Home Posts tagged #padubidre (Page 7)

ಕಾಪು ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ: ನಗ ನಗದು ದೋಚಿ ಪರಾರಿ

ಕಾಪು ಠಾಣಾ ವ್ಯಾಪ್ತಿಯ ಮೂಳೂರು ಮುಖ್ಯ ರಸ್ತೆಯ ಬಳಿಯ ಮೂರು ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ನಗನಗದು ಕಳವು ಗೈದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೂಳೂರು ಈಸ್ಟ್ ವೆಸ್ಟ್ ನರ್ಸರಿ ಸಮೀಪದ ಮಹಮ್ಮದ್ ರಫೀಕ್, ಮಧುರ ಕಾಂಪೌಂಡ್ ನಿವಾಸಿ ಇಬ್ರಾಹಿಂ ಹಾಗೂ ಶಹನಾಜ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಅಪಾರ ನಗ ಹಾಗೂ ನಗದು ಕಳವು ಗೈದಿರುವ ಬಗ್ಗೆ ಮಾಹಿತಿ

ರಾಷ್ಟ್ರಪಕ್ಷಿಗೆ ಸ್ಕೂಟರ್ ಢಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ.

ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ಮಾದಕ ವಸ್ತುಗಳ ನಾಶ

ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವಯರ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು.  ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್

ಪಡುಬಿದ್ರಿಯಲ್ಲಿ ತೀವ್ರಗೊಂಡ ಕಡಲು ಕೊರೆತ

ಪಡುಬಿದ್ರಿ ಕಾಡಿಪಟ್ಣ ಪ್ರದೇಶದಲ್ಲಿ ಕಡಲು ಕೊರೆತ ತೀವ್ರ ಗೊಂಡಿದ್ದು ಈ ಪ್ರದೇಶದ ಹತ್ತಾರು ತೆಂಗಿನ ಮರಗಳು ಸಹಿತ ಪ್ರವಾಸೋದ್ಯಮ ಇಲಾಖೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಕಾಮಗಾರಿ ಕಡಲ ಒಡಲು ಸೇರಲು ಸನ್ನದ್ಧ ವಾಗಿದೆ. ಸ್ಥಳೀಯರ ಮಾತಿನ ಪ್ರಕಾರ ತಡೆಗೋಡೆ ನಿರ್ಮಾಣ ಪ್ರದೇಶದ ತೀರದಲ್ಲಿ ಕಡಲು ಕೊರೆತ ಸರ್ವೇಸಾಮಾನ್ಯ, ಇದೀಗ ಪಕ್ಕದಲ್ಲಿ ಬಂಡೆ ಕಲ್ಲುಗಳಿಂದ ತಡೆಗೋಡೆ ನಿರ್ಮಾಣವಾಗಿದ್ದು ಈ ಭಾಗದಲ್ಲೂ ತಡೆಗೋಡೆ ನಿರ್ಮಿಸುವಂತೆ ಈ ಭಾಗದ ಶಾಸಕರ ಗಮನಕ್ಕೆ

ಪಡುಬಿದ್ರಿ ಬೀದಿ ವ್ಯಾಪಾರಿಗಳನ್ನು ಮೈದಾನಕ್ಕೆ ಸ್ಥಳಾಂತರಿಸಿದ ಗ್ರಾ.ಪಂ.

ಪಡುಬಿದ್ರಿ ಮಾರುಕಟ್ಟೆ ರಸ್ತೆಯಲ್ಲಿ ನಿರಂತರ ಸಾಮಾಜಿಕ ಅಂತರವಿಲ್ಲದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದರಿಂದ ಬೀದಿಬದಿ ವ್ಯಾಪಾರಿಗಳನ್ನು ಗ್ರಾ.ಪಂ. ಪಕ್ಕದ ಸರ್ಕಾರಿ ಶಾಲಾ ಮೈದಾನಕ್ಕೆ ಸ್ಥಳಾಂತರಿಸಿದ್ದರೂ.. ಅಂಗಡಿ ಹೊಂದಿರುವ ತರಕಾರಿ ವ್ಯಾಪಾರಿಗಳು ರಸ್ತೆಯಲ್ಲೇ ತರಕಾರಿಗಳನ್ನು ಇಟ್ಟು ವ್ಯಾಪಾರನಡೆಸುತ್ತಿರುವ ಬಗ್ಗೆ ಜನರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಮುಖ್ಯ ಮಾರುಕಟ್ಟೆಯ ರಸ್ತೆಗೆ ಅಂಟಿಕೊಂಡೇ

ಸೀಲ್‍ಡೌನ್ ಪಟ್ಟಿಯಲ್ಲಿರುವ ಗ್ರಾಮದಲ್ಲಿ ವಾರದ ಸಂತೆ

ವಾರದ ಸಂತೆಗೆ ಉಡುಪಿ ಜಿಲ್ಲಾಡಳಿತದ ನಿರ್ಬಂಧ ವಿದ್ದರೂ ಯಾವುದೇ ಅಡೆತಡೆ ಇಲ್ಲದೆ ಪಡುಬಿದ್ರಿ ವಾರದ ಸಂತೆ ನಡೆಯುವ ಮೂಲಕ ಸೀಲ್ ಡೌನ್ ಪಟ್ಟಿಯಲ್ಲಿರುವ ಈ ಗ್ರಾಮದ ಜನ ಆತಂಕ ವ್ಯಕ್ತ ಪಡಿಸಿದ್ದಾರೆ. ಮುಖ್ಯ ಮಾರುಕಟ್ಟೆಯ ರಸ್ತೆಯ ಎರಡೂ ಭಾಗಗಳಲ್ಲೂ ಹೆಸರಿಗಾಗಿಯೋ ಎಂಬಂತ್ತೆ ಬ್ಯಾರೀಕೆಡ್ ಅಳವಡಿಸಿದ್ದಾರೆ. ನಾಳೆಯಿಂದ ಐದು ದಿನಗಳ ಕಾಲ ಪಡುಬಿದ್ರಿ ಸೀಲ್ ಡೌನ್ ಎಂಬ ಕಾರಣಕ್ಕೋ ಏನೋ.. ಸಂತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಂಡುಬಂದರು. ಮುಂಜಾನೆಯಿಂದ ಹತ್ತು