Home Posts tagged sullia (Page 3)

ಸಂಪಾಜೆ: ಆಟಿ ಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಸಂಪಾಜೆ ಗ್ರಾಮ ಪಂಚಾಯತ್ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ತ್ರೀ ಶಕ್ತಿ ಸಂಘಗಳು ಹಾಗೂ ಆದರ್ಶ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ಆಟಿ ಕೂಟ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕರು ಚಿಂತಕರಾದ ಚಿದಾನಂದ ಮಾಸ್ಟರ್

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ – ವಿದ್ಯಾರ್ಥಿ ಸಂಘದ ರಚನೆ, ಪ್ರತಿಜ್ಞಾ ಸ್ವೀಕಾರ ವಿಧಿ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡಿಗೆ ಸಮಾರಂಭ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು 30.07.2025 ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಸಭಾಧ್ಯಕ್ಷತೆ ವಹಿಸಿದ ಅವರು, 1996 ರಿಂದ ಕಾಲೇಜು

ಸುಳ್ಯದ ಸೃಜನಾ ಬಿ. ಎಸ್ ಗೆ ನಾಟಾ ಪರೀಕ್ಷೆಯಲ್ಲಿ 35 ನೇ ರ್‍ಯಾಂಕ್

ಸೃಜನಾ ಬಿ. ಎಸ್ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 35ನೇ ರ‌್ಯಾಂಕ್ ಪಡೆದಿರುತ್ತಾರೆ. ಇವರು ಎಕ್ಸಲೆಂಟ್ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ . ಸುಳ್ಯದ ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನ ಅಧ್ಯಕ್ಷರಾದ ಶ್ರೀಯುತ ಶುಭಕರ ಬೋಳುಗಲ್ಲು ಹಾಗೂ ಸಂಚಾಲಕರು ಶ್ರೀಮತಿ ಗೀತಾಂಜಲಿಯವರ ಪುತ್ರಿ.

ಸುಳ್ಯ:ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ ‘ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಮ್ಮ ಶಾಲೆಯ ಹಿರಿಯ ಪೋಷಕರಾದ ಶ್ರೀಮತಿ . ಪುಷ್ಪಾವತಿ ಮಾಣಿಬೆಟ್ಟು , ಶ್ರೀಮತಿ. ಜಯಲಕ್ಷ್ಮಿ ಇವರು ಭಾಗವಹಿಸಿ ಆಟಿಯ ಮಹತ್ವದ ಬಗ್ಗೆ ಪುಟಾಣಿ ಮಕ್ಕಳಿಗೆ ತಿಳಿಸಿಕೊಟ್ಟರು . ಪೋಷಕರೆಲ್ಲರೂ ಆಟಿಯ ವಿಶೇಷ ಖಾದ್ಯಗಳನ್ನು ತಯಾರಿಸಿ ಮಕ್ಕಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು . ಶಾಲೆಯ ಪುಟಾಣಿ ವಿದ್ಯಾರ್ಥಿಗಳು ನೃತ್ಯ ಮಾಡಿ

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ಕನಕ ಕಾವ್ಯ ವೈಭವ ಎಂಬ ಸಂಗೀತ- ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ – ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು ಗೋವಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಡಾ.

ಸುಳ್ಯದ ಸಮಸ್ಯೆಗಳ ಬಗ್ಗೆ ಸಿ ಇ ಓ ಗಮನಕ್ಕೆ ತಂದ ರಾಧಾಕೃಷ್ಣ ಬೊಳ್ಳೂರು ನೇತೃತ್ವದ ಕಾಂಗ್ರೆಸ್ ನಿಯೋಗ

ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಸುಳ್ಯ ತಾಲೂಕು ಪಂಚಾಯತ್ ಗೆ ಭೇಟಿ ನೀಡಿದ ಸಿ ಇ ಓ ವಿನಾಯಕ್ ಖರ್ಬಾರಿ ಯವರನ್ನು ತಾಲೂಕು ಪಂಚಾಯತ್ ಕಚೇರಿಯಲ್ಲಿ ಭೇಟಿ ಮಾಡಿದ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದ ಕಾಂಗ್ರೆಸ್ ನಿಯೋಗ ಸುಳ್ಯ ತಾಲೂಕಿಗೆ

ಸುಳ್ಯ : ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಸುಳ್ಯ:ಪತ್ರಕರ್ತರು ಸುದ್ದಿ ಮಾಡುವಾಗ ಸತ್ಯ, ನಿಖರತೆಗೆ ಒತ್ತು ನೀಡಬೇಕು, ಯಾವುದೇ ವಿಷಯವನ್ನುಪರಾಂಭರಿಸಿ, ಸತ್ಯವನ್ನು ಅರಿತು ವರದಿ ಮಾಡಬೇಕು ಎಂದು ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಹೇಳಿದ್ದಾರೆ.ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಜನರಿಗೆ ಮಾಹಿತಿ, ಶಿಕ್ಷಣ

ಸುಳ್ಯ:ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಸರಕಾರಿ ಪ್ರೌಢಶಾಲೆ ಅಜ್ಜಾವರ ಇದರ ಸಹಯೋಗದೊಂದಿಗೆ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ ಔಷಧೀಯ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾ ಸರಣಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿರುವ ಶ್ರೀ ಚಂದ್ರಶೇಖರ ಪೇರಾಲು ವಹಿಸಿದ್ದರು. ಎಸ್. ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಪ್ರಕಾಶ್ ಕಣೆಮರಡ್ಕ

ಆನೆ ದಾಳಿಯಿಂದ ಹಾನಿ ವಿಚಾರ: ಉಬರಡ್ಕ- ಮಿತ್ತೂರು, ರೆಂಜಾಳ ಗ್ರಾಮದ ಕೃಷಿಕರೊಂದಿಗೆ ಸಂವಾದ

ಕಾಡುಪ್ರಾಣಿಗಳಿಂದ ವಿಶೇಷವಾಗಿ ಆನೆ ದಾಳಿಯಿಂದ ಹಾನಿಗೊಳಗಾಗಿರುವ ಉಬರಡ್ಕ- ಮಿತ್ತೂರು ಗ್ರಾಮದ ಮತ್ತು ಮರ್ಕಂಜ ಗ್ರಾಮದ ರೆಂಜಾಳದ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮವು ಉಬರಡ್ಕ C.A ಬ್ಯಾಂಕ್ ಸಭಾಂಗಣ ಮತ್ತು ಮರ್ಕಂಜದ ಸಭೆಯು ರೆಂಜಾಳ ವಿನಾಯಕ ಸಭಾಭವನದಲ್ಲಿ ನಡೆಯಿತು. ಹಲವಾರು ತಮ್ಮ ಕೃಷಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು, ಸರಕಾರದಿಂದ ಸಿಗುವ ಸವಲತ್ತುಗಳು, ಪರಿಹಾರಗಳ ಬಗ್ಗೆ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದರು.ಸಭೆಯನ್ನು

ಸುಳ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 83ನೇ ಹುಟ್ಟುಹಬ್ಬ ಆಚರಣೆ – ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ 83ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಧ್ಯಕ್ಷರಾದ ಟಿ. ಎಂ ಶಹೀದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರು ಇಂದು ಸುಳ್ಯದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ