ಪುತ್ತೂರು: ಪುತ್ತೂರು ಶಾಸಕರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ಮಾಹಿತಿ ಇಲ್ಲದೆ ಕೃಷಿಕರು ಹಾಗೂ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ,
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಫಸಲು ಭೀಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಕೈಬಿಟ್ಟಿರುವುದು ಅತ್ಯಂತ ನಿರಾಶದಾಯಕವಾಗಿತ್ತು. ಇದೀಗ ಅದನ್ನು ಸೇರ್ಪಡೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಈ ಬಗ್ಗೆ ರೈತರು ನನ್ನ ಗಮನಕ್ಕೆ ತಂದಾಗ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಮಂತ್ರಿ ಮಲ್ಲಿಕಾರ್ಜುನ ಇವರನ್ನು ಭೇಟಿಯಾಗಿ ನಿನ್ನೆ ನಡೆದ ಕ್ಯಾಬಿನೆಟ್ ನಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಫಸಲು ಭೀಮಾ ಯೋಜನೆಗೆ
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ 514ನೇ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧದಲ್ಲಿರುವ ತಹಶಿಲ್ದಾರ್ ಸಭಾಂಗಣದಲ್ಲಿ ನಡೆಯಿತು. ಸಂಸ್ಮರಣಾ ಜ್ಯೋತಿ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ರಾಜದಾನಿ ಬೆಂಗಳೂರನ್ನು ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಂಪೇ ಗೌಡರವರು 14ನೇ ಶತಮಾನದಲ್ಲಿ ನಿರ್ಮಿಸಿಕೊಟ್ಟಿದ್ದಾರೆ. ಅವರ ದೂರ ದೃಷ್ಠಿಯ ಕಲ್ಪಣೆಗಳು ಮಹತ್ವವಾಗಿದ್ದು 21ನೇ ಶತಮಾನದಲ್ಲಿಯೂ
ಪುತ್ತೂರು: ಯುವಕರು ಸಮಾಜ ಕಟ್ಟಬೇಕು ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ ಮುಸ್ಲಿಂ ಸಮುದಾಯ ಒಕ್ಕೂಟದ ವತಿಯಿಂದ ಪುರಭವನದಲ್ಲಿ ನೂತನ ಸ್ಪೀಕರ್ ಯು.ಟಿ. ಖಾದರ್ ಮತ್ತು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಯುವ ಸಮುದಾಯ ಉತ್ತಮ ನಡೆಯೊಂದಿಗೆ ಮುಂದುವರಿದಲ್ಲಿ
ಪುತ್ತೂರು ತಾಲೂಕಿನ ಕೊಯಿಲದಲ್ಲಿ ನಿರ್ಮಾಣವಾದ ಪಶು ವೈದ್ಯಕೀಯ ಕಾಲೇಜಿಗೆ 2012-13ನೇ ಸಾಲಿನಲ್ಲಿ ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಬಜೆಟ್ ನಲ್ಲಿ ಪಶು ವೈದ್ಯಕೀಯ ಕಾಲೇಜು ಘೋಷಿಸಿ 145 ಕೋಟಿ ರೂ. ಮೀಸಲಿಟ್ಟಿದ್ದರು. ಬಳಿಕ ಸದಾನಂದ ಗೌಡ ಕನಸಿನ ಕೂಸಿಗೆ 2016 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ರು ಶಿಲಾನ್ಯಾಸ ನೆರವೇರಿಸಿದ್ದರು. ಆದ್ರೆ ಅಂದಿನಿಂದ ಇಂದಿನ ತನಕವೂ ಕಾಮಗಾರಿ ಕುಂಟುತ್ತಾ ಸಾಗಿ ಒಂದು ಹಂತಕ್ಕೆ ಬಂದು ನಿಂತಿದೆ.
ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತಿದ್ದ ಬೈಕ್ ಅಪಘಾತಗೊಂಡು ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಜೂ.22 ರಂದು ನಡೆದಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಮ್ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ನೆಹರುನಗರ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ ಗ್ರಾಮದ ನಿತಿನ್ ಬೆಳಗ್ಗೆ ಕಾಲೇಜು ಬರುವಾಗ ಬೈಕ್ ಪಾದಚಾರಿ ಇಳಂತಿಲದ ಪೆರ್ನಾಂಡೀಸ್ (64 ವ.) ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ
ಪುತ್ತೂರು :ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28 ವ.) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ
ಪುತ್ತೂರು ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್
ಪುತ್ತೂರು: ಮತಾಂತರದ ಪಿಡುಗು ಸಾಮಾನ್ಯವಾದುದಲ್ಲ. ಇದರ ವಿರುದ್ಧ ತಂದ ಕಾನೂನುಗಳನ್ನು ರದ್ದು ಮಾಡುವ ಮೂಲಕ ನಮ್ಮ ಮನೆಯಲ್ಲಿ ನಮಗೇ ಸ್ವಾತಂತ್ರ್ಯ ಇಲ್ಲದ ಸ್ಥಿತಿಯನ್ನು ರಾಜ್ಯ ಸರಕಾರ ಮಾಡುತ್ತಿದೆ. ಸಂತರಿಗೆ ಹಿಂದೂ ಎಂಬುದು ಮಾತ್ರ ಪಕ್ಷ. ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಯಾವುದೇ ಸರಕಾರ ಕೆಲಸ ಮಾಡಿದರೂ ಬೀದಿಗಿಳಿದು ಹೋರಾಟ ಮಾಡಲು ಸಂತರೆಲ್ಲರೂ ಈಗಾಗಲೇ ತೀರ್ಮಾನ ಮಾಡಿದ್ದೇವೆ ಎಂದು ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಸರಕಾರಕ್ಕೆ ಎಚ್ಚರಿಕೆ
ಬಂಟರ ಸಂಘಗಳ ವತಿಯಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಶೋಕ್



























