Home Posts tagged #nelyadi (Page 2)

ನೆಲ್ಯಾಡಿ: ಪಡುಬೆಟ್ಟು ಮಕ್ಕಳ ಯಕ್ಷಗಾನ ಮಂಡಳಿ ಉದ್ಘಾಟನೆ-ರಂಗಪ್ರವೇಶ

ನೆಲ್ಯಾಡಿ: ಕೀರ್ತಿಶೇಷ ಶಾಂತಿಗೋಡು ಗೋಪಾಲಕೃಷ್ಣ ಶಗ್ರಿತ್ತಾಯ-ಜಾನಕಿ ಅಮ್ಮ ಸ್ಮಾರಕ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಬೆಟ್ಟು ಸಹಯೋಗದಲ್ಲಿ ಪಡುಬೆಟ್ಟು ಶ್ರೀ ಬಾಲಸುಬ್ರಹ್ಮಣ್ಯ ಮಕ್ಕಳ ಯಕ್ಷಗಾನ ಮಂಡಳಿಯ ಉದ್ಘಾಟನಾ ಸಮಾರಂಭ, ಗುರುವಂದನೆ, ಮಕ್ಕಳ ರಂಗಪ್ರವೇಶ ಕಾರ್ಯಕ್ರಮವು ದಂದು ಪಡುಬೆಟ್ಟು ಸರಕಾರಿ ಹಿರಿಯ

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ-ಸವಾರನಿಗೆ ಗಂಭೀರ ಗಾಯ

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಹೊಸಮಜಲು-ಬಲ್ಯ ಕ್ರಾಸ್‌ ಬಳಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನ ಸವಾರ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ದಿನೇಶ್ ಶೆಟ್ಟಿಯವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ದೋಂತಿಲ ನಿವಾಸಿ ದಿನೇಶ್ ಶೆಟ್ಟಿ ನೆಲ್ಯಾಡಿಯಲ್ಲಿ ಟೈಲರ್ ಆಗಿರುವ ಇವರು ಫೆ.6ರಂದು ರಾತ್ರಿ 7.30ರ ವೇಳೆಗೆ ಕೆಲಸ ಮುಗಿಸಿ ತನ್ನ

ಕೊಕ್ಕಡ: ಯುವತಿ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ:ಕಳೆಂಜ ಇಲ್ಲಿಯ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30ವ)ರವರು ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.8ರಂದು ಮುಂಜಾನೆ ನಡೆದಿದೆ. ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ

ಸೌತಡ್ಕ : ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ’

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿಯ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ ನಡೆಯಿತು.ರಾಜ್ಯ ಧಾರ್ಮಿಕ ಇಲಾಖೆಯ ವತಿಯಿಂದ ನಿರ್ಮಿಸಲಾದ ತಾಯಂದಿರು ಮಕ್ಕಳಿಗೆ ಹಾಲುಣಿಸುವ ಕೊಠಡಿಯನ್ನು ರಾಜ್ಯ

ಆಲಂಕಾರು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಡಾಟಾ ಸೈನ್ಸ್ ಕಾರ್ಯಾಗಾರ

ಆಲಂಕಾರು :ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ, ಪುತ್ತೂರು ಇದರ ಸಹಯೋಗದಲ್ಲಿ, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿ ಮತ್ತೆ ಮತ್ತು ಡಾಟಾ ಸೈನ್ಸ್ ನ ಕುರಿತಾದ ಕಾರ್ಯಾಗಾರ ನಡೆಯಿತು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ನ ತೃತೀಯ ವರ್ಷದ ವಿದ್ಯಾರ್ಥಿಗಳಾದ ಜೀವಿತ್, ಆಕಾಶ್ ಪಿ, ಧನುಷ್ ಕುಮಾರ್, ಗಗನ್ ಕೆ, ಅಶ್ವಿಜ ಯು ಪೈ ಹಾಗೂ ಅನುಶ್ರೀ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಸುಮಾರು 64

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವೈದ್ಯಕೀಯ ನೆರವು

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯ, ಮಾದೇರಿ ಒಕ್ಕೂಟದ, ನೇತ್ರ ಶ್ರೀ ತಂಡದ ಸದಸ್ಯರಾದ ಶ್ರೀ ಲತಾರವರಿಗೆ ಅನಾರೋಗ್ಯ ನಿಮಿತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 25000/- ರೂಪಾಯಿ ಸಹಾಯಧನದ ಮಂಜೂರಾತಿ ಪತ್ರವನ್ನು, ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಸೆಬಾಸ್ಟಿನ್ ಪಿ.ಜೆ ರವರು ಶ್ರೀಲತಾರವರ ಪರವಾಗಿ ಅವರ ಪತಿಗೆ ವಿತರಿಸಿದರು. ಈ ಸಂದರ್ಭದಲ್ಲಿ ವಲಯ

ಕೋಲ್ಪೆ: ಭರವಸೆಯ ಬೆಳಕು ಸಮಿತಿ ಕಚೇರಿ ಉದ್ಘಾಟನೆ

ನೆಲ್ಯಾಡಿ: ಭರವಸೆಯ ಬೆಳಕು ಸಮಿತಿ ಕೋಲ್ಪೆ ಇದರ ಕಚೇರಿ ಉದ್ಘಾಟನೆ ಕಾರ್ಯಕ್ರಮ ಬಹು ಇರ್ಷಾದ್ ದಾರಿಮಿ ಉಸ್ತಾದ್ ಮಿತ್ತಬೈಲ್ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಹಮ್ಮದ್ ಶರೀಫ್ ದಾರಿಮಿ ಅಲ್ ಹೈತಮಿ ಮುದರ್ರಿಸ್ ಕೋಲ್ಪೆ. ಕೋಲ್ಪೆ ಜಮಾಹತ್ ಅಧ್ಯಕ್ಷರಾದ ಕೆ.ಕೆ ಅಬೂಬಕ್ಕರ್. ಭರವಸೆಯ ಬೆಳಕು ಸಮಿತಿಯ ಅಧ್ಯಕ್ಷರಾದ ಯು.ಕೆ.ಅಬ್ದುಲ್ ಹಮೀದ್. ಕಲಂದರ್ ಷಾ ದಪ್ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಕೋಲ್ಪೆ. ಮಿಲೇನಿಯಂ ಬ್ರದರ್ಸ್ ಅಧ್ಯಕ್ಷರಾದ

ಕೊಕ್ಕಡ: ಕೃಷಿ ತೋಟಕ್ಕೆ ಕಾಡಾನೆ ದಾಳಿ; ಅಡಿಕೆ, ಬಾಳೆ ಕೃಷಿ ಧ್ವಂಸ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸಮೀಪದ ವಡ್ರಳಿಕೆ ಎಂಬಲ್ಲಿ ಕಾಡಾನೆ ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ. ರಫಾಯಲ್ ಸ್ಟ್ರೆಲ್ಲಾ ಎಂಬವರ ತೋಟಕ್ಕೆ ದಾಳಿ ಮಾಡಿದ ಕಾಡಾನೆ ಅಡಿಕೆ, ಬಾಳೆ ಕೃಷಿಯನ್ನು ಧ್ವಂಸ ಮಾಡಿದ್ದು, ಇದರಿಂದಾಗಿ ಕೃಷಿಕರಿಗೆ ಅಪಾರ ನಷ್ಟ ಉಂಟಾಗಿದೆ.ಪದೇ ಪದೇ ಈ ರೀತಿಯ ದಾಳಿಯಿಂದ ಕೃಷಿಕರಿಗೆ ತೊಂದರೆ ಉಂಟಾಗಿದೆ. ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಿ, ಕೃಷಿ ನಷ್ಟದ ಬಗ್ಗೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ರಾಜೇಶ್ ಕೆ.ವಿ., ಅವರು ಆಗಮಿಸಿ ‘ನಾಗರಿಕ ಶಿಷ್ಟಾಚಾರ’ದ ಕುರಿತು ಮಾಹಿತಿಯನ್ನು ನೀಡಿದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಕಡಬ ತಾಲೂಕಿನ ವಕೀಲರಾದ ಶ್ರೀಮತಿ ರಶ್ಮಿ ಅಶೋಕ್ ಆಗಮಿಸಿ ‘ಕಾನೂನು ಅರಿವು’ ವಿಷಯಕ್ಕೆ ಸಂಬಂಧಪಟ್ಟಂತೆ

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಟೀನ್ಸ್ ಹೀರೊ ಹದಿಹರೆಯದ ಮಕ್ಕಳ ಪಾಲನೆ ಬೆಳವಣಿಗೆ ಕಾರ್ಯಗಾರ

ನೆಲ್ಯಾಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಸಮಕಾಲಿನ ಪ್ರಪಂಚದಲ್ಲಿ ಹದಿ ಹರೆಯದ ತರುಣ ತರುಣಿಯರು ಎದುರಿಸುವ ಸಮಸ್ಯೆಗಳು ಮಕ್ಕಳ ಪಾಲನೆ ಮತ್ತು ಲಾಲಾನೇಯಲ್ಲಿ ಪೋಷಕರ ಪಾಡು ಈ ವಿಷಯದಲ್ಲಿ ಒಂದು ದಿನದ ಸೈಕಲಾಜಿಕಲ್ ಕಾರ್ಯಗಾರವನ್ನು ಆಯೋಜಿಸಲಾಯಿತು. ಸುಮಾರು ನೂರ ಐವತ್ತು ಟೀನ್ಸ್ ಮತ್ತು ಅವರ ತಾಯಂದಿರು ಈ ಶಿಬಿರದಲ್ಲಿ ಬಾಗವಹಿಸಿ ಮಾಹಿತಿ ಪಡೆದು ಕೊಂಡರು. ಹದಿಹರೆಯದ ತರುಣ ತರುಣಿಯರ ಮಾನಸಿಕ ಹಾಗೂ ವ್ಯಕ್ತಿತ್ವದ ಆರೋಗ್ಯ ಪರಿಪಾಲನೆ, ಹೊಂದಾಣಿಕೆ ಮತ್ತು