ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು
ಮೂಡುಬಿದಿರೆ : ಕಳೆದ ಐದು ವಷ೯ಗಳ ಹಿಂದೆ ಆಳ್ವಾಸ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಚೇತನ್ ಎಂಬವನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆಗೈದ ಆರೋಪಿ ಚಿದಾನಂದ ಪರಶುನಾಯ್ಕಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಆಳ್ವಾಸ್ ಕ್ಯಾಂಟೀನ್ ನಲ್ಲಿ 2020 ರ ಅಕ್ಟೋಬರ್ 30 ರಂದು ಈ ಪ್ರಕರಣ ನಡೆದಿತ್ತು. ಚಿದಾನಂದ ಮತ್ತು ಚೇತನ್ ಎಂಬವರು ಆಳ್ವಾಸ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸದ
ಮೂಡುಬಿದಿರೆ :ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾ ಅಧೀನದಲ್ಲಿ ನಡೆಯುತ್ತಿರುವ ಶ್ರೀ ರಾಮ ದಿಗ್ವಿಜಯ ರಥಯಾತ್ರೆಯು ಮಂಗಳೂರಿನ ಮಂಗಲರಾಮ ಜಪಕೇಂದ್ರದಿಂದ ಬುಧವಾರ ಮೂಡುಬಿದಿರೆಗೆ ಆಗಮಿಸಿತು. ಆಗಮಿಸಿದ ರಥವನ್ನು ಭಜಕರು ಹನುಮಂತ ದೇವಳದ ಎದುರು ಪೂರ್ಣಕುಂಭ, ಮಂಗಳವಾದ್ಯ, ಭಜನೆ ಸಂಕೀರ್ತನೆಯೊಂದಿಗೆ ವೆಂಕಟರಮಣ ದೇವಳದ ಎದುರು ಬರಕೊಂಡರು. ಮೂಡುವೇಣುಪುರದ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ವಿದ್ಯಾನಿಧಿ ಜಪ ಕೇಂದ್ರದಲ್ಲಿ ರಥವನ್ನು
ಮೂಡುಬಿದಿರೆ: ಗದಗದಲ್ಲಿ ನಡೆದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ತಿಂಗಳು
ಮೂಡುಬಿದಿರೆ: ಆಳ್ವಾಸ್ ಸ್ಪೋಟ್ಸ್೯ ಕ್ಲಬ್ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 15ರಿಂದ 25 ರವರೆಗೆ ಬಾಂಗ್ಲಾದೇಶದ ಡಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ ಕಬಡ್ಡಿ ವಲ್ಡ್ಕಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಧನಲಕ್ಷ್ಮೀ ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. ತನ್ನ ಆಲ್ರೌಂಡರ್ ಆಟದಿಂದ ತಂಡದಲ್ಲಿ
ಮೂಡುಬಿದಿರೆ: ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ-ಬಾಲಕಿಯರು) ಮತ್ತು ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್ಲಿಫ್ಟಿಂಗ್ ಚಾಂಪಿಯನ್ಷಿಪ್ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಳ್ವಾಸ್ ಕಾಲೇಜು ಸ್ಪರ್ಧಿಗಳು, ಸ್ಪರ್ಧೆಯಲ್ಲಿನ ಎಲ್ಲ ಆರು ವಿಭಾಗಗಳಾದ ಜೂನಿಯರ್ ಬಾಲಕರು, ಜೂನಿಯರ್ ಬಾಲಕಿಯರು, ಸಬ್ ಜೂನಿಯರ್ ಬಾಲಕರು, ಸಬ್ ಜೂನಿಯರ್ ಬಾಲಕಿಯರು, ಸೀನಿಯರ್
ಮೂಡುಬಿದಿರೆ: ಮಕ್ಕಳಲ್ಲಿ ಯಕ್ಷಗಾನದ ಒಲವನ್ನು ತುಂಬಿದಾಗ ತುಳುನಾಡಿನಲ್ಲಿ ಯಕ್ಷಗಾನ ಕಲೆ ಇನ್ನಷ್ಟು ಶ್ರೀಮಂತ ಕಲೆಯಾಗಿ ಬೆಳೆಯಲು ಸಾಧ್ಯ ಎಂದು ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಶ್ರೀ ಯಕ್ಷನಿಧಿ ಮೂಡುಬಿದಿರೆ ಇದರ ದಶಮಾನೋತ್ಸವದ ಅಂಗವಾಗಿ ಸಮಾಜ ಮಂದಿರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಭಾ ಕಾಯ೯ಕ್ರಮದಲ್ಲಿ ಆಶೀರ್ವಚನ ನೀಡಿದರು. ಜೈನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾತ್ ಕುಮಾರ್ ಬಲ್ನಾಡ್ ಮುಖ್ಯ ಅತಿಥಿಯಾಗಿ
ಮೂಡುಬಿದಿರೆ : ಸಮಾಜ ಸೇವಕ, ಪಡುಮಾರ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ಮೂಡುಮಾನಾ೯ಡಿನ ನಿವಾಸಿ ಶ್ರೀನಾಥ್ ಸುವಣ೯ ಅವರ ಮೃತದೇಹವು ಶ್ಮಶಾನಕ್ಕಾಗಿ ಮೀಸಲಿಟ್ಟ ಪಡ್ಡೇಲು ಎಂಬ ಜಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಕಳೆದ ಹಲವು ವಷ೯ಗಳಿಂದ ಬಿಜೆಪಿ ಕಾಯ೯ಕತ೯ರಾಗಿದ್ದ ಶ್ರೀನಾಥ್ ಸುವರ್ಣ ಅವರು ನಂತರ ಪಡುಮಾನಾ೯ಡು ಗ್ರಾ. ಪಂ.ನಲ್ಲಿ ಸ್ಪಧಿ೯ಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದೀಗ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆೆ ಎಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಒಟ್ಟು ೨೮ ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್) ಮತ್ತು ಹೊಸ
ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ.ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ.ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ




























