Home Posts tagged padubidri (Page 5)

ಪೂರಕ ದಾಖಲೆ ಪಡೆಯದೆ ಮನೆ ಕಟ್ಟಲು ಅನುಮತಿ:ಕಟಪಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿರುದ್ಧ ಆರೋಪ

ಪಹಣೆ ಪತ್ರದಲ್ಲಿ ಹತ್ತು ಮಂದಿ ಹಕ್ಕುದಾರರಿದ್ದರೂ, ಒರ್ವ ವ್ಯಕ್ತಿ ನೀಡಿದ ಅರ್ಜಿಗೆ ಗ್ರಾ.ಪಂ.ನ ಅಧ್ಯಕ್ಷೆ, ಉಪಾಧ್ಯಕ್ಷೆ ಸಹಿತ ಪಿಡಿಒ ಒಳ ಒಪ್ಪಂದ ನಡೆಸಿ ಅನುಮತಿ ನೀಡುವ ಮೂಲಕ ಅಕ್ರಮ ನಡೆಸಿದ್ದಾರೆ ಎಂಬುದಾಗಿ ಒರ್ವ ಹಕ್ಕುದಾರ ಜಾನ್ ರಿಚಾರ್ಡ್ ತಿಳಿಸಿದ್ದಾರೆ. ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ: ಆತಂಕದಲ್ಲಿ ಸ್ಥಳೀಯರು

ಜನವಿರೋಧಿಯಾಗಿ ಕಾರ್ಯಾಚರಿಸುತ್ತಿರುವ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ತಲೆ ಎತ್ತಿದ ಯುಪಿಸಿಎಲ್ ಕಂಪನಿಯ ಸುತ್ತಲ ಪ್ರದೇಶದಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ ಕಾಣಿಸಿಕೊಂಡು ಬಹಳಷ್ಟು ದನಗಳು ಮರಣ ಹೊಂದುತ್ತಿದ್ದು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರೂ ಯಾವುದೇ ವರದಿ ನೀಡುತ್ತಿಲ್ಲ ಎಂಬುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಎಲ್ಲೂರು ಗ್ರಾಮದ ತಜೆ ನಿವಾಸಿ ಹೈನುಗಾರಿಕೆಯನ್ನೇ ಜೀವನಾಧಾರವಾಗಿ ನಡೆಸಿಕೊಂಡು ಬಂದು ಇದೀಗ ಹತ್ತಕ್ಕೂ ಅಧಿಕ

ಯುಪಿಸಿಎಲ್‌ ನಿಂದ ಮತ್ತೆ ಪರಿಸರಕ್ಕೆ ಉಪ್ಪು ಮಿಶ್ರಿತ ರಾಸಾಯನಿಕ ನೀರು

ಕಾಪು ತಾಲೂಕಿನ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಿರೋಧಿಯಾಗಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯಿಂದ ಸ್ಥಳೀಯರಿಗೆ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆ ಉದ್ಬವವಾಗುತ್ತಿದೆ. ಇದೀಗ ಮತ್ತೆ ಇಂದು ಸಮದ್ರಕ್ಕೆ ಸಂಪರ್ಕ ಕಲ್ಪಿಸಲಾಗಿದ್ದ ಪೈಪ್ ಲೈನ್ ನ ಗೇಟ್ ವಾಲ್ ಭಾಗದಲ್ಲಿ ಉಪ್ಪು ಮಿಶ್ರಿತ ರಾಸಾಯನಿಕ ನೀರು ಹೊರ ಚುಮ್ಮಿದ್ದು, ಆ ನೀರು ತೆಂಕ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಕುಡಿಯುವ ನೀರಿನ ಬಾವಿ ಪ್ರದೇಶದಲ್ಲಿ ಇಂಗಿದ ಪರಿಣಾಮ ಈ ಭಾಗದ

ಕಾಪು ಹೊಸ ಮಾರಿಯಮ್ಮ ಸನ್ನಿಧಿಯಲ್ಲಿ ಆಟಿ ಮಾರಿಪೂಜೆ

ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ಆಟಿ ಮಾರಿ ಪೂಜೆಯು ಕೊವೀಡ್ ಸಮಸ್ಯೆಯಿಂದಾಗಿ ಸರಳವಾಗಿ ನಡೆದಿದೆ. ವಾರ್ಷಿಕವಾಗಿ ತುಳು ತಿಂಗಳುಗಳಾದ ಸುಗ್ಗಿ, ಜಾರ್ದೆ ಹಾಗೂ ಆಟಿ ಮಾರಿಪೂಜೆ ನಡೆಯುತ್ತಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲೆ ಹೊರಜಿಲ್ಲೆ, ಹೊರ ರಾಜ್ಯ, ದೇಶ ವಿದೇಶಗಳಿಂದಲೂ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು, ಆದರೆ ಈ ಬಾರಿ ಕೋವಿಡ್ ಸಮಸ್ಯೆಯಿಂದಾಗಿ ಸರ್ಕಾರದ ಸೂಚನೆಯಂತೆ ಸರಳವಾಗಿ ನಡೆಯುವುದರಿಂದ ಭಕ್ತಾಧಿಗಳ ಸಂಖ್ಯೆಯೂ ವಿರಳ

ಉದ್ಘಾಟನೆಗೆ ಮುನ್ನವೇ ಕುಸಿಯುವ ಭೀತಿಯಲ್ಲಿ ಅವರಾಲು-ಮುಲ್ಕಿ ಸೇತುವೆ

ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ ಒಳಗಾಗಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ಪಲಿಮಾರು ಗ್ರಾ.ಪಂ. ಸದಸ್ಯ ಶಿವರಾಮ್ ಎಂಬವರು, ಜನರ ಬಲು ಬೇಡಿಕೆಯ ಸೇತುವೆ ಇದಾಗಿದ್ದು, ಇದರ ಉಸ್ತುವಾರಿಯನ್ನು ಪಂಚಾಯತ್ ರಾಜ್ಯ ಇಂಜಿನಿಯರ್ ಇಲಾಖೆ, ಉಡುಪಿ.

ಸ್ವಿಮ್ಮಿಂಗ್ ಪೂಲ್ ರೂಪ ತಾಳಿದ ತೆಂಕ ಗ್ರಾ.ಪಂ ರಸ್ತೆ:ಸ್ಥಳೀಯರ ಆಕ್ರೋಶ

ಕಾಪು ತಾಲೂಕಿನ ತೆಂಕ ಎರ್ಮಾಳು ಗ್ರಾ.ಪಂ. ವ್ಯಾಪ್ತಿಯ ಬೀಚ್ ರಸ್ತೆಯ ಬಬ್ಬುಸ್ವಾಮಿ ದೈವಸ್ಥಾನದ ಸಂಪರ್ಕ ರಸ್ತೆ ಮಳೆ ನೀರು ನಿಂತು ಸ್ವಿಮಿಂಗ್ ಪೊಲ್ ರೂಪ ತಾಳಿದ್ದರೂ ಗ್ರಾ.ಪಂ. ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬುದಾಗಿ ಆ ಭಾಗದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಾಣ ಮಾಡಿದ ಬಬ್ಬುಸ್ವಾಮಿ ದೈವಸ್ಥಾನ ಸಂಪರ್ಕ ಕಾಂಕ್ರೀಟ್ ರಸ್ತೆ ಬಹುತೇಕ ಮರಳು ಸಾಗಾಟಕ್ಕೆ ನಲುಗಿ ಹೋಗಿ ಬಿರುಕು ಬಿಟ್ಟಿದ್ದರೂ ಗ್ರಾ.ಪಂ. ತುಟಿ

ಯುಪಿಸಿಎಲ್ ಗುತ್ತಿಗೆ ಕಂಪನಿಯ ಸಿಬ್ಬಂದಿ ಅಪಘಾತಕ್ಕೆ ಬಲಿ

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯ ಎಲೆಕ್ಟ್ರಿಕಲ್ ಗುತ್ತಿಗೆ ಕಂಪನಿ ಹೆರಿಕಾನ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಸಿಬ್ಬಂದಿಯೊರ್ವ ಪಡುಬಿದ್ರಿ ಕಾರ್ಕಳ ರಸ್ತೆಯ ಸುಜ್ಲಾನ್ ಕಂಪನಿಯ ಸಮೀಪ ಅಪಘಾತಕ್ಕೆ ಬಲಿಯಾಗಿದ್ದಾರೆ. ಮೃತ ಯುವಕ ಪಶ್ಚಿಮ ಬಂಗಾಳ ನಿವಾಸಿ ಗುರುದಾಸ್,(26), ತಂದೆಯನ್ನು ಕಳೆದುಕೊಂಡು ತಾಯಿಯೊಂದಿಗೆ ವಾಸವಿದ್ದ ಈತ ಒರ್ವನೇ ಮಗ, ಕಳೆದ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದು, ಮದುವೆಯ ಸಂದರ್ಭ

ಭೂಗತವಾಗುತ್ತಿರುವ ಪಡುಬಿದ್ರಿ ಸ್ಮಶಾನ ಮುಕ್ತಿಗಾಗಿ ಬೇಡಿಕೆ..

ತನ್ನ ಅಸ್ಥಿತ್ವವನ್ನೇ ಕಳೆದುಕೊಂಡು ಭೂಗತದ ಅಂಚಿನಲ್ಲಿರುವ ಪಡುಬಿದ್ರಿ ಸ್ಮಶಾನ ಉಳಿಸುವಂತೆ ಅಂಬೇಡ್ಕರ್ ಯುವಸೇನೆಯ ತಾಲೂಕು ಅಧ್ಯಕ್ಷ ಲೋಕೇಶ್ ಕಂಚಿನಡ್ಕ ಹೆಸರಲ್ಲಿ ಸಾಮಾಜಿಕ ಜಲತಾಣ ದಲ್ಲಿ ಫೋಸ್ಟೊಂದು ಹರಿದಾಡುತ್ತಿದಂತೆ ಚುರುಕಾದ ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಭೇಟಿ ನೀಡಿ ಸಮಸ್ಯೆ ತಕ್ಷಣವೇ ಪರಿಹಾರ ಮಾಡುವ ಭರವಸೆ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿಯ ಕಂಚಿನಡ್ಕ ಭಾಗದಲ್ಲಿ ಇರುವ ಏಕೈಕ ಸಾರ್ವಜನಿಕ ರುದ್ರಭೂಮಿ ಇದಾಗಿದೆ, ಇಲ್ಲಿ ಎಲ್ಲಾ

ಯುಪಿಸಿಎಲ್ ಅವಾಂತರ: ಹತ್ತಾರು ಎಕ್ರೆ ಕೃಷಿ ಭೂಮಿ ಮುಳುಗಡೆ

ತೆಂಕ ಎರ್ಮಾಳು ತೊಟ್ಟಂ ಪ್ರದೇಶದ ಕೃಷಿ ಚಟುವಟಿಕೆ ನಡೆಸಿದ ಹತ್ತಾರು ಎಕ್ರೆ ಕೃಷಿ ಭೂಮಿ ಯುಪಿಸಿಎಲ್ ಕಂಪನಿಯ ನಿರ್ಲಕ್ಷ್ಯದಿಂದ ಮುಳುಗಡೆಗೊಂಡಿದ್ದು, ರೈತರು ಕಂಗಾಲಾಗಿದ್ದಾರೆ. ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನ ವಿರೋಧದ ನಡುವೆಯೂ ಅಸ್ಥಿತ್ವಕ್ಕೆ ಬಂದ ಈ ಕಂಪನಿಯ ಪೈಪ್‌ಲೈನ್ ತೆಂಕ ಎರ್ಮಾಳಿನ ತೊಟ್ಟಂ ಬಳಿ ಸಮುದ್ರಕ್ಕೆ ಸಂಪರ್ಕ ಹೊಂದಿದ ಬಳಿಕ, ಆ ಭಾಗದ ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಪ್ರದೇಶದ ಮಳೆ ನೀರು ಸಮುದ್ರ ಸೇರಲು ಈ ಪೈಪ್ ಲೈನ್

ಎರ್ಮಾಳಿನ ಅಕ್ರಮ ಮರಳು ಅಡ್ಡೆಗೆ ತಹಶಿಲ್ದಾರ್ ದಾಳಿ

ತೆಂಕ ಎರ್ಮಾಳು ಗ್ರಾ.ಪಂ. ವ್ಯಾಪ್ತಿಯ ಖಾಸಗಿ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾದ ಸುಮಾರು 8೦೦ ಟನ್ ಸಿಲಿಕಾ ಮರಳನ್ನು ಕಾಪು ತಹಶಿಲ್ದಾರ್ ಪ್ರತಿಭಾ ಆರ್. ತಂಡ ದಾಳಿ ನಡೆಸಿ ವಶಕ್ಕೆ ಪಡೆದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ಭೂ ಮತ್ತು ಗಣಿ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ. ಗಿರೀಶ್ ಎಂಬಾತ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ಸಿಲಿಕಾ ಮರಳು ದಾಸ್ತಾನು ಮಾಡಿದ ಬಗ್ಗೆ ಮಾಹಿತಿ ತಿಳಿದ ಕಾಪು ತಹಶಿಲ್ದಾರ್ ತಂಡ ದಾಳಿ ನಡೆಸಿದೆ. ತಂಡದಲ್ಲಿ ಕಾಪು ಆರ್.