ಸುಳ್ಯ ಪೇಟೆಯಲ್ಲಿ ಭಾರಿ ಮಳೆಗೆ ಭೂಕುಸಿತ ಉಂಟಾಗಿ ಟ್ರಾನ್ರ್ಸ್ಫಾರ್ಮರ್ ಧರೆಗುರುಳಿರುವ ಘಟನೆ ನಡೆದಿದೆ ಸುಳ್ಯ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದು ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಅಂದು ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಲೆಕ್ಷನ್ ಕೇಂದ್ರವಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ. ತುಷ್ಟೀಕರಣದಲ್ಲಿ ಸರ್ಕಾರ ಮುಳುಗಿದೆ. ಇತ್ಯಾದಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಿದರು. ಸುಳ್ಯದ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.
ಭಾರತ ಸರ್ಕಾರದ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯ ಸಭಾ ಸಂಸತ್ ಸದಸ್ಯರಾದ ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ದೇವೇಗೌಡ ದಂಪತಿಗಳು ನಿನ್ನೆ ಮಧ್ಯಾಹ್ನ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ, ಸುಬ್ರಹ್ಮಣ್ಯ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಕುಮಾರಪರ್ವತ ಚಾರಣವನ್ನು ಅ. 3ರಿಂದ ನಿಷೇಧಿಸಲಾಗಿತ್ತು. ಅದಕ್ಕಿಂತ ಮೊದಲು ಮೇ ತಿಂಗಳಿನಿಂದ ಸೆ.29ರ ತನಕ ಅರಣ್ಯ
ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಳ್ ಹಣ್ಣ ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(35) ಮೃತಪಟ್ಟವರು. ಇವರ ಇದೇ ಲೋಕಯ್ಯ ನಾಯ್ಕ ಕೂಡಾ ಹಣ್ಣಿನ ಶರಬತ್ತು ಕುಡಿದು ಅಸ್ವಸ್ಥಗೊಂಡಿದ್ದರೆನ್ನಲಾಗಿದೆ. ಲೀಲಾವತಿ ಹಾಗೂ ಲೋಕಯ್ಯ ನಾಯ್ಕ ಒಂದು ವಾರದ ಹಿಂದೆ ಮೈರೋಳ್ ಹಣ್ಣಿನ ರಸ ತೆಗೆದು ಶರಬತ್ತು ಮಾಡಿ
ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಗ್ಯಾರೇಜ್ ಮಾಲಕರ ಹಾಗೂ ಸಹೋದ್ಯೋಗಿಗಳ ಸಂಘ (ರಿ ), ಕಡಬ, ಇವರ ಸಹಭಾಗಿತ್ವದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಕಡಬ ಪಟ್ಟಣ ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ ಕಡಬದ ಶ್ರೀ ಗಣೇಶ್ ಬಿಲ್ಡಿಂಗ್ ಕಟ್ಟಡದ ಎದುರುಗಡೆ ನಡೆಯಿತು. ಕಾರ್ಯಕ್ರಮವನ್ನು ಕಡಬ ತಾಲೂಕು ಉಪ ತಹಸೀಲ್ದಾರ್ ಗೋಪಾಲ್ ಕಲ್ಲುಗುಡ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ವಚ್ಚತೆ ಪ್ರತಿಯೊಬ್ಬರ
ಶಾಲೆಯ ಪಕ್ಕದ ಅಂಗಡಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ತಡೆಯಿರಿ ಎಂಬ ಬಾಲಕಿಯ ಮನವಿಗೆ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಸ್ಪಂದಿಸಿದ್ದೂ,ಇದೀಗ ತನ್ನ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಸಾರ್ವಜನಿಕ ವಲಯದಿಂದ ಬರುತ್ತಿರುವ ಕೆಲವು ವಿಶೇಷ ವಿಚಾರಗಳಿಗೆ ತ್ವರಿತವಾಗಿ ಸ್ಪಂದಿಸುವ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಕೈಕಂಬದ ಸರ್ಕಾರಿ ಶಾಲೆಯಲ್ಲಿ
ಕಡಬದ ಮರ್ದಾಳ ಸಮೀಪ ಕಾಡಾನೆ ತುಳಿತಕ್ಕೊಳಗಾದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಐತ್ತೂರು ಕೋಕಲಾ ಸ್ಥಳವನ್ನು ಪರಿಶೀಲಿಸಿ ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ನಂತರ ತುಳಿತಕ್ಕೊಳಗಾದ ನೇಲ್ಯಡ್ಕ ನಿವಾಸಿ ಚೋಮ ರವರ ಮನೆಗೆ ಸುಳ್ಯ ಶಾಸಕಿರವರು ಭೇಟಿ ನೀಡಿದರು. ಮನೆಯಲ್ಲಿ ಚೋಮ ರವರ ಪತ್ನಿಯ ಜೊತೆ ಮಾತನಾಡಿ ಧೈರ್ಯ ತುಂಬಿದರು. ಸರ್ಕಾರದಿಂದ ಸಿಗುವ ಸೌಲಭ್ಯ ನೀಡುವುದಾಗಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಹತ್ಯೆ ಪ್ರಕರಣದ ತೀರ್ಪನ್ನು ರಾಜ್ಯ ಹೈ ಕೊರ್ಟು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಸೇರಿದಂತೆ 6 ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 2011ರ ಏಪ್ರಿಲ್ ತಿಂಗಳಿನಲ್ಲಿ ಎ.ಎಸ್. ರಾಮಕೃಷ್ಣ ಸುಳ್ಯ ನಗರದ ರಸ್ತೆಯೊಂದರಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ




























