ಪುತ್ತೂರು: ಅಮೃತ ನಗರೋತ್ಥಾನ ಯೋಜನೆಯಲ್ಲಿ ಈಗಾಗಲೇ ರೂ. 15 ಕೋಟಿ ಅಭಿವೃದ್ಧಿ ಯೋಜನೆಗಳ ಅಂದಾಜು ಪಟ್ಟಿ ತಯಾರಿಸಲಾಗಿದೆ. ಉಳಿಕೆ 10 ಕೋಟಿಗೆ ಶೀಘ್ರ ಅಂದಾಜು ಪಟ್ಟಿ ತಯಾರಿಸಲಾಗುವುದು ಎಂದು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ತಿಳಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯು ಅಧ್ಯಕ್ಷ ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯಿತು. ಹಾರಾಡಿ -ರೈಲ್ವೇ
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಮೊರಂಕಲ ನಿವಾಸಿ ಶೆಬಿನ್ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಳೆದ ಕೆಲವು ವರ್ಷಗಳಿಂದ ನೆಲ್ಯಾಡಿ ಯಲ್ಲಿ ಪ್ರೊಫೆಷನಲ್ ಕೊರಿಯರನ್ನು ನಡೆಸುತ್ತಿದ್ದ ಇವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಜೇಶ್, ನೆಲ್ಯಾಡಿ ಹೊರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ ಹಾಗೂ ಪೋಲಿಸ್
ಪುತ್ತೂರು: ವರ್ಷದ ಹಿಂದೆ ಪಾಟ್ರಕೋಡಿಯಲ್ಲಿ ಪತ್ತೆಯಾದ ಭಾರಿ ಪ್ರಮಾಣದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪಾಟ್ರಕೋಡಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಪ್ರಕರಣದಲ್ಲಿ ಪತ್ತೆ ಮಾಡಿದ ಪೆÇಲೀಸರು ಅರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ 2ನೇ ಆರೋಪಿ ಕಾಸರಗೋಡು ಮಂಜೇಶ್ವರ ಹೊಸಂಗಡಿ ನಿವಾಸಿ ಮಹಮ್ಮದ್ ಶಫೀಕ್ ಅವರು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ
ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ಕೊಡಿಯಾಲದ ಗುತ್ತಿನಮನೆ ನಾರಾಯಣ ಎಂಬುದಾಗಿ ತಿಳಿದು ಬಂದಿದೆ.ಘಟನೆಯಿಂದ ಮತ್ತೋರ್ವರಾದ ಸುಜಿತ್ ಗುತ್ತಿನಮನೆ ಎಂಬುವವರು ಗಾಯಾಳಾಗಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಮಲ್ಪೆ : ಮಲ್ಪೆ ಕಡಲತೀರದಲ್ಲಿ ಜಲಸಾಹಸ ಕ್ರೀಡೆಗಳನ್ನು ಆರಂಭಿಸಲು ಜಿಲ್ಲಾಡಳಿತವು ಅವಕಾಶ ಕಲ್ಪಿಸಿದ್ದು, ಅದರಂತೆ ರವಿವಾರ ಜಲಸಾಹಸಗಳು ಆರಂಭಗೊಳ್ಳುವ ಮೂಲಕ ಮಲ್ಪೆ ಬೀಚ್ನಲ್ಲಿ ಚಟುವಟಿಕೆ ಗರಿಗೆದರಿವೆ. ಮಳೆಗಾಲದ ಹಿನ್ನೆಲೆಯಲ್ಲಿ 5 ತಿಂಗಳಿಂದ ಬೀಚ್ನಲ್ಲಿ ಎಲ್ಲ ಚಟುವಟಿಕೆಗಳು ಸ್ಥಗಿತವಾಗಿದ್ದವು. ಸೆ. 15ಕ್ಕೆ ನಿಷೇಧದ ಅವಧಿ ಮುಗಿದರೂ ಪ್ರತಿಕೂಲ ಹವಾಮಾನದ ಕಾರಣ ಅವಕಾಶ ನೀಡಿರಲಿಲ್ಲ. ಇದೀಗ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತೆ ಕಳೆ ಬಂದಂತಾಗಿದೆ. ರವಿವಾರ
ಪುತ್ತೂರು : ಅತಿವೃಷ್ಠಿಯಿಂದ ಅಡಿಕೆ ಬೆಳೆಗೆ ಉಂಟಾದ ಹಾನಿಗೆ ಪರಿಹಾರ ಮತ್ತು ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿಯಲ್ಲಿದ್ದು, ಅವುಗಳನ್ನು ತಕ್ಷಣವೇ ರದ್ದುಗೊಳಿಬೇಕೆಂದು ಆಗ್ರಹಿಸಿ ರೈತಸಂಘ,ಹಸಿರು ಸೇನೆಯಿಂದ ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟಮೆ ನಡೆಯಿತು. ರೈತಸಂಘದ ಕಛೇರಿಯಿಂದ ಮೆರವಣಿಗೆ ಮೂಲಕ ಹೊರಟ ರೈತಸಂಘದ ಕಾರ್ಯಕರ್ತರು ಪುತ್ತೂರು ಮಿನಿ ವಿಧಾನಸೌಧದ ಮುಂದೆ ಸೇರಿ ಪ್ರತಿಭಟನೆ ನಡೆಸಿದರು. ಈ
ಉಡುಪಿ: ಅ.1ರಂದು ಕೃತಿಗಳ ಅನಾವರಣ ಕಾರ್ಯಕ್ರಮ ಸುಹಾಸಂ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಇವರ ಜಂಟಿ ಆಶ್ರಯದಲ್ಲಿ ದಿ. ಪಂಡಿತ ಯಜ್ಞನಾರಾಯಣ ಉಡುಪರ ಪುರಾಣ ಭಾರತ ಕೋಶದ ಪರಿಷ್ಕೃತ ಆವೃತ್ತಿ, ಕೃತಿಗಳ ಅನಾವರಣ ಸಮಾರಂಭವು ಅಕ್ಟೋಬರ್ 1, 2022 ರ ಶನಿವಾರದಂದು ಸಂಜೆ ೪ ಗಂಟೆಗೆ ಉಡುಪಿಯ ಕಿದಿಯೂರು ಹೋಟೆಲ್ನ ಅನಂತಶಯನ ಸಭಾಂಗಣದಲ್ಲಿ ಜರುಗಲಿದೆ.ಈ ಕೃತಿಯ ಬಿಡುಗಡೆಯನ್ನು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷರಾದ
ಪುತ್ತೂರು : ಕನ್ನಡ ಭಾಷೆ ನಿಜವಾದ ಅರ್ಥದಲ್ಲಿ ಉಳಿದಿದೆ, ಉಳಿಯುತ್ತಿದೆ, ಬೆಳೆಯುತ್ತಿದೆ ಎಂದಾದರೆ, ಅದು ಹಳ್ಳಿಗಳಲ್ಲಿ, ಹೋಬಳಿಗಳಲ್ಲಿ ಮತ್ತು ತಾಲೂಕುಗಳಲ್ಲಿ ಮಾತ್ರ. ಕನ್ನಡ ಸಾಹಿತ್ಯ ಪರಿಷತ್ಗೆ ಭದ್ರ ಅಡಿಪಾಯ ಹಾಕಿರುವುದು ಹಳ್ಳಿಗಳು, ಹೋಬಳಿಗಳು ಮತ್ತು ತಾಲೂಕುಗಳು. ಹಾಗಾಗಿ ನಾನು ತಾಲೂಕು ಮಟ್ಟ ಮಾತ್ರವಲ್ಲದೆ, ಹೋಬಳಿ, ಗ್ರಾಮ ಮಟ್ಟಕ್ಕೂ ಹೋಗುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ ಜನಸಾಮಾನ್ಯರ ಪರಿಷತ್ ಆಗಬೇಕೆನ್ನುವುದು ನಮ್ಮ ಉದ್ದೇಶ ಎಂದು ಕನ್ನಡ ಸಾಹಿತ್ಯ
ವಿಟ್ಲ: ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ವಿಟ್ಲ ಸಮೀಪದ ಕಡಂಬು ಎಂಬಲ್ಲಿಯ ಯುವಕ ಮೃತಪಟ್ಟಿದ್ದಾರೆ.ವಿಟ್ಲ ಸಮೀಪದ ಕಡಂಬು ನಿವಾಸಿ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ ಉಸ್ಮಾನ್ ಅವರ ಪುತ್ರ ಮಹಮ್ಮದ್ ಅನಾಸ್(19) ಮೃತಪಟ್ಟ ಯುವಕ. ಈತ ಎಸಿ ಮೆಕಾನಿಕ್ ಆಗಿದ್ದು, ಎಸಿ ಟ್ರೈನಿಂಗ್ ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು. ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ಟೈನ್ ನಲ್ಲಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊರಗಡೆ ಎಸೆಯಲ್ಪಟ್ಟು, ಸ್ಥಳದಲ್ಲೇ
ಪುತ್ತೂರು: ಇಂದು ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಪೊಲೀಸರು ದಾಳಿ ನಡೆಸುತ್ತಿದ್ದು, ಪುತ್ತೂರು ಮೂಲದ ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಫ್ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ಪಿಎಫ್ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.



























