ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನಕ್ಕೆ ಕಳೆಂಜ ಗ್ರಾಮದ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಕುದುರೆಮುಖ, ಶೃಂಗೇರಿ, ಹೊರನಾಡು, ಇತರ ಪರಿಸರಗಳಿಗೆ ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಹಸಿರು ನಿಶಾನೆ ತೋರಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ
ನೆಲ್ಯಾಡಿ: ಕೊಣಾಲು ದಿಯುವಾಂಜಲಿಸ್ಟಿಕ್ ಅಸೋಸಿಯೇಷನ್ ಆಫ್ ದ ಈಸ್ಟ್ ಇದರ ಅದೀನದಲ್ಲಿರುವ ಸಂತ ತೋಮಸ್ ಯಾಕೋಬಾಯ ಸುರಿಯಾನಿ ಚರ್ಚಿನಲ್ಲಿ ತಾಯಂದಿರಿಗೋಸ್ಕರ ಕೊಯಿನೋನಿಯಾ ಮದರ್ಸ್ ಡಿವೋಷನಲ್ ಫೆಲೋಶಿಪ್ ಕಾರ್ಯಕ್ರಮ ಮರ್ತ ಮರಿಯಾಮ್ ಮಹಿಳಾ ಸಮಾಜದ ನಿರ್ದೇಶಕರಾಗಿರುವ ವೆರಿ.ರೇ. ಪಿ.ಕೆ ಅಬ್ರಹಾಂ ಕೋರ್ ಎಪಿಸ್ಕೋಪೋ ಅವರ ನಿರ್ದೇಶನದಲ್ಲಿ ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ತೋಮೊಸರ ದೇವಾಲಯದ ವಿಕಾರ್ ಆಗಿರುವ ರೇ.ಫಾ.ಅನೀಶ್ ಪಾರಾಶೆರಿಲ್
ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಎನ್.ಎಚ್. 75ರ ಲಾವತ್ತಡ್ಕ ಎಂಬಲ್ಲಿ ಅಕ್ರಮವಾಗಿ ಅಕೇಶಿಯಾ ಉರುವಲು ಸಾಗಾಟ ಮಾಡುತ್ತಿದ್ದ ಕೆಎ21 ಬಿ 3478 ಸಂಖ್ಯೆಯ ಲಾರಿಯನ್ನು ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ ರವರ ಮಾರ್ಗದರ್ಶನದಲ್ಲಿ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೊಕ್ಕಡ ಸಾಹುಲ್ ಹಮೀದ್ ಪರಾರಿಯಾಗಿದ್ದಾನೆ. ರೆಖ್ಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ತದಲಗಿ, ಬೀಟ್ ಫಾರೆಸ್ಟರ್ಗಳಾದ ನಿಂಗಪ್ಪ ಅವರಿ, ಸುನೀಲ್ ನಾಯ್ಕ್ ಕಾರ್ಯಾಚರಣೆಯಲ್ಲಿದ್ದರು.
ನೆಲ್ಯಾಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಅಮೆಚೂರ್ ಕ್ರೀಡಾಕೂಟದಲ್ಲಿ ಆದರ್ಶ್ ಶೆಟ್ಟಿ ಇವರು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ತೆಲಂಗಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಕರಾದ ಏಲಿಯಸ್ ಪಿಂಟೋ, ರಾಜೇಶ್ ಮೂಲ್ಯ ಹಾಗೂ ಪುಷ್ಪರಾಜ್ ಇವರಿಗೆ ತರಬೇತಿಯನ್ನು ನೀಡಿದ್ದಾರೆ. ಪ್ರಸ್ತುತ ಇವರು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ.
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದ್ದು ಬಿಹಾರ್ ಮೂಲದವರ ಕಾರು ಇದಾಗಿದ್ದು, ಕಾರು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಟಾಣೆ ಹೆಡ್ ಕಾನ್ಸ್ಟೇಬಲ್ ಕುಶಾಲಪ್ಪ ಭೇಟಿ ನೀಡಿ
ಕೊಕ್ಕಡ : ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಾದ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮದಡಿ ಶಿಶಿಲ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್ ಡಿ., ಉಪಾಧ್ಯಕ್ಷ ಯತೀಶ್ ಯಳಚಿತ್ತಾಯ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಆಟೋ ಚಾಲಕ ವೃಂದ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಅಂಗಡಿ ಮಾಲಕರು, ಹಾಗೂ ಸ್ಥಳೀಯ ನಿವಾಸಿಗಳು ಸ್ವಚ್ಛತಾ ಕಾರ್ಯದಲ್ಲಿ
ಭಾರೀ ಮಳೆ ಸುರಿದ ಪರಿಣಾಮ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ಮರ ಮತ್ತು ವಿದ್ಯುತ್ ಕಂಬ ರಸ್ತೆಗೆ ಉರುಳಿ ಕೆಲ ಸಮಯ ವಿದ್ಯುತ್ ವ್ಯತ್ಯಯ ಉಂಟಾದ ಘಟನೆ ನಿಡ್ಲೆಯಿಂದ ಪಟ್ರಮೆಗೆ ಸಂಪರ್ಕಿಸುವ ರಸ್ತೆಯ ಸುರ್ಯತ್ತಾವು ಸಮೀಪ ಸಂಭವಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕಳೆಂಜ ಶೌರ್ಯ ತಂಡದ ಸ್ವಯಂಸೇವಕರು ಮರವನ್ನು ತೆರವುಗೊಳಿಸಿ ಮೆಸ್ಕಾಂ ಇಲಾಖೆಗೆ ಸಹಕರಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು. ಕಾರ್ಯಾಚರಣೆಯಲ್ಲಿ ಕಳೆಂಜ ವಲಯದ ಸಂಯೋಜಕ ಗಿರೀಶ್, ಸದಸ್ಯರಾದ
ನೆಲ್ಯಾಡಿ: ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮ ದಿನಾಚರಣೆಯನ್ನು ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು. ಮೆರವಣಿಗೆಯಲ್ಲಿ ಮದ್ರಸ ಮಕ್ಕಳು, ಸ್ಥಳೀಯ ಜಮಾಅತರು ಭಾಗವಹಿಸಿದ್ದರು
ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಸುಳ್ಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಕ್ರೀಡಾಕೂಟವನ್ನು ದೀಪ ಬೆಳಗಿಸಿವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸುವುದರಿಂದ ಸ್ವಾವಲಂಬಿ ಜೀವನ ನಡೆಸುವ ಶಕ್ತಿ ಮತ್ತು ಧೈರ್ಯ ಬರುವುದು. ಪ್ರತಿಯೊಬ್ಬರು ಕ್ರೀಡಾ ಸ್ಪೂರ್ಥಿ ಬೆಳೆಸಿಕೊಳ್ಳಬೇಕು ಎಂದು ಕ್ರೀಡಾಪಟುಗಳಿಗೆ
ನೆಲ್ಯಾಡಿ: ಅನಾರೋಗ್ಯ ಪೀಡಿತ ಮಹಿಳೆಯೋರ್ವರ ಮನೆ ತನಕ 108 ಅಂಬ್ಯುಲೆನ್ಸ್ ಸಂಚರಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ 108 ಸಿಬ್ಬಂದಿಗಳು ಸುಮಾರು 1 ಕಿ.ಮೀ.ದೂರದ ತನಕ ಮಹಿಳೆಯನ್ನು ಸ್ಟ್ರೇಚರ್ ನಲ್ಲಿ ಹೊತ್ತುಕೊಂಡೇ ಬಂದು ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿರುವ ಮಾನವೀಯ ಘಟನೆ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ ಗ್ರಾಮದ ಪದಂಬಳ ಸಮೀಪದ ದೇವರಮಾರು ನಿವಾಸಿ ಕಮಲ(65) ಎಂಬವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಅವರ ಮಗ ಪ್ರವೀಣ್