ಮಂಗಳೂರು: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ
ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ. ಸಮಿತ್ ಶೆಟ್ಟಿ ಕೊಟ್ಟಾರದಲ್ಲಿರುವ ತನ್ನ ರೂಮ್ ನಿಂದ ಇಂದು ಬೆಳಗ್ಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾ.ಹೆ. 66ರ ಪಂಪ್ವೆಲ್ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ
ನ.27ರಂದು ನಗರದ ಪಂಪ್ವೆಲ್ ಬಳಿ ಕನ್ಯಾಕುಮಾರಿ ಮೂಲದ ಪಿ. ಶಿವರಾಜ್ (49) ಎಂಬುವವರಿಗೆ ಬಿದ್ದುಕೊಂಡಿದ್ದ ಹತ್ತು ಲಕ್ಷ ರೂಪಾಯಿಯ ನೋಟಿನ ಕಟ್ಟು ಸಿಕ್ಕಿದೆ. ಇವರು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು ಬೋಂದೇಲ್ನ ಕೃಷ್ಣನಗರದಲ್ಲಿ ವಾಸವಾಗಿದ್ದಾರೆ.ಇವರು ನ.27ರಂದು ಎಂದಿನಂತೆ ಕುಡಿಯುತ್ತಾ ಪಂಪ್ವೆಲ್ ಮೇಲ್ಸೇತುವೆ ಬಳಿ ಬೀಡಿ ಸೇದುತ್ತಾ ನಿಂತಿದ್ದರು. ಅಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ಇಂದು ಚೀಲ ಬಿದ್ದಿತ್ತು. ಅಲ್ಲೇ ಇದ್ದ ಕೂಲಿ ಕಾರ್ಮಿಕ ಚೀಲ ಹಾಗೂ
ಮಂಗಳೂರು,ಅ.18(ಕ.ವಾ):- ಪಂಪ್ ವೆಲ್ ನಲ್ಲಿ ಕರ್ನಾಟಕ ಬ್ಯಾಂಕ್ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಅ.18ರಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಸ್ಮಾರ್ಟ್ ಸಿಟಿ, ಕರ್ನಾಟಕ ಬ್ಯಾಂಕ್ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಇತರೆ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.
ನಗರದ ಪಂಪ್ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್ವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೈಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್
ನಗರದ ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಸಾವನ್ನಪ್ಪಿದ ಯುವಕ.ಈತ ನಂತೂರಿನಿಂದ ಪಂಪ್ವೆಲ್ ನತ್ತ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಡಿಕ್ಕಿಯಾಗಿ ಪರಾರಿಯಾಗಿದೆ. ಆನಂತರ, ಇತರೇ
ಮಂಗಳೂರು: ಮಹಿಳೆ ಮತ್ತು ಮಗುವಿದ್ದ ಕಾರಿನ ಟಯರ್ ಪಂಕ್ಚರ್ ಆಗಿದ್ದು, ಇದನ್ನು ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ಬೇರೆ ಟಯರ್ ಅಳವಡಿಸಿ ಮಾನವೀಯತೆ ಮೆರೆದರು. ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ಎಳೆಯ ಮಗುವಿನ ಜೊತೆಗೆ ಕಾರಿನಲ್ಲಿ ತೆರಳುವ ಸಂದರ್ಭ ಪಂಪ್ವೆಲ್ ಬಳಿ ಟಯರ್ ಪಂಕ್ಚರ್ ಆಗಿತ್ತು. ಇದೇ ಸಂದರ್ಭ ಹೈವೇ ಪ್ಯಾಟ್ರಲ್ ಸ್ಥಳದಲ್ಲಿದ್ದು, ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ