Home Posts tagged #padubidre (Page 4)

ಉಚ್ಚಿಲ:ವಸತಿ ಸಂಕೀರ್ಣದ ಅವ್ಯವಸ್ಥೆ- ನಿವಾಸಿಗಳ ಅಕ್ರೋಶ

ಉಚ್ಚಿಲ ಪೇಟೆಯ ಹೃದಯ ಭಾಗದಲ್ಲಿರುವ ಬಹು ಮಹಡಿ ವಸತಿ ಸಂಕೀರ್ಣದಲ್ಲಿ ಬ್ಲೂ÷್ಯ ವೇವ್ಸ್ ನಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದ್ದು ಅಲ್ಲಿಯ ನಿವಾಸಿಗಳು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಟ್ಟಡಕ್ಕೆ ಸಂಬAಧಿಸಿ ಐವರು ಪಾಲುದಾರರಿದ್ದರೂ ಕೂಡ ಇಲ್ಲಿಯ ನಿವಾಸಿಗಳ ಮಾತಿಗೆ ಸ್ಪಂದಿಸುತ್ತಿಲ್ಲ. ಈ ಕಟ್ಟಡದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಟ್ಟಡದ

ಪಡುಬಿದ್ರೆ : “ತುಡರ್ ಪರ್ಬದ ಗಮ್ಮತ್” ಕಾರ್ಯಕ್ರಮ

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತುಡರ್ ಪರ್ಬದ ಗಮ್ಮತ್ ಎಂಬ ಹೆಸರಿನಡಿಯಲ್ಲಿ ಬಹಳ ಅರ್ಥ ಗರ್ಭಿತವಾಗಿ ದೀಪಾವಳಿ ಆಚರಣೆಯನ್ನು ಕಾಪು ರಾಜೀವ ಭವನದಲ್ಲಿ ನಡೆಸಿದ್ದಾರೆ. ಕಾರ್ಯಕ್ರಮದ ಪ್ರಮುಖ ಅಂಗವಾಗಿ ಬೇರೆ ಬೇರೆ ಮೂರು ಅನಾಥಾಶ್ರಮವನ್ನು ನಡೆಸುತ್ತಿರುವ ಗಣ್ಯರನ್ನು ಕರೆಯಿಸಿ ಅವರಿಗೆ ಸನ್ಮಾನಿಸಿ ಆಶ್ರಮದ ಸದಸ್ಯರಿಗೆ ಬೇಕಾಗುವ ಹೊಸ ಬಟ್ಟೆ ಸಿಹಿ ತಿಂಡಿಗಳನ್ನು ನೀಡಿ ಗೌರವಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ನಮ್ಮ ಭಾರತ

ಪಡುಬಿದ್ರಿ :ಸರ್ಕಾರಿ ಶಾಲಾ ಮೈದಾನವಿಲ್ಲಿ ಜಲ್ಲಿಕಲ್ಲು ಶೇಖರಣಾ ಘಟಕ-ತೆರವಿಗೆ ಹಳೆವಿದ್ಯಾರ್ಥಿಗಳಿಂದ ವಾರದ ಗಡುವು

ಪಡುಬಿದ್ರಿ ಕರ್ಣಾಟಕ ಪಬ್ಲಿಕ್ ಸ್ಕೂಲ್ ಆಟದ ಮೈದಾನ ಜಲ್ಲಿಕಲ್ಲು, ಕ್ರಷರ್ ಹುಡಿ ಶೇಖರಣಾ ಘಟಕವಾಗಿ ಬದಲಾಗಿದ್ದು, ಈ ಬಗ್ಗೆ ಆಕ್ರೋಶಿತರಾದ ಶಾಲಾ ಹಳೆ ವಿದ್ಯಾರ್ಥಿಗಳು ಒಂದು ವಾರದೊಳಗೆ ತೆರವುಗೊಳಿಸದಿದ್ದಲ್ಲಿ ನಾವು ಅದನ್ನು ಬೇರೆಗೆ ವರ್ಗಾಹಿಸುವ ಕೆಲಸ ಮಾಡಬೇಕಾದೀತು ಎಂಬುದಾಗಿ ಎಚ್ಚರಿಸಿದ್ದಾರೆ. ರಸ್ತೆ ದುರಸ್ಥಿಗಾಗಿ ಕಾರ್ಕಳ ಮೂಲದ ಗುತ್ತಿಗೆದಾರನೊರ್ವ ಕಳೆದ ಒಂದು ತಿಂಗಳ ಹಿಂದೆ ರಾಶಿ ರಾಶಿ ಜಲ್ಲಿಕಲ್ಲು ಸಹಿತ ಕ್ರೆಷರ್ ಹುಡಿಯನ್ನು ತಂದು ಮೈದಾನಕ್ಕೆ

ಡೆತ್ ನೋಟ್ ಬರೆದಿಟ್ಟು ಬಾಲಕ ಆತ್ಮಹತ್ಯೆ

ಹತ್ತನೇ ತರಗತಿ ಬಾಲಕನೋರ್ವ “ನಾನು ಒತ್ತಡದಲ್ಲಿದ್ದೇನೆ ನನ್ನನ್ನು ಕ್ಷಮಿಸಿ ತಂದೆ ತಾಯಿ ಹಾಗೂ ಕೋಚ್ ಎಂಬುದಾಗಿ ಆಂಗ್ಲ ಬಾಷೆಯಲ್ಲಿ ಡೆತ್ ನೋಟ್ ಬರೆದಿಟ್ಟು ನಂದಿಕೂರು ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ಬಾಲಕ ಬೆಳ್ಮಣ್ ಜಂತ್ರ ಸದಾಶಿವ ಆಚಾರ್ಯರ ಪುತ್ರ ಆದರ್ಶ್ ಆಚಾರ್ಯ(17), ನಾಲ್ವರು ಮಕ್ಕಳಲ್ಲಿ ಕೊನೆಯವನಾಗಿದ್ದ ಈತ ಸೂಡಾ ಸರ್ಕಾರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ಕಲಿಕೆಯಲ್ಲಿ ತರಗತಿಯಲ್ಲೇ ಪ್ರಥಮ

ಮೀನಿನ ನೀರು ಚೆಲ್ಲಿಕೊಂಡು ಹೋಗುತ್ತಿದ್ದ ವಾಹನಗಳಿಗೆ ದಂಡ

ಮೀನು ಸಾಗಾಟ ವಾಹನಗಳು ಹೆದ್ದಾರಿ ಎಲ್ಲೆಡೆ ಮೀನಿನ ನೀರನ್ನು ಚೆಲ್ಲಿಕೊಂಡು ಹೋಗುತ್ತಿದ್ದ ವಾಹನಗಳನ್ನು ಉಚ್ವಿಲದಲ್ಲಿ ತಡೆದ ಪೊಲೀಸರು ದಂಡ ವಿಧಿಸಿದ್ದಾರೆ.ಕೇರಳ ರಾಜ್ಯದಲ್ಲಿ ಹೆದ್ದಾರಿಯಲ್ಲಿ ಮೀನಿನ ನೀರು ಚೆಲ್ಲಿಕೊಂಡು ಹೋಗುವ ವಾಹನಗಳ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಯಲ್ಲಿ ಇರುವುದರಿಂದ ಅಲ್ಲಿ ಯಾವುದೇ ಕಾರಣಕ್ಕೆ ಹೆದ್ದಾರಿಗೆ ಚೆಲ್ಲದ ಮೀನಿನ ನೀರು ಇಲ್ಲಿ ಮಾತ್ರ ಯಾವುದೇ ಲಂಗು ಲಗಾಮು ಇಲ್ಲದೆ ಹೆದ್ದಾರಿಗೆ ಚೆಲ್ಲಿಕೊಂಡು ಹೋಗುವುದರಿಂದ ಪಾದಚಾರಿಗಳು

ಪಡುಬಿದ್ರಿಯಲ್ಲಿ ಈದ್ ಮಿಲಾದ್ ಸಂಭ್ರಮ…

ಪ್ರವಾದಿಯವರ ಜನ್ಮ ದಿನಾಚರಣೆಯ ಅಂಗವಾಗಿ ಪಡುಬಿದ್ರಿಯ ಕಂಚಿನಡ್ಕದಿಂದ ಆರಂಭಗೊಂಡ ಜಾಥದಲ್ಲಿ ನೂರಾರು ಮುಸ್ಲಿಂ ಭಾಂದವರು ಭಾಗವಹಿಸಿದ್ದು, ದ್ವಿಚಕ್ರ ವಾಹನ ಸಹಿತ ಅಟೋ ರಿಕ್ಷಾಗಳು ಈ ಜಾಥದಲ್ಲಿ ಪಾಲ್ಗೊಂಡಿದ್ದವು. ಈ ಬಗ್ಗೆ ಮಾಹಿತಿ ನೀಡಿದ ಉರ್ದು ಶಾಲಾ ಮುಖ್ಯ ಶಿಕ್ಷಕ ಶಫಿಯುಲ್ಲಾ ಎಂಬವರು, ಲೋಕಕ್ಕೆ ಒಳ್ಳೆಯ ವಿಚಾರಗಳನ್ನು ಸಾರಿದ ಪ್ರವಾದಿಯವರ ಜನ್ಮ ದಿನಾಚರಣೆಯನ್ನು ಪಡುಬಿದ್ರಿ ಜಮಾತ್ ಮುಖಾಂತರ ಬಹಳ ಅದ್ಧೂರಿಯಾಗಿ ಆಚರಿಸುತ್ತಿದ್ದು, ಈ ದಿನವೂ ಕಂಚಿನಡ್ಕದಿಂದ

ಪಡುಬಿದ್ರಿ ಬಾಲ ಗಣಪನ ಭವ್ಯ ಶೋಭಾಯಾತ್ರೆ: ಎಲ್ಲೆಲ್ಲೋ ಭಜನಾ ನೃತ್ಯಗಳದ್ದೇ ಕಲರವ

ಎಲ್ಲಾ ಕಡೆ ವಿಜಯದಶಮಿಯಂದು ತಾಯಿ ಶಾರದೆಯ ವಿಜ್ರಂಃಣೆಯ ಶೋಭಾಯಾತ್ರೆಗಳು ನಡೆಯುತ್ತಿದ್ದರೆ ಪಡುಬಿದ್ರಿಯಲ್ಲಿ ಮಾತ್ರ ಬಾಲಗಣಪನ ಶೋಭಾಯಾತ್ರೆ ವಿವಿಧ ಧಾರ್ಮಿಕ ಚಿಂತನೆಯ ತಂಡಗಳಿಂದ ಭಜನಾ ಕುಣಿತಗಳು ಭಕ್ತ ಸಮೂಹವನ್ನು ಮಂತ್ರ ಮುಗ್ದರನ್ನಾಗಿಸಿದೆ. ಗುಡ್ಡಕ್ಕೆ ದನ ಕಾಯಲು ಹೋದ ಮಕ್ಕಳು ಸಮಯ ಕಳೆಯಲು ಆಟಕ್ಕಾಗಿ ಪ್ರತಿಷ್ಠೆ ಮಾಡಿದ ಗಣಪನೇ ಇಂದು ಗುಡ್ಡ ಗಣಪನಾಗಿಯೂ…ಮಕ್ಕಳು ಪೂಜಿಸಿದ್ದರಿಂದ ಬಾಲ ಗಣಪನಾಗಿಯೂ ಲಕ್ಷಾಂತರ ಭಕ್ತಾಧಿಗಳ ಕಷ್ಟ ಕಾರ್ಪಣ್ಯಗಳನ್ನು ದೂರ

ಉಚ್ಚಿಲದಲ್ಲಿ ಪಾನಮತ್ತರ ವಿರುದ್ಧ ಪೊಲೀಸ್ ಕ್ರಮ

ಮೇಲಾಧಿಕಾರಿಗಳ ಸೂಚನೆಯಂತೆ ಫೀಲ್ಡ್ ಗೆ ಇಳಿದ ಪಡುಬಿದ್ರಿ ಪೊಲೀಸರಿಗೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ಪತ್ತೆ ಹಚ್ಚಿದ್ದಾರೆ. ಪಡುಬಿದ್ರಿ ಎಸ್ಸೈ ಪುರುಷೋತ್ತಮ ತಂಡ ತಡರಾತ್ರಿ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರ್ಯಚರಣೆ ಆರಂಭಿಸಿದಾಗ ಬಹುತೇಕ ದ್ವಿಚಕ್ರ ಸವಾರರು ಮದ್ಯ ಸೇವನೆ ಮಾಡಿರುವುದು ಪರೀಕ್ಷೆಯಿಂದ ಕಂಡು ಬಂದಿದೆ. ಇದೀಗ ಹಲವರ ವಿರುದ್ಧ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಪಘಾತ ಪ್ರಕರಣಗಳ ಸಂಖ್ಯೆ ಈ ಪ್ರದೇಶದಲ್ಲಿ

ಪಡುಬಿದ್ರಿ ಕೆಪಿಎಸ್ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ : ಪರಿಶೀಲನೆ

ಮೂಲಸೌಕರ್ಯ ಕೊರತೆ ಎದುರಿಸುತ್ತಿರುವ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪಡುಬಿದ್ರಿಯ ಕೆಪಿಎಸ್ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಮೂಲಸೌಕರ್ಯಗಳಿಲ್ಲದೆ ನೆಲದಲ್ಲಿ ಕುಳಿತುಕೊಂಡು ಪಾಠ ಕೇಳುವ ಪರಿಸ್ಥಿತಿ ಇದೆ. ಅಲ್ಲದೆ ಈ ಶಾಲೆಯ ಕಟ್ಟಡ ತೀರ ಹಳೆಯದಾಗಿದ್ದು, ನಾದುರಸ್ಥಿಯಲ್ಲಿದೆ. ಕೂಡಲೇ ಸೂಕ್ತ ಹೊಸ ಕಟ್ಟಡವನ್ನು ರಚಿಸುವಂತೆ ಆಗ್ರಹಿಸಿ ಸಾಮಾಜಿಕ

ಅನಾರೋಗ್ಯ ಪೀಡಿತ ವಯೋವೃದ್ದೆಯ ನೋವಿಗೆ ಸ್ಪಂದಿಸಿದ ಯುವಕರು

ಕಾಪು :ಪುರಾಸಭಾ ವ್ಯಾಪ್ತಿಯ ಮಲ್ಲಾರಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಅನಾರೋಗ್ಯ ಪೀಡಿತ ವಯೋವೃದ್ದೆಯ ನೋವಿಗೆ ಸ್ಪಂದಿಸುವ ಮೂಲಕ ಯುವಕರು ಮಾದರಿಯಾಗಿದ್ದಾರೆ. ಕೊಂಬಗುಡ್ಡೆ ಪ್ರಶಾಂತ್ ಪೂಜಾರಿ, ಪುರಸಭಾ ಸದಸ್ಯ ಉಮೇಶ್ ಪೂಜಾರಿ, ಶಿವಾನಂದ ಪೂಜಾರಿ ಸಹಿತ ಯುವಕರ ತಂಡ ಒಂಟಿ ಮಹಿಳೆಯ ಅನಾರೋಗ್ಯ ಪರಿಸ್ಥಿತಿಯನ್ನು ಕಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕುಟುಂಬ ವರ್ಗದಿಂದ ದೂರವಾಗಿದ್ದ ಲೀಲಾ ಪೂಜಾರ್ತಿ ತೀವ್ರ ಅನಾರೋಗ್ಯದಿಂದ