Home Posts tagged #RIYAZ FARANGIPETE

ಕಲ್ಲಾಪು ಗ್ಲೋಬಲ್ ಮಾರ್ಕೆಟ್’ನಲ್ಲಿ ಬಿರುಸಿನ ಮತಭೇಟೆ ನಡೆಸಿದ ರಿಯಾಝ್ ಫರಂಗಿಪೇಟೆ

ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ಇಂದು ಭೇಟಿ ನೀಡಿದ ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಬಿರುಸಿನ ಮತಯಾಚನೆ ನಡೆಸಿ, ಗಮನ ಸೆಳೆದರು. ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಗೆ ದಿನಾಂಕ ಮೇ 1ಕ್ಕೆ ಬೆಳಗ್ಗೆ 7 ಗಂಟೆಗೆ ಭೇಟಿ ನೀಡಿದ ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ವ್ಯಾಪಾರಸ್ಥರು ಮತ್ತು ಕಾರ್ಮಿಕರ ಬೆಂಬಲಯಾಚಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಮುಖಂಡರಾದ ಅಥಾವುಲ್ಲಾ ಜೋಕಟ್ಟೆ, ನವಾಝ್ ಉಳ್ಳಾಲ, ಶಹೀದ್ ಕಿನ್ಯಾ,

ಉಳ್ಳಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ಇಲ್ಲ : ರಿಯಾಝ್ ಫರಂಗಿಪೇಟೆ

ಉಳ್ಳಾಲ : ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷಕ್ಕೆ ಕ್ಷೇತ್ರದಲ್ಲಿ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಯಾಚನೆ ಮಾಡಲು ಕಾರ್ಯಕರ್ತರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆಯಲ್ಲದೆ ಜನ ಸಾಮಾನ್ಯರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಎಂದು ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು,

ಎ.17ಕ್ಕೆ ಎಸ್ ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ
ನಾಮ ಪತ್ರ ಸಲ್ಲಿಕೆ: ಅಥಾವುಲ್ಲಾ ಜೋಕಟ್ಟೆ

ಉಳ್ಳಾಲ: ಎಪ್ರಿಲ್ 17 ಸೋಮವಾರದಂದು ಮಂಗಳೂರು ವಿಧಾನಸಭಾ ಕ್ಷೇತ್ರ ಎಸ್ ಡಿಪಿಐ ಚುನಾವಣಾ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಯವರು ಸಹಸ್ರಾರು ಕಾರ್ಯಕರ್ತರೊಂದಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಎಸ್ ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಸಮಿತಿ ಸದಸ್ಯರೂ ಆದ ಅಥಾವುಲ್ಲಾ ಜೋಕಟ್ಟೆ ತಿಳಿಸಿದ್ದಾರೆ.ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಸರಿಯಾಗಿ ಉಳ್ಳಾಲ ಮಾಸ್ತಿಕಟ್ಟೆ ಜಂಕ್ಷನ್ ನಿಂದ ಕಾಲ್ನಡಿಗೆ ಜಾಥಾದಲ್ಲಿ ಸಹಸ್ರಾರು

ನಿಷ್ಪಕ್ಷಪಾತ ತನಿಖೆಗೆ ತಾನು ಸದಾ ಸಿದ್ಧ : ಎಸ್‍ಡಿಪಿಐಯ ರಿಯಾಝ್ ಫರಂಗಿಪೇಟೆ ಹೇಳಿಕೆ

ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಲ್ಲಿರುವ ಎಸ್‍ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮನೆಗೆ ಇಂದು ಬೆಳಗ್ಗೆ ಎನ್‍ಐಎ ಅಧಿಕಾರಿಗಳ ತಂಡ ಬಂಟ್ವಾಳ ಪೆÇಲೀಸರ ಸಹಕಾರದಿಂದ ದಾಳಿ ನಡೆಸಿ ವಿಚಾರಣೆ ನಡೆಸಿದೆ. ವಿಚಾರಣೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಿಯಾಝ್, ನಿಷ್ಪಕ್ಷಪಾತ ತನಿಖೆಗೆ ತಾನು ಸದಾ ಸಿದ್ಧ ಎಂದಿದ್ದಾರೆ. ಇತ್ತೀಚೆಗೆ ಬಿಹಾರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎನ್‍ಐಎ ಅಧಿಕಾರಿಗಳು ನನ್ನ ಮನೆಗೆ ಆಗಮಿಸಿ