Home Posts tagged #puttur (Page 55)

ಸಂಬಳ ನೀಡುವಂತೆ ಒತ್ತಾಯಿಸಿ ಪುತ್ತೂರು ಕೆ.ಎಸ್.ಆರ್.ಟಿ.ಸಿ ನೌಕರರ ಧರಣಿ ಸತ್ಯಾಗ್ರಹ….

ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಧರಣೆ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆರಂಭಿಸಿದ್ದು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಈ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ.

ಬಡಗನ್ನೂರಿನಲ್ಲಿ ವೃದ್ದ ದಂಪತಿ ಆತ್ಮಹತ್ಯೆ

ಪುತ್ತೂರು: ವೃದ್ಧ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಬಡಗನ್ಮೂರು ಗ್ರಾಮದ ಪಾದೆಕರ್ಯ ಎಂಬಲ್ಲಿನ ನಿವಾಸಿ ಸುಬ್ರಹ್ಮಣ್ಯ ಭಟ್(84) ಮತ್ತು ಅವರ ಪತ್ನಿ ಶಾರದ(76) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಅವರಿಬ್ಬರೂ ಮನೆಯ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸೋಮವಾರ

ಪುತ್ತೂರಿನ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಯನ್ನು ಬಂಧಿಸುವಂತೆ ಆಗ್ರಹ

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಮಗುವನ್ನು ಕರುಣಿಸಿದ ಪ್ರಕರಣದ ಆರೋಪಿ ಆರ್‌ಎಸ್‌ಎಸ್ ಮುಖಂಡ ನಾರಾಯಣ ರೈ ಬಂಧನಕ್ಕೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಮನ್ವಯ ಸಮಿತಿಯ ಮುಖಂಡ ಅಶೋಕ್ ಕೊಂಚಾಡಿ ಅವರು, ದಲಿತ ಸಮುದಾಯದ ಬಾಲಕಿಗೆ ಆದ ಅನ್ಯಾಯದ ವಿರುದ್ಧ ಮಾತನಾಡದ ಜಿಲ್ಲಾ ಉಸ್ತುವಾರಿ

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ : ಉತ್ತಮ ಇಳುವರಿ ಪಡೆಯುತ್ತಿರುವ ಕೃಷಿಕರು

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವ ಮೂಲಕ ಪುತ್ತೂರು ತಾಲೂಕಿನ ಇಂಜಿನಿಯರಿಂಗ್ ಪದವೀಧರ ಕೃಷಿಕರೊಬ್ಬರ ಪ್ರಯೋಗ ಯಶಸ್ವಿಯಾಗಿದೆ. ಭೂಮಿಯನ್ನು ರಾಸಾಯನಿಕ ಮುಕ್ತವಾಗಿಸುವಲ್ಲಿ ಪರಿಣಾಮಕಾರಿ ಪ್ರಯೋಗಗಳು ಅಲ್ಲಲ್ಲಿ ರೈತರಿಂದಲೇ ನಡೆಯುತ್ತಿದ್ದು, ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರು ನಿವಾಸಿ ಜಯಗುರು ಆಚಾರ್ ಸೆಗಣಿ ಹುಡಿ ಗೊಬ್ಬರದ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ. ರಾಸಾಯನಿಕ ಗೊಬ್ಬರಕ್ಕೆ ಗುಡ್‍ಬೈ ಹೇಳಿ

ಪ್ರೇತ ವೇಷದ ಮೂಲಕ ಹರಕೆ ತೀರಿಸುತ್ತಿರುವ ವ್ಯಕ್ತಿ

ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂಡೆ ವಿವಿಧ ವೇಶಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವ್ಯಕ್ತಿಯೊಬ್ಬರು ಕಳೆದ ಹದಿಮೂರು ವರ್ಷಗಳಿಂದ ಗಮನಸೆಳೆಯುತ್ತಿದ್ದಾರೆ. ವಿಶೇಷವಾದ ಪ್ರೇತದ ವೇಷದ ಮೂಲಕ

ಬನ್ನೂರಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಪುತ್ತೂರು: ಒಬ್ಬ ವ್ಯಕ್ತಿ ಹುಟ್ಡುವುದಕ್ಕೂ ಮೊದಲು ಮತ್ತು ಸತ್ತ ನಂತರವು ಕಾನೂನು ಆತನ ಜೊತೆ ಇರುತ್ತದೆ. ಅಂದರೆ ಕಾನೂನು ಗರ್ಭದಿಂದ ಗೋರಿಯ ತನಕ ಇರುತ್ತದೆ ಎಂದಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಮೇಶ್ ಎಮ್ ಅವರು ಹೇಳಿದರು. ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪುತ್ತೂರು ರಾಜ್ಯ ಅಬಕಾರಿ

ಬಲ್ನಾಡಿನಲ್ಲಿ ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಪುತ್ತೂರಿನ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು ಗುರುತಿಸಲಾಗಿದೆ. ಅಝೀಝ್ ಅವರು ಇಂದು ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು, ಮತಾಂದ ಜಿಹಾದಿಗಳಿಂದ ಆಗುತ್ತಿರುವ ದೌರ್ಜನ್ಯವನ್ನು ಇಡೀ ದೇಶದ ಹಿಂದೂ ಸಂಘಟನೆಗಳು

ಪುತ್ತೂರಿನಲ್ಲಿ ಆಂಬುಲೆನ್ಸ್ ಲೋಕಾರ್ಪಣೆ

ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು, ಬಜರಂಗದಳ ಪ್ರಾಂತ ಸಹ ಸಂಯೋಜಕ್

ಪುತ್ತೂರಿನ ಕೊಡಂಗೆಯಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ ಮನೆಯಲ್ಲಿ ಈ ಘಟನೆ ನಡೆದಿದ್ದು ರಾಘವ, ಅವರ ತಾಯಿ ಹೊನ್ನಮ್ಮ, ಪತ್ನಿ ಲತಾ, ಪುತ್ರಿ ತೃಷಾ, ಸಹೋದರಿ ಬೇಬಿ, ಬಾವಂದಿರಾದ ದೇವಪ್ಪ, ಕೇಶವ, ರಾಘವರವರ ಸಹೋದರಿಯರ ಮಕ್ಕಳಾದ ಸುದೇಶ್, ಧನುಷ್ ಹಾಗೂ ಅರ್ಚನಾ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.