Home Posts tagged sullia (Page 10)

ಸುಳ್ಯ : ಪ್ರತಿಷ್ಠಿತ “ಚೈತನ್ಯ ಶ್ರೀ-2024” ಮಹಿಳಾ ಸಾಧಕಿ ಪ್ರಶಸ್ತಿಗೆ ಬಹುಮುಖ ಸಾಧಕಿ ಡಾ.ಅನುರಾಧಾ ಕುರುಂಜಿ ಆಯ್ಕೆ

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ವತಿಯಿಂದ ನೀಡುವ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು

ಸುಳ್ಯ: ಮಂಡೆಕೋಲಿನಲ್ಲಿ ಅರೆಭಾಷೆ ಗಡಿನಾಡ ಉತ್ಸವದ ಸಂಭ್ರಮ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮವಿಂದು ವಿನೂತನ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಿ ಉತ್ಸವದ ಕಳೆ ಮೇಳೈಸಿದೆ. ಅರೆಭಾಷೆ ಗಡಿನಾಡ ಉತ್ಸವ-2024ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ದೊರಕಿತು. ಕರ್ನಾಟಕ ಅರೆಬಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಸಂಭ್ರಮದಿಂದ ನಡೆಯುತ್ತಿದೆ. ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಅದ್ದೂರಿ ಸಮಾರಂಭಕ್ಕೆ

ಕುಕ್ಕೆ ಸುಬ್ರಹ್ಮಣ್ಯ ದೇವಳದ ಚಂಪಾಷಷ್ಟಿ ಮಹೋತ್ಸವ: ನ.26ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವವು ನವೆಂಬರ್ 27ರಿಂದ ಡಿಸೆಂಬರ್ 12ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಶ್ರೀ ದೇವಳದಲ್ಲಿ 2024-25ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ನವೆಂಬರ್ 26ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ ಭಕ್ತಾಧಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ.ಭಕ್ತಾಧಿಗಳು ಸಹಕರಿಸುವಂತೆ ಶ್ರೀ

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನ

ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ

ಬೆಳ್ಳಾರೆ ಹೋಟೆಲ್ ನಲ್ಲಿ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಬೆಳ್ಳಾರೆಯ ಹೋಟೆಲೊಂದರಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ನಷ್ಟವಾದ ಘಟನೆ ನ.12 ರಂದು ನಡೆದಿದೆ.ಬೆಳ್ಳಾರೆ ಮುಖ್ಯರಸ್ತೆ ಸಮೀಪವಿರುವ ತೃಪ್ತಿ ಹೋಟೆಲ್ ನಲ್ಲಿ ಗ್ಯಾಸ್ ಸ್ಟವ್ ನಿಂದ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹತ್ತಿರವಿದ್ದ ಪ್ರಿಡ್ಜ್ ಸಂಪೂರ್ಣ ಸುಟ್ಟುಹೋಗಿದೆ. ಪ್ರಿಡ್ಜ್ ಮೇಲಿದ್ದ ಎರಡು ಮೊಬೈಲ್ ಹಾಗೂ ಇನ್ನಿತರ ಹಲವು ವಸ್ತುಗಳು ಸುಟ್ಟುಹೋಗಿವೆ. ನೆರೆಕರೆಯ ಅಂಗಡಿಯವರು ಹಾಗೂ ರಿಕ್ಷಾ ಚಾಲಕರು ಮತ್ತಿತರರು ಬೆಂಕಿ ನಂದಿಸಲು ಸಹಕರಿಸಿದ್ದು ಹೆಚ್ಚಿನ

ಕಸಾಪ ಸುಳ್ಯದಿಂದ ಅತ್ತ್ಯುತ್ತಮ ಶಾಲೆ ಪ್ರಶಸ್ತಿ ಪಡೆದ ಶಾಲೆಗೆ ಗೌರವಾರ್ಪಣೆ

ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು ಶಾಲೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಗಾಟಿಸಿ ಶಾಲಾ ಪೂರ್ವ

ಸುಳ್ಯ: ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮ

ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘ ನಡೆಸಿದ ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮದಲ್ಲಿ ಉಪನ್ಯಾಸ ನೀಡಿ ಸಂಧ್ಯಾರಶ್ಮಿ ಸಭಾಭವನದಲ್ಲಿ ಮಾತನಾಡಿದರು. ಕನ್ನಡ ಭಾಷೆ ರಾಜಾಶ್ರಯ ಇಲ್ಲದೇ

ಬಂದಡ್ಕ: ಅ.27ರಂದು ಅರೆಭಾಷೆ ಗಡಿನಾಡ ಉತ್ಸವ- 2024

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಬಂದಡ್ಕ ಗ್ರಾಮ ಗೌಡ ಸಮಿತಿ ಕೇರಳ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ -2024 ಅ.27ರಂದು ಬಂದಡ್ಕದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮೊದಲು ಮೆರವಣಿಗೆ ನಡೆಯಲಿದ್ದು, ಕಾರ್ಯಕ್ರಮವನ್ನು ಬಂದಡ್ಕದ ಹಿರಿಯ ವರ್ತಕರಾದ ಕೃಷ್ಣಪ್ಪ ಗೌಡ ಕೊಯಿಂಗಾಜೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮವನ್ನು ರವಿಪ್ರಸಾದ್ ಇಳಂದಿಲ ನಡೆಸಿಕೊಡಲಿದ್ದಾರೆ.

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಮನುಷ್ಯ ತನ್ನ ಜೀವನದಲ್ಲಿ ಸಮಾಜಕ್ಕೆ ಕಿಂಚಿತ್ ಸೇವೆಯನ್ನು ಮಾಡುವ ಮೂಲಕ ಸಾರ್ಥಕ ಜೀವನವನ್ನು ಕಟ್ಟಿಕೊಳ್ಳಬೇಕು. ರೆಡ್ ಕ್ರಾಸ್ ಸಂಸ್ಥೆ ಬಹಳಷ್ಟು ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದು ಅದರ ದ್ಯೇಯೋದ್ದೇಶವನ್ನು ಅರಿತು, ಸೇವಾ ಮನೋಭಾವದೊಂದಿಗೆ ಪ್ರಾಮಾಣಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಿ.‌ ಆ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಎಂದು ಸುಳ್ಯದಪ್ರಭಾರ ತಹಶೀಲ್ದಾರರಾದ ಮಂಜುನಾಥ್ ಎಂ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್

ಸುಳ್ಯ : ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆ ಯತ್ನ- ಮಹಿಳೆ ಸ್ಥಿತಿ ಗಂಭೀರ

ಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಭಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.