ಮಂಗಳೂರು: ನಗರದ ಪಣಂಬೂರು ಬೀಚ್ ಬಳಿ ಮೀನುಗಾರಿಕೆಗೆಂದು ತೆರಳಿದ್ದ ಬೋಟ್ ಇಂದು ಬೆಳಗ್ಗೆ ದುರಂತಕ್ಕೀಡಾಗಿದೆ. ಪರಿಣಾಮ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ನಾಲ್ವರನ್ನು ರಕ್ಷಿಸಲಾಗಿದೆ. ಮೀನುಗಾರಿಕೆಗೆ ತೆರಳಿರುವ ಶರೀಫ್ ನಾಪತ್ತೆಯಾದವರು. ಮೀನುಗಾರಿಕೆ ನಡೆಸಲು ಅಝರ್ ಎಂಬವರ ಮಾಲಕತ್ವದ ಎಫ್.ಎನ್.ಚಿಲ್ಡ್ರನ್ಸ್ ಗಿಲ್ ನೆಟ್ ದೋಣಿಯು ಸಮುದ್ರಕ್ಕೆ ತೆರಳಿತ್ತು.
ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೆÇಲೀಸರು