ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ
ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು. ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಗಡಿಯ ಚೆಕ್ ಪೋಸ್ಟ್ನಲ್ಲಿಯೇ ಮಾಡಲು ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಜಿಲ್ಲಾಡಳಿತ ಸೂಚನೆ