ಕರ್ನಾಟಕ ರಾಜ್ಯ ಸಂಘ ದಕ್ಷಿಣಕನ್ನಡ ಜಿಲ್ಲಾ ಯುವ ರೈತ ಘಟಕದ ವತಿಯಿಂದ ಕೊಕ್ಕಡ ಹೋಬಳಿ, ಕಣಿಯೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯ ಕಾನೂನು ಬಾಹಿರ ಚಟುವಟಿಕೆಯನ್ನು ಖಂಡಿಸಿ ನ್ಯಾಯಬದ್ಧವಾಗಿ ಕಾರ್ಯ ನಿರ್ವಹಿಸಲು ಬುದ್ಧಿವಾದ ಹೇಳಲಾಯಿತು. ಕಣಿಯೂರು ಗ್ರಾಮ, ಕೊಕ್ಕಡ ಹೋಬಳಿಯಲ್ಲಿ ರೈತ ಸಂಘದ ಯುವ ರೈತ ಘಟಕ ಮತ್ತು ಗ್ರಾಮಸ್ಥರು ಸಹ ರೈತರಿಗೆ ಆಗಿರುವ ಅನ್ಯಾಯದ
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ಜಲಸ್ಫೋಟದಿಂದ ಹಾನಿಯಾದ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಯಲ್ಲಿ SKSSF ವಿಖಾಯ ಕಾರ್ಯಕರ್ತರು ತೊಡಗಿದ್ದಾರೆ. ನೀರಿನಿಂದ ಮುಳುಗಿದ್ದ ಮನೆಗಳ ಸ್ವಚ್ಚತೆ, ಕರೆಂಟ್ ಲೈನ್ ದುರಸ್ತಿ , ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿರುವ ಮರಗಳ ತೆರವು, ಇನ್ನಿತರ ಪರಿಹಾರ ಕಾರ್ಯಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಜಿ.ಕೆ ಹಮೀದ್, ಪಿ.ಡಿ.ಓ ಸರಿತಾ ಡಿಸೋಜ, ಗ್ರಾ. ಪಂ. ಸದಸ್ಯರಾದ ಎಸ್.ಕೆ ಹನೀಫ಼್,
ಸುಬ್ರಹ್ಮಣ್ಯದಲ್ಲಿ ದುರಂತ ಸಂಭವಿಸಿ ಮೃತಪಟ್ಟ ಮಕ್ಕಳ ಮನೆಗೆ ಉಸ್ತುವಾರಿ ಸಚಿವ ಸುನಿಲ್ ರವರು ಇಂದು ಭೇಟಿ ನೀಡಿದರು.ಮನೆಗಾಗಿ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ರೆ 4 ಲಕ್ಷ ಕೊಡಲಾಗುವುದು, ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ರೆ ಹಣ ಕೊಡುವ ಪ್ರಾವಿಶನ್ ಇಲ್ಲ, ಆದ್ರೂ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ ಅಂಗಡಿಗಳಿಗೂ ಪರಿಹಾರ ನೀಡಲಿದ್ದೇವೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ
ಉಪ್ಪಿನಂಗಡಿ : ಅ 2 : ಕಾರು ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಮಂಗಳವಾರ ( ಅ .2) ಸಂಜೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಡಬ ತಾಲೂಕಿನ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್ ಶರ್ಮಾ(32) ಮತ್ತು ಓಂಕಾರ್ ಪ್ರಸಾದ್ (30) ಗಾಯಗೊಂಡವರು . ಅಪಘಾತವೂ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರು ಹಾಸನ ಜಿಲ್ಲೆಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಹೇರಲಾಗಿರುವ ರಾತ್ರಿ ನಿರ್ಬಂಧವನ್ನು ಇನ್ನೂ ಎರಡು ದಿನಗಳವರೆಗೆ ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯ ಕೋರಿಕೆಯಂತೆ ನಿರ್ಬಂಧವನ್ನು ಆ.5ರ ಬೆಳಗ್ಗೆ 6 ಗಂಟೆವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಎರಡು ದಿನದ ಬಳಿಕ ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಪ್ರಕರಣದಲ್ಲಿ ನಗರ ಪೆÇಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಉಡುಪಿ ಉದ್ಯಾವರ ಸಮೀಪ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಜುಲೈ 28ರಂದು
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಆ.2 ರಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32ವ) ಮತ್ತು ಹಾರಿಸ್(42ವ) ರವರು ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಜು.28 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಪೆÇಲೀಸರು ಆರೋಪಿಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್
ಸುಬ್ರಹ್ಮಣ್ಯದ ಪರ್ವತಮುಖಿಯಲ್ಲಿ ಭಾರಿಮಳೆಗೆ ಮನೆ ಮೇಲೆ ಗುಡ್ಡಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ದಾರುಣ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರದಾರ ಪರ್ವತಮುಖಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಸುಮಾರು 7 ಗಂಟೆಗೆ ಭಾರಿ ಮಳೆಗೆ ಮನೆ ಮೇಲೆ ಗುಡ್ಡಕುಸಿದು ಮನೆ ಸಂಪೂರ್ಣ ಮಣ್ಣಿನಡಿ ಬಿದ್ದಿದ್ದು ಇದರಲ್ಲಿ ಕುಸುಮಧಾರ ಮತ್ತು ರೂಪಾಶ್ರೀ ದಂಪತಿಗಳ ಇಬ್ಬರು ಹೆಣ್ಣು ಮಕ್ಕಳಾದ ಐದನೇ ತರಗತಿ ವಿದ್ಯಾಭ್ಯಾಸ
ದ.ಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು,ಹರಿಹರ,ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಮುಂಜಾಗ್ರತ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್ ಡಿಆರ್ ಎಪ್ ತಂಡವನ್ನು ಆ ಭಾಗಕ್ಕೆ ಈಗಾಗಲೆ ಕಳುಹಿಸಿಕೊಡಲಾಗುತ್ತಿದೆ.ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ
ಪುತ್ತೂರು:ಜಿಲ್ಲೆಯಲ್ಲಿ ಮೂರು ಹತ್ಯೆಗಳಾಗಿದ್ದು, ಈ ಮೂವರ ಮನೆಗೆ ತೆರಳಿ ಸಾಂತ್ವನ ಹೇಳಬೇಕಾಗಿದ್ದ, ಪರಿಹಾರ ನೀಡಬೇಕಾಗಿದ್ದ ರಾಜ್ಯದ ಮುಖ್ಯಮಂತ್ರಿಗಳ ಪಕ್ಷಪಾತ ಧೋರಣೆಯನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿರುವಾಗಲೇ ಸುರತ್ಕಲ್ನಲ್ಲಿ ಫಾಝಲ್ ಹತ್ಯೆಯಾಗಿದೆ. ಅಲ್ಲದೆ ಬೆಳ್ಳಾರೆಯಲ್ಲಿ ಮೃತ ಪ್ರವೀಣ್

























