Home Posts tagged #puttur (Page 61)

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: 20 ವರ್ಷಗಳ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಯಾರದಲ್ಲಿ ತಂಡವೊಂದರಿಂದ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿ ತಲೆ ಮರೆಸಿಕೊಂಡಿದ್ದರು. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆಯವರ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಿದ ಪುತ್ತೂರು ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಗೋಪಾಲ್ ನಾಯ್ಕ್ ಮತ್ತು

ಪುತ್ತೂರಿನಲ್ಲಿ ಅಕ್ರಮ ಗೂಡಂಗಡಿಗಳ ತೆರವು: ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

ಪುತ್ತೂರು ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಅಂಗಡಿಗಳ ತೆರವು ಕಾರ್ಯಾಚರಣೆಗೆ ಪುತ್ತೂರು ನಗರ ಸಭೆ ಜು.೨೩ರ ಬೆಳ್ಳಂಬೆಳಗ್ಗೆ ಮುಂದಾಗಿದೆ. ಜೆಸಿಬಿ ಮೂಲಕ ನಗರ ಸಭೆ ಪೌರಾಯುಕ್ತ ಹಾಗೂ ಇತರ ಅಧಿಕಾರಿಗಳ ಸಮಕ್ಷಮದಲ್ಲಿ ಆಕ್ರಮ ಶೆಡ್ ಗಳನ್ನೂ ಕೆಡವಲಾಗುತ್ತಿದೆ. ತಳ್ಳು ಗಾಡಿಯ ಅನುಮತಿ ಪಡೆದು, ಒಂದಷ್ಟು ಸಮಯದ ಬಳಿಕ ಅಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ವ್ಯಾಪಾರ ನಡೆಸುತಿದ್ದವರಿಗೆ ನಗರ ಸಭೆ ಈ ಮೂಲಕ ಇಂದು ನಸುಕಿನ ವೇಳೆ ಆಘಾತ ನೀಡಿದೆ. ಈ ಅಂಗಡಿಗಳು

ದಲಿತ್ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸೇಸಪ್ಪ ಬೆದ್ರಕಾಡು ರಾಜೀನಾಮೆ

ಕಳೆದ 15 ವರ್ಷಗಳಿಂದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಅಧ್ಯಕ್ಷನಾಗಿದ್ದು, ಇದೀಗ ನನ್ನ ಅವಧಿ ಆ.15 ಕ್ಕೆ ಪೂರ್ಣಗೊಳ್ಳಲಿದ್ದು, ದ.ಕ.ಜಿಲ್ಲಾ ಕಾರ್ಯದರ್ಶಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಳೆದ ೧೫ ವರ್ಷಗಳ ಕಾಲ ಅಧ್ಯಕ್ಷನಾಗಿ ಸಂಘವನ್ನು ಕಟ್ಟಿ, ಬೆಳೆಸಿ, ಸಂಘದ, ಸಮುದಾಯದವರಿಗೆ ಪ್ರತಿಯೊಂದು ವಿಚಾರದಲ್ಲೂ ನ್ಯಾಯ ಒದಗಿಸಿಕೊಟ್ಟು

ಮೂಲಭೂತ ಸೌಕರ್ಯ ವಂಚಿತ ಸಿರಿಬಾಗಿಲು: ಸೇತುವೆ ಇಲ್ಲದೆ ಗ್ರಾಮದ ಜನರ ಪರದಾಟ

ಮಳೆಗಾಲ ಬಂತೆಂದರೆ ಸಾಕು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಿರಿಬಾಗಿಲು ಎನ್ನುವ ಗ್ರಾಮ ಇತರ ಪ್ರದೇಶಗಳ ಸಂಪರ್ಕವನ್ನೇ ಕಳೆದುಕೊಂಡು ದ್ವೀಪವಾಗಿ ಬಿಡುತ್ತದೆ. ಶಿರಾಢಿಘಾಟ್ ನ ಮಧ್ಯಭಾಗದಲ್ಲಿರುವ ಈ ಗ್ರಾಮದ ಸುತ್ತ ಮೂರು ಹೊಳೆಗಳು ಹರಿಯುತ್ತಿದೆ, ಸೇತುವೆಯಿಲ್ಲದ ಕಾರಣ ಮಳೆಗಾಲದಲ್ಲಿ ಈ ಹೊಳೆಗಳು ತುಂಬಿ ಹರಿಯುವ ಕಾರಣ ಇಲ್ಲಿನ ಜನರಿಗೆ ಅಗತ್ಯ ಕಾರ್ಯಗಳಿಗಾಗಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಾಗಲಾರದ ಸಮಸ್ಯೆ ಇಲ್ಲಿ ವರ್ಷದಿಂದ ವರ್ಷಕ್ಕೆ

ಪುತ್ತೂರಿನ ಕಜೆ ಎಂಬಲ್ಲಿ ಆವರಣಗೋಡೆ ಕುಸಿತ : ಅಪಾಯದ ಅಂಚಿನಲ್ಲಿ ಮನೆ

ಪುತ್ತೂರು ಕಜೆ ದೇವಿ ನಗರ ಎಂಬಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಸಂತೋಷ್ ಕುಲಾಲ್ ಅವರ ಮನೆಯ ಆವರಣ ಗೋಡೆ ಕುಸಿದಿದ್ದು ಮನೆಯು ಅಪಾಯದ ಅಂಚಿನಲ್ಲಿದೆ ಇಲ್ಲಿಗೆ ರೈ ಎಸ್ಟೇಟ್ ಮಾಲಕರಾದ ಅಶೋಕು ಕುಮಾರ ರೈ ಕೋಡಿಂಬಾಡಿ ಉದ್ಯಮಿಗಳು ಮಂಗಳೂರು ಇವರು ಭೇಟಿ ನೀಡಿ ವೀಕ್ಷಿಸಿದರು ಆವರಣಗೋಡೆ ಕಟ್ಟಲು ಅಂದಾಜು ಸುಮಾರು ಎಂಟು ಲಕ್ಷ ತಗುಲಲಿದ್ದು ಸರಕಾರ ಹಾಗೂ ಸ್ಥಳೀಯರ ಸಹಕಾರದೊಂದಿಗೆ ತಾನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು ಸ್ಥಳೀಯ ಶಾಸಕರ ಗಮನಕ್ಕೆ ತಂದಿದ್ದರು

ಉಪ್ಪಳಿಗೆಯಲ್ಲಿ ಮನೆ ತಡೆಗೋಡೆ ಕುಸಿತ-ಲಕ್ಷಾಂತರ ರೂಪಾಯಿ ನಷ್ಟ

ಪುತ್ತೂರು: ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜು.16ರಂದು ಇರ್ದೆ ಗ್ರಾಮದ ಉಪ್ಪಳಿಗೆ ಎಂಬಲ್ಲಿ ಧನಂಜಯರವರ ಮನೆಯ ತಡೆಗೋಡೆ ಕುಸಿದು ಬಿದ್ದಿದೆ. ಮನೆ ಅಂಗಳದ ಬದಿಯಲ್ಲಿ ನಿರ್ಮಿಸಲಾದ ತಡಗೋಡೆಯು ಮುಂಜಾನೆಯ ವೇಳೆಗೆ ಹೂವಿನ ಗಾರ್ಡನ್ ಸಹಿತ ಕುಸಿದು ಬಿದ್ದಿದೆ. ಅಂಗಳದಲ್ಲಿ ಬಿರುಕು ಬಿಟ್ಟಿದ್ದು ಮತ್ತಷ್ಟು ಕುಸಿಯುವ ಅಪಾಯದಲ್ಲಿದೆ. ಘಟನೆಯಿಂದಾಗಿ ಲಕ್ಷಾಂತರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

ಬನ್ನೂರಿನ ಕಜೆ ಎಂಬಲ್ಲಿ ಕುಸಿದು ಬೀಳುವ ಹಂತದಲ್ಲಿರುವ ಮನೆ:ಕಾವು ಹೇಮನಾಥ್ ಶೆಟ್ಟಿ ಭೇಟಿ ಪರಿಶೀಲನೆ

ಪುತ್ತೂರು ತಾಲೂಕು ಬನ್ನೂರು ಗ್ರಾಮದ ಕಜೆ ಎಂಬಲ್ಲಿಯ ನಿವಾಸಿ ಸಂತೋಷ್ ಎಂಬವರ ಮನೆಯ ದಕ್ಷಿಣ ಭಾಗದ ಮಣ್ಣನ್ನು ಪಕ್ಕದ ಮನೆಯವರು ಅವೈಜ್ಞಾನಿಕವಾಗಿ ಅಗೆದ ಕಾರಣ ವಿಪರೀತ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಕೆಲವೇ ಅಡಿಗಳ ಅಂತರದಲ್ಲಿ ಸಂತೋಷ್ ಅವರ ಮನೆಯು ಇರುವುದರಿಂದ ಮತ್ತು ಪಕ್ಕದ ಮನೆ ಸುಮಾರು 30  ಅಡಿಗಳಷ್ಟು ಆಳದಲ್ಲಿ ಇರುವುದರಿಂದ ಎರಡೂ ಮನೆಯವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ್

ಬನ್ನೂರಿನಲ್ಲಿ ಕುಸಿದು ಬೀಳುವ ಹಂತದಲ್ಲಿರುವ ಮನೆ, ನೆರವಿನ ನಿರೀಕ್ಷೆಯಲ್ಲಿ ಬೀರ್ನಹಿತ್ಲುವಿನ ಬಡ ಮಹಿಳೆ

ಕೊರೊನಾ ಪಾಸಿಟೀವ್ ಪ್ರಕರಣಗಳು ರಾಜ್ಯಲ್ಲಿ ಕೊಂಚ ಇಳಿಮುಖವಾಗುತ್ತಿರುವ ನಡುವೆಯೇ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲೂ ಪ್ರಯತ್ನಗಳು ಆರಂಭಗೊಂಡಿದೆ. ಒಂದು ವೇಳೆ ಶಾಲೆ ಪ್ರಾರಂಭವಾದಲ್ಲಿ ತನ್ನ ಮಗುವಿಗೆ ಹೇಗೆ ಶಿಕ್ಷಣ ನೀಡಲಿ ಎನ್ನುವ ತಳಮಳದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಡ ತಾಯಿಯೊಬ್ಬರಿದ್ದಾರೆ. ಈಕೆಯ ಮನೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ವಾಸಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ. ಕೂಲಿ-ನಾಲಿ ಮಾಡಿ ತನ್ನ ಅನಾರೋಗ್ಯ ಪೀಡಿತ ಮಗುವಿನೊಂದಿಗೆ

ಪುತ್ತೂರಿನಲ್ಲಿ ಮನದಾಳವನ್ನು ಬಿಚ್ಚಿಟ್ಟ ’ಗಿಣಿರಾಮ’ ಖ್ಯಾತಿಯ ರಿತ್ವಿಕ್ ಮಠದ್

ಪುತ್ತೂರು: ತಮ್ಮ ರಗಡ್ ಲುಕ್, ’ಮಾಸ್ತರ ಮಗಳೇ’ ಎಂಬ ಗಡಸು ದನಿಯ ಡೈಲಾಗ್ ನಿಂದಲೇ ಕನ್ನಡಿಗರ ಮನಗೆದ್ದ ’ಗಿಣಿರಾಮ’ ಧಾರವಾಹಿ ಖ್ಯಾತಿಯ ಶಿವರಾಮ್ ಅಲಿಯಾಸ್ ರಿತ್ವಿಕ್ ಮಠದ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದಿದ್ದು, ಕ್ಯಾಮರಾ ಮುಂದೆ ಒಂದಿಷ್ಟು ಮನಬಿಚ್ಚಿ ಮಾತನಾಡಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆರಾಧ್ಯ ಭಕ್ತರಾಗಿರುವ ರಿತ್ವಿಕ್ ಮಠದ್ ಅವರು ಇದು ನಾಲ್ಕನೇ ಬಾರಿ ಪುತ್ತೂರಿನೊಡೆಯ ಮಹಾಲಿಂಗೇಶ್ವರನ ದರ್ಶನ ಮಾಡಿರೋದಂತೆ. ’ತಮ್ಮ

ಪ್ರವಾಸೋದ್ಯಮಕ್ಕೆ ಪೂರಕವಾಗಿ ರೈಲ್ವೇ ಸೌಲಭ್ಯಗಳು ಮೇಲ್ದರ್ಜೆಗೆ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈಲ್ವೇ ಇಲಾಖೆಯು ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಪ್ರವಾಸೋದ್ಯಮಕ್ಕೆ ಪೂರಕವಾಗಿ ರೈಲ್ವೇ ಸಂಚಾರ ವ್ಯವಸ್ಥೆಯಲ್ಲಿ ಪ್ರಯಾಣಿಕ ರೈಲುಗಳಿಗೆ ಅತ್ಯಾಧುನಿಕ ಮಾದರಿಯ ಹವಾ ನಿಯಂತ್ರಿಣ ವಿಸ್ಟಾ ಡೋಂ ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಭಾನುವಾರ ಕಬಕ ಪುತ್ತೂರು ಆದರ್ಶ ರೈಲು ನಿಲ್ದಾಣದಲ್ಲಿ ಎಸ್ಟಾ ಡೋಂ ಬೋಗಿಗಳನ್ನು ಅಳವಡಿಸಿದ