Home Posts tagged #mudabidre (Page 6)

ಮೂಡುಬಿದಿರೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂಡುಬಿದಿರೆ: ಎರಡು ವಾರದ ಹಿಂದೆ ಬೆಳ್ತಂಗಡಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಮಾರೂರಿನ ಗುಡ್ಡ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಬರಮೇಲು ಮನೆಯ ಆನಂದ ಮೂಲ್ಯ (57) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ. ಆನಂದ ಮೂಲ್ಯ ಅವರು ಕುಕ್ಕೇಡಿ ಗ್ರಾಮ

ಜಾಂಬೂರಿ ಖುಷಿಯೊಂದಿಗೆ ಕುತೂಹಲ ಮೂಡಿಸಿದೆ : ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ: ಡಿ.21-27 ಅಂತರಾಷ್ಡ್ರೀಯ ಮಟ್ಟದ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಹಬ್ಬ ಜಾಂಬೂರಿ ನನ್ನ ಕ್ಷೇತ್ರದ ಮೂಡುಬಿದಿರೆ ತಾಲೂಕಿನಲ್ಲಿ ನಡೆಯುತ್ತಿರುವುದಕ್ಕೆ ನನಗೆ ಖುಷಿಯೊಂದಿಗೆ ಕುತೂಹಲ ಮೂಡಿಸಿದೆ ಎಂದು ಶಾಸಕ ಉಮಾನಾಥ ಎ.ಕೋಟ್ಯಾನ್ ಹೇಳಿದ್ದಾರೆ. ವಿದ್ಯಾಗಿರಿಯ 100 ಎಕರೆ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅಂತರಾಷ್ಟ್ರೀಯ ಮಟ್ಟದ ಜಾಂಬೂರಿ ನಮ್ಮ ದೇಶದಲ್ಲಿ ಇದೀಗ ಮೊದಲ ಬಾರಿ ನಡೆಸಲು ಅವಕಾಶ ಸಿಕ್ಕಿದ್ದು ಇನ್ನು ಇದು 40 ಅಥವಾ 50 ವರ್ಷಗಳ

ಮೂಡುಬಿದ್ರೆಯಲ್ಲಿ ದಿನನಿತ್ಯ ಟ್ರಾಫಿಕ್ ಸಮಸ್ಯೆ ನೀಗಿಸಲು ಬೇಕಿದೆ ಮೂಡುಬಿದಿರೆಗೆ ಗ್ರಾಮಾಂತರ ಠಾಣೆ

ಮೂಡುಬಿದಿರೆ: ಬೆಳೆಯುತ್ತಿರುವ ನಗರ ಮೂಡುಬಿದಿರೆ ಜೈನ ಕಾಶಿಯಾಗಿ ಮಾತ್ರ ಉಳಿದಿಲ್ಲ ಇದು ಶಿಕ್ಷಣ ಕಾಶಿಯಾಗಿಯೂ ಮುಂದುವರೆದಿದೆ. ಇಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ವಾಹನಗಳ ಪಾರ್ಕಿಂಗ್ ಗೆ ಸರಿಯಾದ ಜಾಗವಿಲ್ಲದೆ ಜನರು ಅಡ್ಡಾದಿಡ್ಡಿಯಾಗಿ ವಾಹನಗಳನ್ನು ರಸ್ತೆಗಳ ಬದಿಗಳಲ್ಲೇ ನಿಲ್ಲಿಸಿ ಹೋಗುತ್ತಾರೆ ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಜಾಸ್ತಿಯಾಗುತ್ತಿದೆ. ಈ ಸಮಸ್ಯೆಯನ್ನು ನೀಗಿಸಲು ಮೂಡುಬಿದಿರೆಯಲ್ಲಿ ಪೆÇಲೀಸರ ಕೊರತೆ ಇದೆ ಆದ್ದರಿಂದ

ಜಾಂಬೂರಿಗೆ ಮೆರಗು ನೀಡಲಿರುವ ಕೃಷಿ ,ವಿಜ್ಞಾನ ಮೇಳ

ಮೂಡುಬಿದಿರೆ: ದೇಶಿಯ ಸಂಸ್ಕೃತಿಯನ್ನು ಆಳ್ವಾಸ್ ನುಡಿಸಿರಿ, ವಿರಾಸತ್ ಮುಖೇನ ಕಳೆದ ಎರಡುವರೆ ದಶಕಗಳಲ್ಲಿ ಸಾದರಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಒಂದು ವಾರಗಳ ಅಂತಾರಾಷ್ಟ್ರೀಯ ಸ್ಕೌಟ್‍ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುತ್ತಿದೆ. ಈ ಬಾರಿ ಜಾಂಬೂರಿಗೆ ವಿಶೇಷವಾಗಿ ಕೃಷಿ ಮತ್ತು ವಿಜ್ಞಾನ ಮೇಳಗಳು ವಿಶೇಷ ಮೆರುಗು ನೀಡಲಿದೆ. ಕೃಷಿ ಮಹತ್ವವನ್ನು ಬಿಂಬಿಸುವ ನಿಟ್ಟಿನಲ್ಲಿ ಜಾಂಬೂರಿಯಂದು ಆಳ್ವಾಸ್ ಆವರಣದ ಸುಮಾರು 12 ಎಕರೆ

ತುಳುನಾಡ ದೈವರಾಧನಾ ರಕ್ಷಣಾ ಚಾವಡಿ ವಾರ್ಷಿಕೋತ್ಸವ

ಮೂಡುಬಿದಿರೆ : ದೈವರಾಧನೆ ತುಳುನಾಡಿನ ಪರಂಪರೆ, ನಾವು ದೈವ-ದೇವರನ್ನು ಆರಾಧಿಸುತ್ತೇವೆ ಇದು ಇಲ್ಲಿನ ಮೂಲ ನಿವಾಸಿಗಳ ಸಂಸ್ಕೃತಿ’ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ವಾಲ್ಪಾಡಿ ಮಾಡದಂಗಡಿ ಶಾಲಾ ವಠಾರದಲ್ಲಿ ನಡೆದ ತುಳುನಾಡ ದೈವರಾಧನೆ ರಕ್ಷಣಾ ಚಾವಡಿ ಮೂಡುಬಿದಿರೆ ವಲಯದ 5ನೇ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಕನ್ಯಾನ ಕಣಿಯೂರು, ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ ಕಮರ್ಷಿಯಲ್ ದೃಷ್ಟಿಕೋನದಿಂದ

ನೆಲ್ಲಿಕಾರಿನಲ್ಲಿ ಭೀಕರ ಅಪಘಾತ : ಮಗು ಸೇರಿ ಮೂರು ಮಂದಿ ಮೃತ್ಯು

ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ವಿಶಾಲ್ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಅಡಿಭಾಗದಲ್ಲಿ

ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ : ಸ್ಟ್ರೆಲಿಯಂ ಟೆಕ್ನಾಲಜಿ & ಇನೋವೇಶನ್ ಸೆಂಟರ್‍ಗೆ ಚಾಲನೆ

ಮೂಡುಬಿದಿರೆ: ಹ್ಯೂಸ್ಟನ್ ಮೂಲದ ಮ್ಯಾನುಫ್ಯಾಕ್ಟರಿಂಗ್ ಹಾಗೂ ಲಾಜಿಸ್ಟಿಕ್ಸ್ ಸಂಬಂಧಿತ ಸೈಲಿಯ ‘ಇಂಕ್’ ಅಂತರಾಷ್ಟ್ರೀಯ ಕಂಪೆನಿಯ ಸಹಭಾಗಿತ್ವದಲ್ಲಿ ವಿಮಾನ ತಂತ್ರಜ್ಞಾನ ಆಧಾರಿತ ‘ಸ್ಟ್ರೆಲಿಯಂ ಟೆಕ್ನಾಲಜಿ ಆಂಡ್ ಸೆಂಟರ್‍ನ್ನು ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಅವರು ನೂತನ ಲ್ಯಾಬ್‍ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸ್ಟೆಲಿಯಂ

ಮೂಡುಬಿದಿರೆ ಪುರಸಭೆಯ ಅಧಿವೇಶನ : ಹಸಿಕಸ ವಿಲೇವಾರಿಯಲ್ಲಿ ಅಡಚಣೆ

ಮೂಡುಬಿದರೆ : ವಸತಿ ಸಮುಚ್ಛಯಗಳಲ್ಲಿನ ಹಸಿಕಸವನ್ನು ಹಂದಿ ಸಾಕಾಣಿಕೆಗಾರರಿಗೆ ರವಾನಿಸಿ ವಿಲೇವಾರಿ ಮಾಡುವ ಪ್ರಕ್ರಿಯೆಯಲ್ಲಿ ಎರಡು ಮೂರು ಬಾರಿ ಅಡಚಣೆಯಾಗಿದ್ದು ಇದರಿಂದಾಗಿ ತ್ಯಾಜ್ಯ ದಲ್ಲಿ ಹುಳುಗಳಾಗಿರುವದರಿಂದ ತ್ಯಾಜ್ಯ ಸಂಗ್ರಹವಾಗಿಲ್ಲ, ವಿಲೇವಾರಿ ಮಾಡುವವರಿಗೆ ತಿಳಿಸಿದರೆ ಅವರು ಪುರಸಭೆಯ ಅಧಿಕಾರಿಗಳಿಗೆ ತಿಳಿಸಿ ಎಂದು ಹೇಳುತ್ತಾರೆ. ಹಾಗಾದರೆ ಪುರಸಭೆಯ ಸದಸ್ಯರಾಗಿರುವ ನಮಗೆ ಗೌರವವಿಲ್ಲವೇ. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೆ 23ಕೋಟಿಯಷ್ಟು ಹಣವನ್ನು

ಪುರಸಭೆಯ ಪರವಾನಿಗೆ ಪಡೆಯದೆ ಕಾಲೇಜು ನಿರ್ಮಾಣ

ಮೂಡುಬಿದಿರೆ: ಪುರಸಭೆಯ ಷರತ್ತು ಉಲ್ಲಂಘನೆ ಮಾಡಿ ಸರಕಾರದ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಕಾನೂನು ಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಫ್ರೀ ಸ್ಕೂಲ್ ಮತ್ತು ಆಲ್ ಮಫಾಝ್ ವುಮೆನ್ಸ್ ಶೆರಿಯತ್ ಕಾಲೇಜನ್ನು ನಿರ್ಮಾಣ ಮಾಡಿ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಮೂಡುಬಿದಿರೆ ಪುರಸಭೆಗೆ ಮನವಿ ನೀಡಿದರು. ಹಿಂ.ಜಾ.ವೇದಿಕೆಯ ಜಿಲ್ಲಾ ಸಹ ಸಂಯೋಜಕ್

ಮೂಡಬಿದಿರೆ : ವಿಶ್ವ ಹಿಂದೂ ಪರಿಷತ್ ಬಜರಂಗದಳದಿoದ ಗೋಪೂಜೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ಪ್ರಖಂಡ ಶ್ರೀ ಬ್ರಹ್ಮ ಘಟಕ ಜೋಗೊಟ್ಟು- ಆನೆಗುಡ್ಡೆ ಇವರ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷರಾದ ಪ್ರದೀಪ್ ಕುಮಾರ್, ಸದಸ್ಯೆ ಭವಾನಿ ಜೆ.ಸಾಲ್ಯಾನ್, ಜೋಗೊಟ್ಟು- ಆನೆಗುಡ್ಡೆ ಶ್ರೀ ಬ್ರಹ್ಮ ಘಟಕದ ಕಾರ್ಯದರ್ಶಿ ಅಭಿಷೇಕ್, ಸಂಯೋಜಕರಾದ ಶರತ್, ಸಹ ಸಂಯೋಜಕರಾದ ದಯಾನಂದ ಶೆಟ್ಟಿ, ಗೋರಕ್ಷ ಪ್ರಮುಖರಾದ ಕೌಶಿಕ್ ಮತ್ತು ಉದಯ ಶೆಟ್ಟಿ ಈ ಸಂದರ್ಭದಲ್ಲಿ