ಪುತ್ತೂರು: ದೇಶದ ಜನರ ಸೇವೆ ಮತ್ತು ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಹಾಗಾಗಿ ಬಿಜೆಪಿಯ ಕಾರ್ಯಕರ್ತರಿಗೆ ರಾಜಕಾರಣ ವೃತ್ತಿಯಲ್ಲ, ಅದೊಂದು ವೃತವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕಲ ಅನಾವರಣ ಕಾರ್ಯಕ್ರಮಗಳು ಈಗಾಗಲೇ
ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ ಹಾಡಬೇಕೆಂಬ ನಿರ್ದೇಶನದಂತೆ ಪುತ್ತೂರು ಮಿನಿ ವಿಧಾನ ಸೌಧ ಸಭಾಂಗಣ ದಲ್ಲಿ ಲಕ್ಷ ಕಂಠಗಳ ಗೀತ ಗಾಯನ
ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2010ರಲ್ಲಿ ಪೂರೈಸಿ ಬಳಿಕ ಎಂಬಿಬಿಎಸ್ ಪದವಿಯನ್ನು ಹಾಸನ ಮೆಡಿಕಲ್ ಕಾಲೇಜಿನಲ್ಲಿ ಪಡೆದು ಎಂ.ಡಿ ಪೀಡಿಯಾಟ್ರಿಕ್ಸ್ ನ್ನು
ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣರಾದ ಆರೋಪ ಎದುರಿಸುತ್ತಿರುವ ಕುದ್ಕಾಡಿ ನಾರಾಯಣ ರೈಯವರನ್ನು ವಿಚಾರಣೆಗಾಗಿ ಪುತ್ತೂರು ಸೆಷೆನ್ಸ್ ನ್ಯಾಯಾಲಯ ಎರಡು ದಿನ ಪೊಲೀಸ್ರ ವಶಕ್ಕೆ ಒಪ್ಪಿಸಿ ಆದೇಶಿಸಿತ್ತು. ಆದೇಶದ ಬೆನ್ನಲ್ಲೆ ಅನಾರೋಗ್ಯದ ಹಿನ್ನಲೆಯಲ್ಲಿ ನ್ಯಾಯಾಲಯದ ಅನುಮತಿಯೊಂದಿಗೆ ನಾರಾಯಣ ರೈ ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಪುತ್ತೂರು : ಪುತ್ತೂರು ತಾಲೂಕಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿ ಎಂದು ಬಾಲಕಿ ಹೆಸರಿಸಿರುವ ಕುದ್ಕಾಡಿ ನಾರಾಯಣ ರೈ ಯವರು ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾರೆ.ನಾರಾಯಣ ರೈ ಯವರು ತನ್ನ ಪರ ವಕೀಲರಾದ ಮಹೇಶ್ ಕಜೆಯವರ ಜತೆ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಶರಣರಾದರು. ಬಡಗನ್ನೂರಿನ 17ರ ಹರೆಯದ ಅಪ್ರಾಪ್ತ ದಲಿತ ಸಮುದಾಯದ ಬಾಲಕಿಯು ಸೆ.5 ರಂದು ಮಗುವಿಗೆ ಜನ್ಮ
ಪುತ್ತೂರು: ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ಸೌಲಭ್ಯ ಪಾವತಿ ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ವಿರುದ್ದ ಅಮರಣಾಂತ ಉಪವಾಸ ನಿರತರಾಗಿದ್ದ ಪುತ್ತೂರು ವಿಭಾಗ ಕೆಎಸ್ಆರ್ಟಿಸಿ ಮಜ್ದೂರ್ ಸಂಘದ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಮಂಗಳವಾರ ರಾತ್ರಿ ನಡೆಸಿದ ಮಾತುಕತೆ ಪರಿಣಾಮ ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಈ ಮೂಲಕ ಸಚಿವ ಅಂಗಾರ ಅಮರಣಾಂತ ಉಪವಾಸ ನಿರತರ
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೈಹಿಕ ಶಿಕ್ಷಣ
ಪುತ್ತೂರು:ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೋರ್ವರಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ವರದಿಯಾಗಿದ್ದು ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮೈಂದನಡ್ಕ ನಿವಾಸಿ ಆದಂ(56ವ.)ಎಂಬಾತ, ಸ್ಥಳೀಯ ಬಾಲಕಿಯೋರ್ವರು ಬೀಡಿ ಬ್ರಾಂಚಿಗೆಂದು ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಯನ್ನು ಪೊಲೀಸರು
ಪುತ್ತೂರು: ಮಾಸಿಕ ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯ ಬಿಡುಗಡೆ ವಿಳಂಬವನ್ನು ನಡೆಸುತ್ತಿರುವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್ಆರ್ಟಿಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನ ತಲುಪಿತು. ಸಂಘದ ಪುತ್ತೂರು ಘಟಕದ ಅಧ್ಯಕ್ಷ ಮಾಡಾವು ವಿಶ್ವನಾಥ್ ರೈ, ಹುತಾತ್ಮ ಸೈನಿಕರ ಸ್ಮಾರಕಕ್ಕೆ ಹೂಮಾಲೆ ಅರ್ಪಿಸಿ ಧರಣಿಯನ್ನು
ಪುತ್ತೂರು: ಕಾಲೇಜು ಬಿಟ್ಟು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಬೈಕ್ ಡಿಕ್ಕಿ ಹೊಡೆದುದನ್ನು ವಿಚಾರಿಸಿದ ವೇಳೆ ಆತನಿಗೆ ಹಲ್ಲೆ ನಡೆಸಿದ ಮತ್ತು ಇದನ್ನು ವಿಚಾರಿಸಲು ಬಂದಾತನಿಗೂ ಬೈಕ್ ಸವಾರರು ಹಲ್ಲೆ ನಡೆಸಿದ ಘಟನೆ ಅ.21ರಂದು ಸಂಜೆ ವೇಳೆ ಕೊಂಬೆಟ್ಟು ಸ.ಪ.ಪೂ ಕಾಲೇಜು ಬಳಿ ನಡೆದಿದೆ. ತಾರಿಗುಡ್ಡೆ ಅಬ್ದುಲ್ ರಜಾಕ್ರವರ ಪುತ್ರ, ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಜಿಯಾದ್(16.ವ.) ಹಾಗೂ ಆತನ

















