Home Posts tagged #puttur (Page 57)

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ : ಸೆ.27ರಂದು ಭಾರತ್ ಬಂದ್‍ಗೆ ಕರೆ

10 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆಕಾಳಜಿ ತೋರಿಸುತ್ತಿಲ್ಲ.ನಿರ್ಲಕ್ಷ್ಯ ತೋರುತ್ತಿದೆ. ಇದರಿಂದ ರೈತರ ಬಗ್ಗೆ ಒಂದು ಕೆಟ್ಟ ವಾತಾವರಣನಿರ್ಮಾಣವಾಗಿದೆ.ಇದರಿಂದ 600 ರಷ್ಟು ರೈತರು ತೀರಿಕೊಂಡಿದ್ದು, ಅವರಿಗೆ ಪರಿಹಾರ ಏನೂ ಕೊಟ್ಟಲ್ಲ. ರೈತರನ್ನು ಸಮಾಧಾನಪಡಿಸುವ ಪ್ರಯತ್ನ ಕೂಡಾ ಸರಕಾರ ಮಾಡಿಲ್ಲ. ಹಾಗಾಗಿ

ಪುತ್ತೂರಿನಲ್ಲಿ ಪೌರ ಕಾರ್ಮಿಕ ದಿನಾಚರಣೆ

ಪುತ್ತೂರು: ಪೌರ ಕಾರ್ಮಿಕರ ಜೊತೆಗೆ ನಾಗರಿಕರು ಸಹಕರಿಸಿದಾಗ ಮಾತ್ರ ಸ್ವಚ್ಚ ನಗರ ನಿರ್ಮಾಣ ಸಾಧ್ಯವಿದ್ದು, ನಮ್ಮ ಕಸವನ್ನು ನಾವೇ ನಿರ್ವಹಿಸುವಂತಹ ಮನೋಭಾವ ಪ್ರತಿಯೊಬ್ಬರಲ್ಲಿಯೂ ಬೆಳೆಯಬೇಕು ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದರು. ಅವರು ಪುತ್ತೂರಿನ ಪುರಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಾಗರಿಕ ಜವಾಬ್ದಾರಿ

ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ 7 ಮಂದಿ ಸಾವು ಪ್ರಕರಣ : ಪರಿಹಾರ ಘೋಷಿಸಿದ ಸರಕಾರ

ಪುತ್ತೂರು: 9 ತಿಂಗಳ ಹಿಂದೆ 2021 ರ ಜನವರಿ 3 ರಂದು ಪುತ್ತೂರಿನ ಬಲ್ನಾಡು ಚನಿಲದಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಬಸ್‌ನಲ್ಲಿದ್ದ 7 ಮಂದಿ ದಾರುಣ ಮೃತಪಟ್ಟಿದ್ದರು. ಇವರಿಗೆ ಈಗ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ಪರಿಹಾರಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ

ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಂಬಂಧಿಕರ ಮನೆಯಲ್ಲಿ ಪತ್ತೆ

ವಿದ್ಯಾರ್ಥಿ ನಿಲಯದಿಂದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಕಾಣೆಯಾದ ಬಗ್ಗೆ ನಿನ್ನೆ ವರದಿಯಾಗಿತ್ತು, ಇಂದು ಆತ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ನಿನ್ನೆ ಕಡಬದ ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಜನ್ ಸಿ.ಎಮ್ ಎಂಬ ಅಪ್ರಾಪ್ತ ಬಾಲಕ ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದು, ನಂತರ ಮಧ್ಯಾಹ್ನ 12.40 ಕ್ಕೆ ಕಾಲೇಜು

ಬಿಸಿಯೂಟ ನೌಕರರನ್ನು ನಿರ್ಲಕ್ಷಿಸುವುದು ಮಹಿಳಾ ದೌರ್ಜನ್ಯವಾಗಿದೆ : ಬಿ.ಎಂ. ಭಟ್ ಹೇಳಿಕೆ

ಪುತ್ತೂರು : ಕಳೆದ 20 ವರ್ಷಗಳಿಂದ ಅತೀ ಕಡಿಮೆ ಸಂಬಳದಲ್ಲಿ ಕನಿಷ್ಟ ವೇತನವೂ ಸಿಗದೆ ಶಾಲಾ ಮಕ್ಕಳಿಗೆ ಪ್ರೀತಿಯಿಂದ ಅಡುಗೆ ತಯಾರಿಸಿ ಬಡಿಸುತ್ತಿರುವ ಬಿಸಿಯೂಟ ನೌಕರರ ಬಗ್ಗೆ ಸರಕಾರದ ನಿರ್ಲಕ್ಷ ಕೂಡ ಸರಕಾರದ ಮಹಿಳಾ ದೌರ್ಜನ್ಯ ಆಗಿದೆ ಎಂದು ಹಿರಿಯ ಕಾರ್ಮಿಕ ಮುಖಂಡರಾದ ಬಿ.ಎಂ.ಭಟ್ ಹೇಳಿದರು. ಅವರು ಸೆ.20 ರಂದು ಪುತ್ತೂರು ಮತ್ತು ಕಡಬ ತಾಲೂಕು ಅಕ್ಷರದಾಸೋಹ ನೌಕರರ ಸಮಾವೇಶವನ್ನುದ್ದೇಶಿಸಿ ಮಾತಾಡಿ ಕೆಲವು ಅಸಂಘಟಿತ ಕಾರ್ಮಿಕರಿಗೆ ಕೊರೋನಾ ಪ್ಯಾಕೇಜು ನೀಡಿದ ಸರಕಾರ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆತ್ಮನಿರ್ಭರತೆಯ ಯಶೋಗಾಥೆ

ಪಕೋಡಾ ಮಾರಿಯೂ ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಬಹುದು ಎಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆ, ವ್ಯಂಗ್ಯ ಪ್ರದರ್ಶನಗಳು ಕಂಡು ಬಂದಿತ್ತು. ಅದೇ ರೀತಿ ಪ್ರಧಾನಿಯ ಮಾತಿನಲ್ಲಿ ಸತ್ಯಾಂಶವಿದೆ ಎನ್ನುವುದನ್ನು ತೋರಿಸಿಕೊಟ್ಟ ಹಲವು ವಿಚಾರಗಳೂ ದೇಶದ ಜನರ ಗಮನಕ್ಕೂ ಬಂದಿತ್ತು. ಈ ನಡುವೆ ಸ್ವ ಉದ್ಯೋಗದಲ್ಲಿ ತೊಡಗಿಕೊಂಡು ಸ್ವಾವಲಂಭಿಯಾಗಿ ಬದುಕು ಸಾಗಿಸುತ್ತಿರುವ ಸಾವಿರಾರು ಯುವಪಡೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ

ದಲಿತ ಯುವತಿಯ ನಕಲಿ ಸಹಿ ಬಳಸಿ ಸುಳ್ಳು ದೂರು : ತನಿಖೆಗೆ ಜಿಲ್ಲಾ ದಲಿತ ಸೇವಾ ಸಮಿತಿ ಆಗ್ರಹ

ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯೂರಿನ ಚೆನ್ನಪ್ಪ ಅಜಿಲಾಯ ಎಂಬವರ ಮೇಲೆ ಸ್ಥಳೀಯ ದಲಿತ ಸಮುದಾಯಕ್ಕೆ ಸೇರಿದ ಯುವತಿಯ ಹೆಸರಿನಲ್ಲಿ ಅವರ ನಕಲಿ ಸಹಿ ಬಳಸಿ ಸುಳ್ಳು ದೂರು ನೀಡಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಎಚ್ಚರಿಸಿದ್ದಾರೆ. ಅವರು ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚೆನ್ನಪ್ಪ ಅಜಿಲಾಯ

ಬೃಹತ್ ಉಚಿತ ಲಸಿಕಾ ಶಿಬಿರ : ಅರಿವು ಮೂಡಿಸಲು ಜಾಥಾ

ಪುತ್ತೂರು: ಶುಕ್ರವಾರ ಪುತ್ತೂರು ಹಾಗೂ ಕಡಬ ತಾಲೂಕಿನ ಸುಮಾರು 76 ಕಡೆಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದ್ದು, ನಗರಸಭೆ ವ್ಯಾಪ್ತಿಯೊಳಗೆ ಆರು ಕಡೆ ನಡೆಯಲಿದೆ. ಈ ಮೂಲಕ ನಗರಸಭಾ ವ್ಯಾಪ್ತಿಯನ್ನು ಲಸಿಕೆ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಲಸಿಕೆ ಪಡೆಯದ ಎಲ್ಲಾ ಸಾರ್ವಜನಿಕರು ಲಸಿಕೆ ಪಡೆದು ಸಹಕರಿಸುವಂತೆ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ತಿಳಿಸಿದ್ದಾರೆ. ದ.ಕ.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ದೇವಸ್ಥಾನಗಳ ತೆರವು ವಿಚಾರ: ಸೆ.16ರಂದು ವಿಶ್ವಹಿಂದೂ ಪರಿಷತ್, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ದೇವಸ್ಥಾನಗಳ ತೆರವುಗೊಳಿಸುವ ಸರಿಯಲ್ಲ ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳ ಕೃತ್ಯ ನಡೆಯುತ್ತಿದೆ ಎಂದು ಭಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರ ತಕ್ಷಣವೇ ಅಧಿಕಾರಿಗಳನ್ನು ವಜಾಗೊಳಿಸಬೇಕು. ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ಹಿಂಪಡೆಯಬೇಕು. ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು. ಸೆಪ್ಟೆಂಬರ್ ೧೬ ರಂದು ದಕ್ಷಿಣಕನ್ನಡ, ಉಡುಪಿ

ಪುತ್ತೂರಿನಲ್ಲಿ ಅಪ್ರಾಪ್ತರನ್ನು ಬಳಸಿ ಭಿಕ್ಷಾಟನೆ: ಮಕ್ಕಳನ್ನು ರಕ್ಷಣೆ ಮಾಡಿದ ಚೈಲ್ಡ್ ಲೈನ್ ಅಧಿಕಾರಿಗಳು

ಪುತ್ತೂರು:ಪುತ್ತೂರಿನಲ್ಲಿ ಅಪ್ರಾಪ್ತರನ್ನು ಭಿಕ್ಷಾಟನೆಗೆ ಕಳುಹಿಸುವ ಮೂಲಕ ಮಕ್ಕಳಿಗೆ ಹಿಂಸೆ ನೀಡುತ್ತಿದ್ದಾರೆಂಬ ದೂರಿನ ಮೇರೆಗೆ ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆಯ ಅಧಿಕಾರಿಗಳು ನೆಲ್ಲಿಕಟ್ಟೆಯಲ್ಲಿ ಕಾರ್ಯಾಚರಣೆ ನಡೆಸಿ 6 ವರ್ಷದ ಬಾಲಕ ಮತ್ತು 8 ವರ್ಷದ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸಂಗೀತ ಎಂಬ ಮಹಿಳೆಯು ಇತ್ತೀಚೆಗೆ ಬಿಸಿ ರೋಡ್‌ನಲ್ಲಿ ಮಗುವೊಂದಕ್ಕೆ ಹಲ್ಲೆ ನಡೆಸುತ್ತಿರುವ ಕುರಿತು ಮಾಹಿತಿ ಪಡೆದು ಅಲ್ಲಿ ದಾಳಿ