ಹಣ, ಅಧಿಕಾರ ಇದ್ದಲ್ಲಿ ಯಾವ ಕಾನೂನುಬಾಹಿರ ಕೃತ್ಯ ಮಾಡಿದರೂ ತಡೆಯುವವರು ಇಲ್ಲ ಎನ್ನುವ ಮನೋಭಾವ ಕೆಲವರಲ್ಲಿದೆ. ಈ ಮನೋಭಾವಕ್ಕೆ ತಕ್ಕಂತೆ ಇಂಥಹ ಕಾನೂನುಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕುವ ಅಧಿಕಾರಿ ವರ್ಗವೂ ಸುಮ್ಮನಿದ್ದರೆ, ಇಂಥವರ ದಬ್ಬಾಳಿಕೆಯೂ ಹೆಚ್ಚಾಗುತ್ತದೆ. ಇಂಥಹುದೇ ಒಂದು ಪ್ರಕರಣ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲೂ ನಡೆದಿದ್ದು, ರಸ್ತೆ
ಪುತ್ತೂರು: ನ.9ರಂದು ರಾತ್ರಿ ಮೊಟ್ಟೆತ್ತಡ್ಕ ಸಮೀಪ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರ ಪೈಕಿ ಸ್ಕೂಟರ್ ಹಿಂಬದಿ ಸವಾರ ಕುರಿಯ ನಿವಾಸಿ ವಸಂತ ರೈ ಬಳ್ಳಮಜಲು ಅವರು ಮೃತಪಟ್ಟಿದ್ದಾರೆ. ಪುತ್ತೂರನಲ್ಲಿ ಮೇಸ್ತ್ರಿ ಕೆಲಸ ಮುಗಿಸಿಕೊಂಡು ಮನೆ ಕಡೆಗೆಂದು ಕುರಿಯ ನಿವಾಸಿ ನಾರಾಯಣ ನಾಯ್ಕ ಬಳ್ಳಮಜಲು ಅವರು ಚಲಾಯಿಸುತ್ತಿದ್ದ ಆಕ್ಟಿವಾ ಸ್ಕೂಟರ್ ಮೊಟ್ಟೆತ್ತಡ್ಕ ತಲುಪುತ್ತಿದ್ದಂತೆ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ
ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಂಬೇಡ್ಕರ್ ಅಪತ್ ಬಾಂಧವ ಟ್ರಸ್ಟ್ ನ ಅಧ್ಯಕ್ಷನ ವಿರುದ್ದ ನ .7ರಂದು ಪೊಕ್ಸೋ ಪ್ರಕರಣ ದಾಖಲಾಗಿದೆ. ರಾಜು ಹೊಸ್ಮಠ ಆರೋಪಿಯಾಗಿದ್ದು ಈತನ ವಿರುದ್ದ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತ: ಕೌಡಿಚ್ಚಾರ್ ನಿವಾಸಿ ಸದ್ಯ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸಂತ್ರಸ್ತೆಯ ಕುಟುಂಬವೂ ವಾಸಿಸುತಿದೆ. ಸಂತ್ರಸ್ತೆಗೆ ಆರೋಪಿಯ ಪರಿಚಯವೂ 2019 ರಲ್ಲಿ ಆಗಿತ್ತು ಎಂದು
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕನಿಂದ ಮಕ್ಕಳ ಕಲ್ಯಾಣ ಸಮಿತಿಗೆ ಹಾಗೂ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾನೆ, ಹಲ್ಲೆ ನಡೆಸಿದ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆಯಂದು ಒಳಗಾದ ದೇವರ ಬಲಿ ಉತ್ಸವ ವಾಡಿಕೆಯಂತೆ ದೀಪಾವಳಿ ಅಮವಾಸ್ಯೆ ದಿನದಂದು ಸಂಪ್ರದಾಯದಂತೆ ಆರಂಭಗೊಂಡಿದೆ. ಕಳೆದ ರಾತ್ರಿ ಶ್ರೀ ದೇವರ ಬಲಿ ಹೊರಟು ದೀಪಾವಳಿ ಉತ್ಸವ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ಪ್ರಧಾನ ಅರ್ಚಕ ವೇದ.ಮೂ.ವಿ.ಎಸ್.ಭಟ್ ಮತ್ತು ವೇ.ಮೂ. ವಸಂತ ಕೆದಿಲಾಯ ಅವರ ನೇತೃತ್ವದಲ್ಲಿ ಉತ್ಸವಾದಿಗಳು ನಡೆಯಿತು. ದೇವಳದ ಪ್ರಾಕಾರ ಗುಡಿಗಳಲ್ಲಿ ಹೂವಿನ ಪೂಜೆ
ಪುತ್ತೂರು: ಹಿಂದೂ ಸಮಾಜದ ಶಕ್ತಿಯನ್ನು ವೃದ್ಧಿಸಲು ನಮ್ಮ ಮನಸ್ಸು ಮತ್ತು ಹೃದಯ ಬೆಳಕಾಗಬೇಕು. ಅದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ದೀಪದ ಬೆಳಕು ಎಲ್ಲರ ಮನೆ ಮನೆಯಲ್ಲಿ ಬೆಳಗಲಿ. ಮನೆ ದೇವಸ್ಥಾನ ಆಗಲಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಆಹ್ವಾನಿತ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಮರಸ್ಯ ವಿಭಾಗದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಉರ್ಲಾಂಡಿ
ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿ ಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ.ಪೆರಮೊಗರಿನ ಕೋಳಿ ಅಂಗಡಿಯ ಸೋಮಶೇಖರ್ ರೈ ಮೃತಪಟ್ಟವರು.ಇವರು ಮೂಲತ: ಸವಣೂರು ಪುಣ್ಚಪ್ಪಾಡಿ ನಿವಾಸಿಯಾಗಿದ್ದು ಸದ್ಯ ಪೆರಮೊಗರಿನಲ್ಲಿ ವಾಸವಾಗಿದ್ದರು . ಇವರಿಗೆ ಪುಣ್ಚಪ್ಪಾಡಿಯಲ್ಲಿ ತೋಟವಿದ್ದು ಅಲ್ಲಿ ಕೆಲಸ ಮಾಡಿಸಿ ವಾಪಸ್ಸು ಪೆರಮೊಗರುವಿಗೆ
ಪುತ್ತೂರು: ದೇಶದ ಜನರ ಸೇವೆ ಮತ್ತು ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಹಾಗಾಗಿ ಬಿಜೆಪಿಯ ಕಾರ್ಯಕರ್ತರಿಗೆ ರಾಜಕಾರಣ ವೃತ್ತಿಯಲ್ಲ, ಅದೊಂದು ವೃತವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕಲ ಅನಾವರಣ ಕಾರ್ಯಕ್ರಮಗಳು ಈಗಾಗಲೇ ನಡೆಯುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲದ ಬೂತ್ ಅಧ್ಯಕ್ಷರ ಮನೆಗಳಿಗೆ
ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ ಹಾಡಬೇಕೆಂಬ ನಿರ್ದೇಶನದಂತೆ ಪುತ್ತೂರು ಮಿನಿ ವಿಧಾನ ಸೌಧ ಸಭಾಂಗಣ ದಲ್ಲಿ ಲಕ್ಷ ಕಂಠಗಳ ಗೀತ ಗಾಯನ
ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2010ರಲ್ಲಿ ಪೂರೈಸಿ ಬಳಿಕ ಎಂಬಿಬಿಎಸ್ ಪದವಿಯನ್ನು ಹಾಸನ ಮೆಡಿಕಲ್ ಕಾಲೇಜಿನಲ್ಲಿ ಪಡೆದು ಎಂ.ಡಿ ಪೀಡಿಯಾಟ್ರಿಕ್ಸ್ ನ್ನು