದಷ್ಟು ವೆಚ್ಚವಾಗುತ್ತದೆ. ತೀರ ಬಡತನದಲ್ಲಿರುವ ಈ ಕುಟುಂಬಕ್ಕೆ ಚಿಕಿತ್ಸೆಯ

ಮೂಡುಬಿದಿರೆ: ಪ್ರೇಮ್ ಬಹದ್ದೂರ್ ನಿಧನ

ಮೂಡುಬಿದಿರೆ: ಕಳೆದ 25 ವರ್ಷಗಳಿಂದ ರೋಟರಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೇಪಾಳ ಮೂಲದ, ಹುಡ್ಕೋ ನಿವಾಸಿ ಪ್ರೇಮ್ ಬಹದ್ದೂರ್ (65) ಹೃದಯಾಘಾತದಿಂದ ನಿಧನರಾಗಿದ್ದಾರೆ.    ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.  ಬಹದ್ದೂರು ಅವರಿಗೆ ಪತ್ನಿ, ಓರ್ವ ಪುತ್ರ

ಮೂಡುಬಿದಿರೆ: ಪಾರ್ಕಿಂಗ್ ಅವ್ಯವಸ್ಥೆ-ಅಧಿಕಾರಿಗಳ ಸಭೆ 

ಮೂಡುಬಿದಿರೆ : ಮಂಗಳೂರಿನಿಂದ-ಕಾರ್ಕಳಕ್ಕೆ ಸಂಚಾರ ಮಾಡುವ ಎಕ್ಸ್ ಪ್ರೆಕ್ಸ್ ಮತ್ತು ಖಾಸಗಿ ಬಸ್ಸುಗಳು ಸಮಯಕ್ಕೆ ಸರಿಯಾಗಿ  ಸೂಚಿತ ನಿಲ್ದಾಣದಲ್ಲಿ ಮಾತ್ರ ನಿಲುಗಡೆಗೊಳಿಸಬೇಕು.  ನಿಗದಿ ಪಡಿಸಿರುವ ವೇಳಾಪಟ್ಟಿಯಂತೆ ಸಂಚರಿಸಬೇಕು. ಬಸ್ ಚಾಲಕರು ಮತ್ತು ನಿರ್ವಾಹಕರುಗಳು ಸಾರ್ವಜನಿಕರು, ವಿದ್ಯಾರ್ಥಿಗಳೊಂದಿಗೆ ರೌಡಿಸಂ ತೋರಿಸಬೇಡಿ ಬದಲಾಗಿ  ಮೃದುವಾಗಿ ವರ್ತಿಸಿ ತಪ್ಪಿದರೆ ಸಾರ್ವಜನಿಕರು ನಿಯಮ ಉಲ್ಲಂಘನೆ ಮಾಡುವ ಬಸ್‌ಗಳ ಬಗ್ಗೆ ಸ್ಪಷ್ಟ ಮಾಹಿತಿ, ದಾಖಲೆ ಸಹಿತ ದೂರು

ಮೂಡುಬಿದರೆ: ಆಳ್ವಾಸ್ ವಿರಾಸತ್ – ಸಪ್ತ ಮೇಳಗಳನ್ನು ಉದ್ಘಾಟಿಸಿದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ

ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,

ಮೂಡುಬಿದಿರೆ: ಹಿರಿಯ ಆಟೋ ಚಾಲಕ ಗುರುವಪ್ಪ ಪೂಜಾರಿ ನಿಧನ

ಮೂಡುಬಿದಿರೆ: ಕಳೆದ ಹಲವಾರು ವರ್ಷಗಳಿಂದ ಮೂಡುಬಿದಿರೆಯಲ್ಲಿ ಹಿರಿಯ ಅಟೋ ಚಾಲಕರಾಗಿ, ರಂಗಕಲಾವಿದರಾಗಿ ಗುರುತಿಸಿಕೊಂಡಿದ್ದ ಒಂಟಿಕಟ್ಟೆಯ ಗುರುವಪ್ಪ ಪೂಜಾರಿ ಗುರುವಪ್ಪ ಪೂಜಾರಿಒಂಟಿಕಟ್ಟೆಯ ಗುರುವಪ್ಪ ಪೂಜಾರಿ(68)ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು.ಮೂಡುಬಿದಿರೆಯಲ್ಲಿ ಸುಮಾರು 45 ವರ್ಷಗಳಿಂದ ರಿಕ್ಷಾ ಚಾಲಕರಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಹಲವು ತುಳು ನಾಟಕಗಳಲ್ಲಿ ಅಭಿನಯಿಸಿದ್ದ ಅವರು ಸಾಂಸ್ಕೃತಿಕ, ಧಾರ್ಮಿಕ

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ (೨೧) ಆತ್ಮಹತ್ಯೆ ಮಾಡಿಕೊಂಡಾತ.ಹೆತ್ತವರು ಮನೆಯಲ್ಲಿ ಚನ್ನಾಗಿ ಓದುವಂತೆ ಬುದ್ಧಿಮಾತು ಹೇಳಿದ್ದು, ಅದರಂತೆ ಸಾತ್ವಿಕ್