Home Posts tagged #puttur (Page 25)

ಸರಕಾರಿ ವ್ಯವಸ್ಥೆಯ ದುರುಪಯೋಗ : ಸಿಬ್ಬಂದಿ ಮೇಲೆ ಅಧಿಕಾರಿಯಿಂದ ದೂರು

ಪುತ್ತೂರು: ಖಾಸಗಿ ವಿಚಾರಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿರುವುದಾಗಿ ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕಾರ್ಯನಿರ್ವಹಣಾಧಿಕಾರಿಯೊಬ್ಬರು ಕಚೇರಿ ಸಿಬ್ಬಂದಿಗೆ ಆರೋಪಿಸಿ, ದೂರು ನೀಡಿದ್ದಾರೆ. ತಾಲೂಕು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ನೀಡಿದ ದೂರಿನಲ್ಲಿ ತಿಳಿಸಿರುವಂತೆ, ಸಿಬ್ಬಂದಿ ಶಿವಾನಂದ ತನ್ನ

ಬ್ರಹ್ಮಮೊಗೇರ್ ಯಕ್ಷಗಾನ ಬಯಲಾಟ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಬ್ರಹ್ಮಮೊಗೇರ ಆರಾಧನಾ ಟ್ರಸ್ಟ್‍ನ ವತಿಯಿಂದ ಬ್ರಹ್ಮಮೊಗೇರೆರ್ ಯಕ್ಷಗಾನ ಬಯಲಾಟ, ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮೊಗೇರ ದೈವಗಳ ದರ್ಶನ ಪಾತ್ರಿಗಳ ಸನ್ಮಾನ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಗದ್ದೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ತುಳು ನಾಡು ಎಂಬುದು ಒಂದು

ಪುತ್ತೂರಿನ ಪುಷ್ಪರೇಖಾಗೆ ಪಿಎಚ್‍ಡಿ ಪದವಿ.

ಪುತ್ತೂರು :ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ, ಪ್ರಸ್ತುತ ವಿವಾಹಿತರಾಗಿ ಬೆಂಗಳೂರಿನಲ್ಲಿ ವಾಸವಾಗಿರುವ ಪುಷ್ಪರೇಖಾ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ಪ್ರದಾನ ಮಾಡಿ ಗೌರವಿಸಿದೆ. ಪುಷ್ಪರೇಖಾ ಅವರು ರಸಾಯನ ಶಾಸ್ತ್ರ ವಿಭಾಗಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನ ಶಾಸ್ತ್ರ ವಿಭಾಗದ ಪ್ರಾದ್ಯಾಪಕಿ ಪ್ರೊ. ಬಿ.ಕೆ. ಸರೋಜಿನಿ ಅವರ ಮಾರ್ಗದರ್ಶನದಲ್ಲಿ ರಸಾಯನ ಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿ

ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

ಪುತ್ತೂರು : ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ಆಯ್ಕೆಯಾಗಿದ್ದಾರೆ. ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಈಶ್ವರಮಂಗಲ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ.ನಿಖಿಲ್.ಕೆ,ಉಪಾಧ್ಯಕ್ಷರಾಗಿ ಬಂಟ್ವಾಳ

ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ವಿರೋಧಿ ನೀತಿಗೆ ಖಂಡನೆ..!!

ಪುತ್ತೂರು : ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಮತ್ತು 2022-23ನೇ ಸಾಲಿನಲ್ಲಿ ಕಾರ್ಮಿಕರ ಮಕ್ಕಳಿಗೆ ವಿತರಿಸಬೇಕಾಗಿದ್ದ ಶೈಕ್ಷಣಿಕ ಧನಸಹಾಯವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜ.9ರಂದು ಬೆಂಗಳೂರಿನ ಕಾರ್ಮಿಕ ಕಲ್ಯಾಣ ಮಂಡಳಿಯ ಸುರಕ್ಷಾ ಭವನದ ಎದುರು ನಡೆಸಲುದ್ದೇಶಿಸಿರುವ ಪ್ರತಿಭಟನೆಗೆ ಅವಕಾಶ ನೀಡದ ಕಾರಣ ಮುಂದೆ ಕಾನೂನು ಹೋರಾಟಕ್ಕಿಳಿಯುತ್ತೇವೆ ಎಂದು ಕಡಬ ಮರ್ಧಾಳದ ಶ್ರಮಿಕ ಕಟ್ಟಡ ಮತ್ತು ಇತರೇ ನಿರ್ಮಾಣ

ಪುತ್ತೂರು : ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಉದ್ಘಾಟನೆ

ಪುತ್ತೂರು: ಉಪ ಬೆಳೆಯಾಗಿ ಅತಿ ಬೇಡಿಕೆ ಪಡೆಯುತ್ತಿರುವ ಕಡಿಮೆ ಜಾಗ, ಖರ್ಚು ಬಯಸುವ ಮೀನಿನ ಕೃಷಿಗೆ ಮುಂದಾಗಬೇಕು ಎಂದು ರಾಜ್ಯ ಬಂದರು ಮತ್ತು ಒಳನಾಡು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರ ಮನವಿ ಮಾಡಿದ್ದಾರೆ. ಪುತ್ತೂರಿನಲ್ಲಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳನ್ನೊಳಗೊಂಡ ಉಪವಿಭಾಗ ವ್ಯಾಪ್ತಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ತಾಲೂಕು ಪಂಚಾಯತ್ ಕಟ್ಟಡದಲ್ಲಿ ಅವರು ಉದ್ಘಾಟಿಸಿದರು.ಇಂದು ಒಳನಾಡು ಮೀನುಗಾರಿಕೆಗೆ ಸಂಬಂಧಿಸಿ

ಪುತ್ತೂರು : ಬಸ್ ಇಲ್ಲದ ಮೇಲೆ ಪಾಸ್ ಯಾಕೆ? ವಿದ್ಯಾರ್ಥಿಗಳ ಆಕ್ರೋಶ

ಪುತ್ತೂರು: ರೆಂಜ ಮಾರ್ಗವಾಗಿ ಸುಳ್ಯ ಪದವಿಗೆ ಬಸ್ ಸಂಪರ್ಕ ಕಲ್ಪಿಸಬೇಕೆಂದು ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜ.3 ರಂದು ಪುತ್ತೂರು ತಾಲೂಕು ಆಡಳಿತ ಸೌಧ ಮತ್ತು ಕೆಎಸ್‍ಆರ್‍ಟಿಸಿ ವಿಭಾಗೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಬಸ್ ಇಲ್ಲದ ಮೇಲೆ ನಮಗೆ ಪಾಸ್ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರು ರೆಂಜ ಮಾರ್ಗವಾಗಿ ಸುಳ್ಯಪದವಿಗೆ ಈ ಹಿಂದೆ ಬಸ್ ಸಂಪರ್ಕ ವ್ಯವಸ್ಥೆ ಇದ್ದು

ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಗೃಹ ಸಚಿವರ ಮಾರಕ ಹೇಳಿಕೆ ಆರೋಪ

ಪುತ್ತೂರು: ವಿಧಾನಸಭೆಯ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಅಡಿಕೆ ಬೀದಿ ಪಾಲಾಗುತ್ತದೆ ಎಂಬ ಮಾರಕ ಹೇಳಿಕೆ ನೀಡಿ ಬೆಳೆಗಾರರನ್ನು ಸಂದಿಗ್ಧ ಪರಿಸ್ಥಿತಿಗೆ ತಂದೊಡ್ಡಿದ್ದಾರೆಂದು ಆರೋಪಿಸಿದಲ್ಲದೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತತ್‍ಕ್ಷಣವೆ ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ವತಿಯಿಂದ ಪುತ್ತೂರು ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗೆ ಜ.2ರಂದು ಮನವಿ

ಅಡಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಬಾಲಿಶತನದ ಹೇಳಿಕೆಗೆ ಖಂಡನೆ, ಕಿಸಾನ್ ಘಟಕದ ವತಿಯಿಂದ ಪ್ರತಿಭಟನೆ

ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ರಾಜ್ಯ ಗೃಹ ಸಚಿವರು ಅಡಕೆ ಬೆಳೆಗಾರರ ಕುರಿತು ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನಾ ಸಭೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿಕ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಅಡಕೆಯ ಕುರಿತು ಗೃಹ ಸಚಿವರು ಅಡಕೆಗೆ ಭವಿಷ್ಯವಿಲ್ಲ ಎಂದು ವಿರೋಧಿ ಹೇಳಿಕೆ

ಪುತ್ತೂರಿನಲ್ಲಿ ರಸ್ತೆ ನಿರ್ಮಾಣಕ್ಕೆ ತಹಶೀಲ್ದಾರ್‍ಗೆ ಮನವಿ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು -ಬಂಟಕಲ್ಲು-ಬಾರೆಕೊಚ್ಚಿ-ಕಟ್ಟತ್ತಾರು ಕಾಲನಿಗೆ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ (ವಾಸುದೇವ ಬಣ) ಹಾಗೂ ಸ್ಥಳೀಯ ನಿವಾಸಿಗಳು ಪುತ್ತೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.ಈ ಭಾಗದಲ್ಲಿ ಸುಮಾರು ೩೦ ಮನೆಗಳಿಗೆ ಸಂಪರ್ಕ ರಸ್ತೆಯಿಲ್ಲ. ಹಲವು ದಶಕಗಳಿಂದ ಇವರು ವಾಸಿಸುತ್ತಿದ್ದರೂ ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ರೋಗಿಯನ್ನು ಹೊತ್ತುಕೊಂಡೇ ಸಾಗಬೇಕಾದ ಸ್ಥಿತಿ