Home Posts tagged #udupi (Page 16)

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಆರಾಧನಾ ಮಹೋತ್ಸವ

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಉಚ್ಚಿಲ ರಾಘವೇಂದ್ರ ಮಠ, ಕಳತ್ತೂರು ರಾಘವೇಂದ್ರ ಮಠ ಸೇರಿದಂತೆ ತಾಲೂಕಿನ ವಿವಿಧೆÉಡೆ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ಅರ್ಚಕರಾದ ಜನಾರ್ದನ ತಂತ್ರಿಗಳ ಸಹಕಾರದಲ್ಲಿ ರಾಘವೇಂದ್ರ ಶ್ರೀಗಳ

ಉಡುಪಿ : ಡಿವೈನ್ ಸ್ಟಾರ್ ರಿಶಬ್ ಶೆಟ್ಟಿಗೆ ಕರಾವಳಿಯ ಪಾಣರ ಯಾನೆ ದೈವ ನಲಿಕೆ ಸಂಘಟನೆಯಿಂದ ಸೆ.3ರಂದು ಉಡುಪಿಯಲ್ಲಿ ಸನ್ಮಾನ

ಕಾಂತರ ಸಿನಿಮಾ ಮೂಲಕ ಕರಾವಳಿ ದೈವಾರಾಧನೆಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿ ಡಿವೈನ್ ಸ್ಟಾರ್ ಪಟ್ಟ ಪಡೆದುಕೊಂಡ ರಿಶಬ್ ಶೆಟ್ಟಿ ಅವರಿಗೆ ಕರಾವಳಿಯ ಪಾಣರ ಯಾನೆ ದೈವ ನಲಿಕೆ ಸಂಘಟನೆ ವತಿಯಿಂದ ಸೆ.3ರಂದು ಭಾನುವಾರ ಉಡುಪಿಯಲ್ಲಿ ಸನ್ಮಾನ ನಡೆಯಲಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪಾಣರ ಯಾನೆ ನಲಿಕೆ ಸಮಾಜ ಸೇವಾ ಸಂಘದ ವಾರ್ಷಿಕ ಸಮಾವೇಶ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಚಿತ್ರ ನಟ ರಿಶಬ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುತ್ತಿದೆ. ಕಾರ್ಯಕ್ರಮವನ್ನು

ಉಡುಪಿ: ಬಿಜೆಪಿಯವರಿಂದಲೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ-ಗಾಯಾಳು ಅಸ್ಪತ್ರೆಗೆ ದಾಖಲು

ಉಡುಪಿಯ ಜಿಲ್ಲೆಯ ಮುದ್ದೂರು ಎಂಬಲ್ಲಿ ಬಿಜೆಪಿಯವರಿಂದಲೇ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದ್ದು ಗಂಭೀರ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತ ನೆಂಚಾರು ನಿವಾಸಿ ಪ್ರಭಾಕರ ಪೂಜಾರಿ (51) ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು ಮೊದಲಿನಿಂದಲೂ ಬಿಜೆಪಿಯ ಕಾರ್ಯಕರ್ತರಾಗಿದ್ದ ಪ್ರ್ರಭಾಕರ ಪೂಜಾರಿ ಕಳೆದ ಬಾರಿ ಸ್ಥಳೀಯ ಪಂಚಾಯತ್ ಚುನಾವಣೆಯಲ್ಲಿ

ಉಡುಪಿ: ಮಣಿಪಾಲ ಮೂಳೆ ಮಜ್ಜೆಯ ಕಸಿ ಚಿಕಿತ್ಸೆ ಯಶಸ್ವಿ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ-ಹೊಂದಾಣಿಕೆಯ ಮೂಳೆ ಮಜ್ಜೆಯ ಕಸಿ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದಿದ್ದ ಒಂದು ವರ್ಷದ ಮಗುವಿಗೆ ಸಿವಿಯರ್ ಕಂಬೈನ್ಡ್ ಇಮ್ಮುನೊ ಡೆಫಿಸಿನ್ಸಿ ಹೆಸರಿನ ತೀವ್ರ ತರಹದ ರೋಗ ನಿರೋಧಕ ಶಕ್ತಿ ಕೊರತೆ ಕಾಯಿಲೆ ಪತ್ತೆಯಾಗಿತ್ತು. ಅಸ್ಥಿಮಜ್ಜೆ ಕಸಿ ಮಾತ್ರವೇ ಮಗುವಿನ ಕಾಯಿಲೆ ಗುಣಪಡಿಸಬಲ್ಲ ಇದ್ದ ಏಕೈಕ ಚಿಕಿತ್ಸೆಯಾಗಿದ್ದರಿಂದ

ಪಡುಬಿದ್ರಿ: ಟ್ಯಾಂಕರ್- ಸ್ಕೂಟರ್ ಅಪಘಾತ -ಗಂಭೀರ ಗಾಯಗೊಂಡಿದ್ದ ಸಹ ಸವಾರ ಮೃತ್ಯು

 ಹೆಜಮಾಡಿ ಸಮೀಪದ ಕನ್ನಂಗಾರಿನಲ್ಲಿ ನಡೆದ ಟ್ಯಾಂಕರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ಸ್ಕೂಟರ್‌ನ ಸಹ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಯುವಕ ಜಾರ್ಕಾಂಡ್ ಮೂಲದ ಹೆಜಮಾಡಿ ಬ್ರಹ್ಮಸ್ಥಾನ ಬಳಿ ಬಾಡಿಗೆ ಕೋಣೆಯ ನಿವಾಸಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಸದ್ದಾಂ ಅನ್ಸಾರಿ(20). ಸವಾರ ಪರ್ವೇಜ್ ಸಣ್ಣ ಪುಟ್ಟ ಗಾಯಗೊಂಡಿದ್ದಾರೆ.ತಮ್ಮ ವಾಸದ ಮನೆಯಿಂದ ಪಡುಬಿದ್ರಿ ಕಡೆಗೆ ಸ್ಕೂಟರ್ ನಲ್ಲಿ ಬರುತ್ತಿದ್ದು, ಹೆಜಮಾಡಿ ಒಳ

ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದಲ್ಲಿ ಬೆಳಕಿಗಾಗಿ ಪರದಾಟ

ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ನಗರಭಾಗ ಸೇರಿದಂತೆ ಹೇರೂರಿನಿಂದ ಉಪ್ಪಿನಕೋಟೆ ತನಕ ಕೇಂದ್ರ ಭಾಗದಲ್ಲಿ ಚತುಷ್ಪಥ ರಸ್ತೆಗೆ ಹೆದ್ದಾರಿ ಇಲಾಖೆಯಿಂದ ಬೆಳಕಿನ ವ್ಯವಸ್ಥೆಯಿಲ್ಲ. ರಸ್ತೆ ಬದಿ ವಿದ್ಯುತ್ ಕಂಬಗಳು ಮಾತ್ರ ಕಂಡುಬರುತ್ತಿದ್ದು, ವಿದ್ಯುತ್ ದೀಪಗಳು ಮಾತ್ರ ಉರಿಯುತ್ತಿಲ್ಲ. ಬ್ರಹ್ಮಾವರ ಸರ್ವಿಸ್ ರಸ್ತೆ ಆರಂಭವಾಗುವ ಮಹೇಶ್ ಆಸ್ಪತ್ರೆಯಿಂದ ಧರ್ಮಾವರ ವೃತ್ತ ತನಕ ವಾಹನ ಸಂಚಾರಿ ಮತ್ತು ಪಾದಚಾರಿಗಳಿಗೆ ಸರಿಯಾದ ಬೆಳಕಿನ ವ್ಯವಸ್ಥೆ

ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ

ಉಡುಪಿ ಜಿಲ್ಲೆಯ ಗಡಿಭಾಗದ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಕಳೆದ ರಾತ್ರಿ ಬೆಂಗಳೂರು ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ ನಡೆದಿದೆ. ಬೆಂಗಳೂರಿನ ಐವರು ಯುವಕರ ತಂಡ ಕಾರಲ್ಲಿ ಬಂದಿದ್ದು ಪಾಸ್ಟ್ ಟ್ಯಾಗ್ ಇಲ್ಲದ ಅವರು ಗೇಟನ್ನು ಕೈಯಿಂದ ತೆರೆದು ಮುಂದೆ ಹೋದಾಗ ಟೋಲ್ ಸಿಬ್ಬಂದಿಗಳು ತಡೆದಿದ್ದು ಆಗ ಯುವಕನೊರ್ವ ಟೋಲ್ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾನೆ. ಇದರಿಂದ ಆಕ್ರೋಶಗೊಂಡ ಟೋಲ್ ಸಿಬ್ಬಂದಿಗಳು ಯುವಕರಿಗೆ ಚೆನ್ನಾಗಿ ಬಾರಿಸಿದ್ದಾರೆ.

ಶಿರೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಮೃತ್ಯು

ಶಿರೂರಿನ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿ ಮೃತಪಟ್ಟ ಘಟನೆ ಅಳ್ವೆಗದ್ದೆಯಲ್ಲಿ ನಡೆದಿದೆ. ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಸಂಜೆ ಕೂಡ ಕೈರಂಪಣಿ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ

ಉಡುಪಿ: ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸದಿರಲಿ – ಜಗದೀಶ್ ಶೆಟ್ಟರ್

ಉಡುಪಿ : ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು. ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಹೇಳಿದರು. ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆಯೋಜಿಸಿದ್ದ ಮಾಲಿನ್ಯ ನಿಯಂತ್ರಿತ ಕೈಗಾರೀಕರಣ ಹಾಗೂ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಸಂವಾದ

ಬ್ರಹ್ಮಾವರ: ಚಂದ್ರಯಾನ-3 ಯಶಸ್ಸಿಗೆ ಸಂಭ್ರಮಾಚರಣೆ

ಬ್ರಹ್ಮಾವರ : ವಿಶ್ವಕ್ಕೆ ಅಚ್ಚರಿ ಮೂಡಿಸಿದ ಭಾರತದ ಚಂದ್ರಯಾನದ ಯಶಸ್ಸಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ.ಬ್ರಹ್ಮಾವರ ಫ್ರೆಂಡ್ಸ್ ಮತ್ತು ಡೈಮಂಡ್ ಜಿಮ್‍ನ ಸದಸ್ಯರು ಭಾರತದ ಹೆಮ್ಮೆಯ ವಿಜ್ಞಾನಿಗಳ ತಂಡದ ಶ್ರಮಕ್ಕೆ, ಇಸ್ರೋ ಸಂಸ್ಥೆಗೆ, ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಮತ್ತು ಭಾರತ ಮಾತೆಗೆ ಜೈ ಕಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಂಡದ ದೇವಾನಂದ ನಾಯಕ್, ಅರ್ಜುನ ಪ್ರಭು, ಮಧುಸೂಧನ