ಪುತ್ತೂರು : ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಸಂತ ಅವರ ತಾಯಿ ಅನಾರೋಗ್ಯ ಮತ್ತು ಮಾನಸಿಕ ಪೀಡಿತರಾಗಿದ್ದು, ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು,
ಪುತ್ತೂರಿನ ಪವಿತ್ರ ಶೆಟ್ಟಿ ಅವರು 2022 ರ ಜೂನ್ 26 ರಂದು ದುಬೈ ಸಿಲಿಕಾನ್ ಓಯಸಿಸ್ನ ರಾಡಿಸನ್ ರೆಡ್ನಲ್ಲಿ ನಡೆದ ಪ್ರತಿಷ್ಠಿತ ಮಿಸೆಸ್ ಯುಎಇ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಒಂದನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.ಯುಎಇಯಲ್ಲಿ ವಾಸಿಸುವ ಎಲ್ಲಾ ರಾಷ್ಟ್ರೀಯತೆಗಳಿಗೆ ಮುಕ್ತವಾಗಿರುವ ಈ ಸ್ಪರ್ಧೆಯು ಮಧ್ಯಪ್ರಾಚ್ಯದಲ್ಲಿ ಅತಿದೊಡ್ಡ ಮತ್ತು ಅತ್ಯಂತ ಪಾರದರ್ಶಕ ಸ್ಪರ್ಧೆಗಳಲ್ಲಿ ಒಂದಾಗಿದೆ ಮತ್ತು ಅತ್ಯಂತ ಪ್ರತಿಷ್ಠಿತ ಮತ್ತು ಗಣ್ಯ
ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣೆಯ ಯಸ್. ಐ. ರಾಮ ನಾಯ್ಕ್ ಹಾಗು ಸಿಬ್ಬಂದಿಗಳು ತನಿಖೆ ನಡೆಸಿ ಪುತ್ತೂರಿನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಹಾರಾಡಿ ಶಾಲೆಯಲ್ಲಿ ಆವರಣಗೋಡೆ ಕುಸಿತ : ಪುತ್ತೂರು ನಗರಸಭೆ ಅಧ್ಯಕ್ಷರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ
ಭಾರಿ ಮಳೆಗೆ ಪುತ್ತೂರು ನಗರ ಸಭಾ ವ್ಯಾಪ್ತಿಯ ಹಾರಾಡಿ ಸ.ಉ.ಹಿ.ಪ್ರಾ.ಶಾಲೆಯ ಆವರಣಗೋಡೆಯೊಂದು ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರಸಭೆ ಅಧ್ಯಕ್ಷರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದ್ದಾರೆ.ಹಾರಾಡಿಯ ಶಾಲೆಯ ಹಿಂಬದಿಯ ಪ್ರಯಾಣಿಕರ ತಂಗುದಾಣದ ಬಳಿಯಲ್ಲಿರುವ ಆವರಣಗೋಡೆ ಕುಸಿದಿದೆ. ಘಟನಾ ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಸ್ಥಳೀಯ ಸದಸ್ಯೆ ಪ್ರೇಮಲತಾ ನಂದಿಲ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಅವರು ಭೇಟಿ,ನೀಡಿ
ಕಳೆದ 16 ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಪಡುಬಿದ್ರಿಯ ಜೀವನ ಕುಮಾರ್ ಎಂಬವರು ಬಳಲುತ್ತಿದ್ದು, ವಾರಕ್ಕೆ ಎರಡು ಬಾರಿಯಂತೆ ಡಯಾಲೀಸಿಸ್ ಮಾಡುತ್ತಾ ಬರುತ್ತಿದ್ದರು. ಇದೀಗ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಪ್ರೋಲಾಜಿ ವಿಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಅಧಿಕ ವೆಚ್ಚ ತಗುಲಲಿದ್ದು, ಸಹಾಯ ಮಾಡುವ ದಾನಿಗಳ ನಿರೀಕ್ಷೆಯಲ್ಲಿದ್ದಾರೆ. ಜೀವನ್ ಕುಮಾರ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು Jeevan Kumar
ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ ಉಕ್ಕಿನ ಮಹಿಳೆ ಎಂದೇ ಕರೆಯಲ್ಪಡುವ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯನ್ನು ಕರಾಳದಿನ ಎಂದು ಬಿಂಬಿಸುತ್ತಿದೆ. ಆದರೆ ಅದು ಕರಾಳದಿನವಾಗಿರಲಿಲ್ಲ. ಇಂದಿರಾ ಗಾಂಧಿ ಸರಕಾರ ಉರುಳಿದ
ಪುತ್ತೂರು: ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ. ಈ ಮಹಾಕಾರ್ಯ ಎಲ್ಲರಿಗೂ ಸಿಗುವುದಿಲ್ಲ. ಜೀವನದಲ್ಲಿ ಭಗವಂತ ಕೊಟ್ಟ ಅವಕಾಶದಲ್ಲಿ ಶ್ರದ್ಧೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಡಿ.21ರಿಂದ 28 ರವರೆಗೆ ನಡೆಯಲಿರುವ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಇನ್ನು ಮುಂದೆ ಇಂತಹ ಘಟನೆಗಳು ನಡೆದಲ್ಲಿ ಅದಕ್ಕೆ ಸರಕಾರವೇ ಹೊಣೆ ಹೊರಬೇಕು ಎಂಬುದು ನಮ್ಮ ಆಗ್ರಹ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ಮತ್ತು ಸದಸ್ಯರು ಮಾನ್ಯ ಮುಖ್ಯ ಮಂತ್ರಿಗಳಿಗೆ
ಪುತ್ತೂರು: ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30 ಶೇ. ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ ಅರಂತನಡ್ಕ ನಿವಾಸಿ ಸಹಿತ ಐವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ ಭಕ್ತರು ಹಾಕಿದ್ದ ರೂ.100 ಮುಖ ಬೆಲೆಯ ರೂ.10 ಲಕ್ಷ ಮೌಲ್ಯದ ನೋಟುಗಳಿದ್ದು, ಆವುಗಳನ್ನು ವಿಲೇವಾರಿ ಮಾಡಲು
ಪುತ್ತೂರು ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 21 ರಂದು ಆರಂಭಗೊಂಡು ಜನವರಿ 7 ರ ತನಕ ನಿರಂತರ 48 ದಿನಗಳ ಕಾಲ (ಒಂದು ಮಂಡಲ) ಸಂಜೆ ವಿಶೇಷ ರಂಗಪೂಜೆ ನಡೆಯಲಿದೆ. ಮೂರನೇ ವರ್ಷದಲ್ಲಿ ನಡೆಯುತ್ತಿರುವ ಈ ವಿಶೇಷ ರಂಗಪೂಜೆಯು ಕಾರ್ಪಾಡಿ, ಶ್ರೀ. ಸುಬ್ರಹ್ಮಣ್ಯ ಕ್ಷೇತ್ರದ ವಿಶೇಷತೆಗಳಲ್ಲಿ ಒಂದು. ನಿರಂತರ 48 ದಿನಗಳ ಕಾಲ ನಡೆಯುವ ರಂಗಪೂಜೆಯಲ್ಲಿ ಪ್ರತೀದಿನ 12 ಕುಟುಂಬಗಳಿಗೆ ಸೇವೆ ಮಾಡಿಸಲು ಅವಕಾಶವಿದೆ.






















