ಕಾಲುಗಳಿಗಿಲ್ಲ ತನ್ನ ಬೇಕು ಬೇಡಗಳನ್ನು ಪೂರೈಸುವ ಶಕ್ತಿ… ಆದರೆ ಜನರ ಉದ್ಧಾರಕ್ಕೂ ಎಂಬಂತೆ ತನ್ನೆಲ್ಲಾ ಸುಖ ಸಂತೋಷಗಳನ್ನು ಬದಿಗೊತ್ತಿ,.. ತನ್ನಲ್ಲಿ ಅಡಕವಾಗಿರುವ ನೋವುಗಳನ್ನು ಮರೆತು ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಾರೆ. ಇದೀಗ ಪಡುಬಿದ್ರಿಯ ಸುಜ್ಲಾನ್ ಕಾಲೋನಿಯ ಒಂದು ಮನೆಯಲ್ಲಿ ಜನರ ಸೇವೆಗೆ ಲಭ್ಯವಿದ್ದಾರೆ. ಕೇರಳ ಮೂಲದ “ಶೇಷಾನಂದ”
ನಾಗಬನ ಮತ್ತು ಮನೆಯ ಮೇಲೆ ಅಪಾಯಕಾರಿಯಾಗಿ ವಾಲಿದ್ದ ಮರವನ್ನು ಕಡಿಯುತ್ತಿದ್ದ ವೇಳೆ ಮರ ಉರುಳಿ ಬಿದ್ದು ಜಾರ್ಖಂಡ್ ಮೂಲದ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ. ಬಿಹಾರ -ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಮೃತ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದೆ. ಕರಂದಾಡಿ ದೇವಸ್ಥಾನದ ಬಳಿ ಬೃಹತ್ ಗೋಳಿ ಮರವನ್ನು ಕಡಿಯುತ್ತಿದ್ದ ವೇಳೆ ಅದು ಕಾರ್ಮಿಕರ ಮೇಲೆ ಉರುಳಿ ಬಿದ್ದಿತ್ತು. ಇದರಿಂದಾಗಿ ಮೂವರು
ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪಡುಬಿದ್ರಿ ಬಂಟರ ಸಂಘ ಸಹಭಾಗಿತ್ವದ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸಹಾಯಧನವನ್ನು ಅಕ್ಟೋಬರ್ 1ರಂದು ವಿತರಿಸಲಾಗುವುದು ಎಂದು ಬಂಟರ ಸಂಘದ ಅಧ್ಯಕ್ಷರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಅವರು ಪಡುಬಿದ್ರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ರೂ. 20 ಲಕ್ಷ
ಬ್ಯಾಂಕ್ ಮ್ಯಾನೇಜರ್ ಎಂಬುದಾಗಿ ಕನ್ನಡ ಬಾಷೆಯಲ್ಲಿ ಪರಿಚಯಿಸಿ ಕೆವೈಸಿ ಲಿಂಕ್ ಆಗಿಲ್ಲ ಒಟಿಪಿ ನೀಡಿ ಎಂದು ಹೇಳಿ, ಒಟಿಪಿ ನೀಡುತ್ತಿದಂತೆ ಮೂರು ಬಾರಿ ಖಾತೆಯಿಂದ ಹಣ ಡ್ರಾ ಆಗಿದ್ದು ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ತೆಂಕ ಎರ್ಮಾಳಿನಲ್ಲಿ ನಡೆದಿದೆ. ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರೇ ಹಣ ಕಳೆದುಕೊಂಡವರು. ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದ ಇವರು ರಾತ್ರಿ ಹಗಲೆನ್ನದೆ, ಬಿಸಿಲು ಮಳೆಗೆ ಮೀನುಗಾರಿಕೆ ನಡೆಸಿ ಕೂಡಿಟ್ಟ ಹಣ
ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ. ಕುಂದಾಪುರ ಮೂಲದ ಐ ಟೆನ್ ಕಾರು ಹಾಗೂ ಕೋಟ ಮೂಲದ ಶಿಪ್ಟ್ ಕಾರು ಅಪಘಾತಕ್ಕೆ ತುತ್ತಾಗಿದೆ. ಎರಡೂ ಕಾರುಗಳಲ್ಲೂ ಚಾಲಕರು ಮಾತ್ರ ಇದ್ದು ಶಿಪ್ಟ್ ಕಾರಿನ ಚಾಲಕ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಭಾಗದಲ್ಲಿ ಹೆದ್ದಾರಿ ಬಹಳ ಅಪಾಯಕಾರಿ ತಿರುವು
ಪಡುಬಿದ್ರಿ ಸಮೀಪದ ನಂದಿಕೂರಿನಲ್ಲಿ ಬೈಕ್ ಹಾಗೂ ಬಸ್ಸಿನ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕ ಕಾರ್ಕಳ ಅಜೆಕಾರು ಬೊಂಡು ಕುಮೇರಿ ನಿವಾಸಿ ಅಶ್ವಿತ್ ಶೆಟ್ಟಿ(34) ಎಂದು ತಿಳಿದುಬಂದಿದೆ. ಯೂಟ್ಯೂಬ್ ಬ್ಲಾಗರ್ ಸಹಿತ ಗೂಡ್ಸ್ ಟೆಂಪೆÇೀ ಇಟ್ಟುಕೊಂಡು ಬಾಡಿಗೆ ನಡೆಸುತ್ತಿದ್ದರು. ಇತ್ತೀಚಿಗೆ ಇವರು ಹೊಸ ಬೈಕ್ವೊಂದನ್ನು ಖರೀದಿ ಮಾಡಿದ್ದು ಅದನ್ನು ಸರ್ವಿಸ್ಗಾಗಿ ಮಂಗಳೂರಿಗೆ ತೆಗೆದುಕೊಂಡು
ಬಹಳಷ್ಟು ವರ್ಷಗಳಿಂದ ನಂದಿಕೂರು ರೈಲ್ವೆ ಬ್ರಿಡ್ಜ್ ರಸ್ತೆ ಹೊಂಡಮಯವಾಗಿ ಜನರ ಪ್ರಾಣ ಹಿಂಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿ-ಕಾರ್ಕಳ ರಾಜ್ಯ ರಸ್ತೆ ಇದ್ದಾಗಿದ್ದು, ದಿನವೊಂದಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ವಾಹನಗಳು ಹಾಗೇನೆ ಪಾದಚಾರಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆ ಇದಾಗಿದೆ. ಬಸ್ ಚಾಲಕರಂತೂ ಯಾವುದೇ ಮೂಲಾಜಿ ಇಲ್ಲದೆ ಈ
ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತವಾದ ಘಟನೆ ಪಡುಬಿದ್ರಿಯ ಕನ್ನಂಗಾರಿನಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಕೂಟರ್ನ ಹಿಂಬದಿ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಿಸಲಾಗಿದೆ. ಯುಪಿ ಮೂಲದ ಇಬ್ಬರು ಸ್ಕೂಟರ್ ಏರಿಕೊಂಡು ಹೆಜಮಾಡಿ ಒಳ ರಸ್ತೆಯಿಂದ ಕನ್ನಂಗಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಎಂಟ್ರಿ ಕೊಡುತ್ತಿದಂತೆ, ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ನ ಹಿಂಬದಿ
ಮಕ್ಕಳಲ್ಲಿ ಅಡಕವಾಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹುವ ಉದ್ಧೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಳೆ ವಿದ್ಯಾರ್ಥಿಗಳು ಸಹಿತ ದಾನಿಗಳ ಸಹಕಾರದಿಂದ ಎರ್ಮಾಳು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂಬುದಾಗಿ ಮುಖ್ಯ ಶಿಕ್ಷಕಿ ವಿನೋದ ಹೇಳಿದ್ದಾರೆ. ಅವರು ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕ್ಲಸ್ಟರ್ ನ
ಪಡುಬಿದ್ರಿಯ ಪುರಾತನ ದೇವಳಗಳಲ್ಲಿ ಒಂದಾದ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ ಬಹಳ ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಭಕ್ತಾದಿಗಳು ಶ್ರೀ ನಾಗದೇವರಿಗೆ ತನು ತಂಬಿಲ ಸೇವೆ ನೀಡಿದರು.




























