Home Posts tagged #udupi (Page 16)

ಮಹರ್ಷಿ ವಾಲ್ಮೀಕಿಯವರ ತತ್ವಾದರ್ಶಗಳು ಮುಂದಿನ ಪೀಳಿಗೆಗೂ ಮಾದರಿ -ಜಿಲ್ಲಾಧಿಕಾರಿ  ಡಾ. ಕೆ, ವಿದ್ಯಾಕುಮಾರಿ

ಉಡುಪಿ,: ಶ್ರೀ ಮಹರ್ಷಿ ವಾಲ್ಮೀಕಿಯವರು  ನಾಗರಿಕ ಸಮಾಜದ ಮೊದಲ ಅಕ್ಷರ   ಜ್ಞಾನಿ. ಅವರು ರಾಮಾಯಣದ ಮೂಲಕ ಬಿಂಬಿಸಿದ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು  ನಮ್ಮ ಮುಂದಿನ ಪೀಳಿಗೆಗೂ ಮಾದರಿಯಾಗಿರೋಣ ಎಂದು ಜಿಲ್ಲಾಧಿಕಾರಿ  ಡಾ. ಕೆ, ವಿದ್ಯಾಕುಮಾರಿ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ,

ಪ್ರಾಮಾಣಿಕತೆ ಮೆರೆದ ಆಟೋ ಚಾಲಕ..!

ಮಣಿಪಾಲ: ಆಟೋ ಚಾಲಕ ಪ್ರಯಾಣಿಕರು ಆಟೋ ರಿಕ್ಷಾದಲ್ಲಿ ಮರೆತು ಬಿಟ್ಟು ಹೋದ ಮೊಬೈಲ್ ಹಾಗೂ ಹಣವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಅ. 19 ರಂದು ಮಣಿಪಾಲದಲ್ಲಿ ನಡೆದಿದೆ.ಆಟೋ ಚಾಲಕರು ಎಂದರೇ ಸ್ವಲ್ಪ ದೂರ ಸಂಚಾರ ಮಾಡಲು ಸಾಕಷ್ಟು ದುಡ್ಡು ಕೇಳುತ್ತಾರೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುವುದು ಸಹಜ. ಆದರೆ ಖಾಕಿ ತೊಟ್ಟು ಆಟೋ ಚಾಲನೆ ಮಾಡುವ ಚಾಲಕರಲ್ಲಿಯೂ ಒಬ್ಬ ಸಹೃದಯಿ ಸೇವಕ ಇರುತ್ತಾನೆ ಎಂಬ ಮಾತು ಸಹ ಅಕ್ಷರಶಃ ಸತ್ಯ. ಅದೇ ರೀತಿ […]

ಬೈಂದೂರು ಉತ್ಸವ-2024 ಕ್ರೀಡಾಕೂಟಕ್ಕೆ ಚಾಲನೆ

ಬೈಂದೂರು: ಬೈಂದೂರು ಉತ್ಸವ ಕ್ಷೇತ್ರದ ಅಭಿವೃದ್ಧಿ ಅವಕಾಶಗಳ ಕಲ್ಪನೆಯಲ್ಲಿ ಕಂಡ ಕನಸು. ಒಂದೆ ಬಾರಿ ಎಲ್ಲವು ಸಾಕಾರಗೊಳಿಸುವ ತರಾತುರಿ ನಮ್ಮದಲ್ಲ ಬದಲಾಗಿ ಈ ವರ್ಷ ಆರಂಭವಾದರೆ ಹಂತ ಹಂತವಾಗಿ ಅವಕಾಶಗಳನ್ನು ಜೋಡಿಸುವ ಮೂಲಕ ನಿರಂತರ ಸಂಭ್ರಮಿಸಬೇಕೆನ್ನುವುದೇ ಬೈಂದೂರು ಉತ್ಸವದ ಮೂಲ ಧೈಯವಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.  ಅವರು ಯಡ್ತರೆ ಜೆ.ಎನ್.ಆರ್ ಕಲಾಮಂದಿರದಲ್ಲಿ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ಬೈಂದೂರು ಉತ್ಸವದ

ಉಡುಪಿ: ಹಿರಿಯ ನಟ ಮಂಡ್ಯ ರಮೇಶ್ ಅವರಿಗೆ ‘ಪಂಚಮಿ ಪುರಸ್ಕಾರ -2025’

ಉಡುಪಿ: ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪುರಸ್ಕಾರವು 1 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಪದಕವನ್ನು ಒಳಗೊಂಡಿದೆ. ಜನವರಿ ತಿಂಗಳಲ್ಲಿ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ 2023-24ನೇ ಸಾಲಿನ ಪ್ರಶಸ್ತಿ ಪ್ರಕಟ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ನೀಡಲಾಗುವ 2023-24ನೇ ಸಾಲಿನ ‘ಮಾನವ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಐಎಎಸ್ ಅಧಿಕಾರಿ ಹಾಗೂ ತಿರುವಳ್ಳೂರು ಸಂಸದ ಸಸಿಕಾಂತ ಸೆಂಥಿಲ್, ‘ಸೇವಾ ರತ್ನ’ ಪ್ರಶಸ್ತಿಗೆ ಉದ್ಯಮಿ ಕೆ.ಎಸ್. ನಿಸಾರ್ ಅಹ್ಮದ್ ಹಾಗೂ ‘ಸೌಹಾರ್ದ ರತ್ನ’ ಪ್ರಶಸ್ತಿಗೆ ಸಾಮಾಜಿಕ ಹೋರಾಟಗಾರ ವಿಲಿಯಮ್ ಮಾರ್ಟಿಸ್ ಅವರು ಆಯ್ಕೆಯಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್

ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ ” ಕನ್ನಡ ವೀಡಿಯೋ ಅಲ್ಬಮ್ ಸಾಂಗ್ ಬಿಡುಗಡೆ

ಪಡುಬಿದ್ರಿ : ಪುರಾತನ ದೇವಸ್ಥಾನದ ಹಿನ್ನೆಲೆಯನ್ನು ಇಂದಿನ ಜನತೆಗೆ ತಿಳಿಯ ಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಇಂದಿನ ಯುವ ಜನತೆ ನಮ್ಮ ಸಂಸ್ಕೃತಿ, ಸಂಪ್ರದಾಯದ ಊಳಿಸುವ ಕಾರ್ಯ ಮಾಡಬೇಕಾಗಿದೆ….ಇಂತಹ ಅಲ್ಬಮ್ ಸಾಂಗ್ ನ ಜೊತೆ ಚಲನಚಿತ್ರ ಕೂಡಾ ನಿರ್ಮಾಣವಾಗಲಿ ” ಎಂದು‌ ಮಾಜಿ.ತಾ.ಪಂ‌.ಸದಸ್ಯ ನವೀನಚಂದ್ರ ಶೆಟ್ಟಿ ‌ ಹೇಳಿದರು. ಅವರು ಪಡುಬಿದ್ರಿ ಭಾರತ್ ಸಿನಿಮಾದಲ್ಲಿ ನಡೆದ “ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ” ಕನ್ನಡ ವಿಡಿಯೋ ಅಲ್ಬಮ್ ಸಾಂಗ್

ಉಡುಪಿ: ಉಚ್ಚಿಲ ದಸರಾಗೆ ವೈಭವದ ತೆರೆ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 10 ದಿನಗಳಿಂದ ನಡೆದ ದಸರಾ ಉತ್ಸವ ನವದುರ್ಗೆಯೆ ಸಹಿತ ಶಾರದಾ ಮಾತೆ ವಿಗ್ರಹ ಜಲಸ್ತಂಭನದೊಂದಿಗೆ ಸಮಾಪನಗೊಂಡಿತು. ಉಡುಪಿ ಉಚ್ಚಿಲ ದಸರಾ ಉತ್ಸವ 2024ರ ವೈಭವದ ವಿಸರ್ಜನಾ ಶೋಭಾಯಾತ್ರೆಗೆ ಶನಿವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಡೋಜ ಡಾ| ಜಿ. ಶಂಕರ್ ಮತ್ತು ಶಾಲಿನಿ ಶಂಕರ್ ದಂಪತಿ ಪುಷ್ಪಾರ್ಚನೆಗೈದು ಚಾಲನೆ ನೀಡಿದರು. ಕ್ಷೇತ್ರದ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ 55ರ ಹರೆಯದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಭೆ:8% ಡಿವಿಡೆಂಡ್ ಘೋಷಣೆ

ಕುಂದಾಪುರ:ಬೈಂದೂರು ಅರ್ಬನ್ ಸೌಹಾರ್ದಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಭೆ ಸಂಘದ ಅಧ್ಯಕ್ಷರಾದ ಮಣಿಕಂಠ ಎಸ್ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ.ಬೈಂದೂರು ಸರಕಾರಿ ಪದವಿ ಪೂರ್ವ ಕಾಲೀಜಿಗೆ ಶೈಕ್ಷಣಿಕ ಸಹಾಯ ಧನ ವಿತರಣೆ.ನಿವೃತ್ತ ಸರಕಾರಿ ಉದ್ಯೋಗಿಗಳಿಗೆ ಸನ್ಮಾನ.ಸಾಧನೆಗೈದಿರುವ ಸಂಘದ ಸ್ವ ಸಹಾಯ ಸಂಘದ ಸದಸ್ಯರಿಗೆ ವಿಶೇಷ ಬಹುಮಾನಗಳನ್ನು ನೀಡುತ್ತಾ ಬಂದಿರುವ ಸಂಘವು,ಕೊರೊನಾ ಸಂದರ್ಭದಲ್ಲಿ