Home Posts tagged #udupi (Page 22)

ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾದುದು – ಮಾರ್ಗರೇಟ್ ಸುದರ್ಶಿನಿ

ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ,ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್ ಇದರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಹೊಂದಿದ ಶ್ರೀ ಸುಂದರ ಗೌಡ ಅವರಿಗೆ ಎವಿಜಿ ಶಾಲೆಯಲ್ಲಿ ಅಭಿನಂದನೆ

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ

ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಆಯ್ಕೆ

ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಭರತ್ ಶೆಟ್ಟಿಗಾರ್ ಮರು ಆಯ್ಕೆಯಾಗಿದ್ದಾರೆ. ತೆಂಕ ಎರ್ಮಾಳು ಅಳ್ವೆಕೋಡಿ ಬಬ್ಬುಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಮಾರು ಮೂವತ್ತೈದು ಮಂದಿ ಸದಸ್ಯರನ್ನು ಹೊಂದಿರುವ ಈ ಸಂಸ್ಥೆ ಅನೇಕ ಸಮಾಜೋಮುಖಿ ಕಾರ್ಯಗಳನ್ನು ನಡೆಸಿ ಜನಾನುರಾಗಿದೆ.ಉಪಾಧ್ಯಕ್ಷರಾಗಿ

ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಖಾಸಗಿ ಬಸ್ ಮಾಲೀಕರು ಹಾಗೂ ಕೆಎಸ್ ಆರ್ ಟಿಸಿ, ಆರ್ ಟಿಒ ಅಧಿಕಾರಿಗಳ ಸಭೆ

ಬೈಂದೂರು: ಬೈಂದೂರು ತಾಲೂಕಿನಾದ್ಯಂತ ವಿವಿಧ ಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಎದುರಿಸುತ್ತಿರುವ ಸಾರಿಗೆ ಸಮಸ್ಯೆಗೆ ಸೂಕ್ತ ಪರಿಹಾಕರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕಾರದ ಗುರುರಾಜ್ ಗಂಟಿಹೊಳೆ ಅವರು ಶುಕ್ರವಾರ ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ಖಾಸಗಿ ಬಸ್ ಮಾಲೀಕರು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಗೂ ಆರ್‌ಟಿಓ ಅಧಿಕಾರಿಗಳ ಸಭೆ ನಡೆಸಿದರು. ಕೆಎಸ್‌ಆರ್‌ಟಿಸಿಗೆ ಸೂಚನೆಖಾಸಗಿ ಬಸ್ ಇಲ್ಲದ ರೂಟ್‌ಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು

ಕಿರು ಬಂದರು ಅಭಿವೃದ್ಧಿಗೆ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಕೊಡೇರಿ ಕಿರು ಬಂದರು ಸಮಗ್ರ ಅಭಿವೃದ್ಧಿ, ಸ್ಥಳೀಯ ಮೀನುಗಾರರ ಸಮಸ್ಯೆ, ಜಟ್ಟಿ ಹಾಗೂ ಬ್ರೇಕ್ ವಾಟರ್ ವಿಸ್ತರಣೆ, ಡ್ರೆಜ್ಜಿಂಗ್ ಸಹಿತ ಹಲವು ಸಮಸ್ಯೆಗಳು ಮತ್ತು ಅಹವಾಲು ಆಲಿಸುವ ಸಂಬಂಧ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬುಧವಾರ ಕೊಡೇರಿಯ ಬಂದರು ಪ್ರದೇಶದಲ್ಲಿ ಮೀನುಗಾರರು ಮತ್ತು ಅಧಿಕಾರಿಗಳ ಸಭೆ ನಡೆಸಿದರು. ಕೊಡೇರಿ ಕಿರು ಬಂದರು ತಾಲೂಕಿನ ಪ್ರಮುಖ ಮೀನುಗಾರಿಕ ಕೇಂದ್ರಗಳಲ್ಲಿ ಒಂದಾಗಿ ಬೆಳೆಯುತ್ತಿದೆ. ಇಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು

ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಮೋರಿಯ ದಂಡೆಗೆ ಡಿಕ್ಕಿಯಾದ ಕಾರು: ಚಾಲಕ ಅಪಾಯದಿಂದ ಪಾರು

ಬಡಾ ಎರ್ಮಾಳು ಅಪೂರ್ವ ಲಾಡ್ಜ್ ಮುಂಭಾಗ ಕಾರೊಂದು ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ಮೋರಿಯೊಂದರ ದಂಡೆಗೆ ಡಿಕ್ಕಿಯಾಗಿ ಮುಗುಚಿ ಬಿದ್ದಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು ಮರಳಿ ಉಡುಪಿಗೆ ಹಿಂದಿರುಗಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಬಂದ ಹೆಜಮಾಡಿ ಟೋಲ್ ಸಿಬ್ಬಂದಿಗಳು ಸಹಿತ ಪೊಲೀಸರು ಹೆದ್ದಾರಿಗಡ್ಡವಾಗಿ ಉರುಳಿಬಿದ್ದ

ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛತೆಗೊಳಿಸಿದ ದೈಹಿಕ ಶಿಕ್ಷಕ

ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದ ದೈಹಿಕ ಶಿಕ್ಷಕರೋರ್ವರು ಸ್ವಚ್ಛಗೊಳಿಸಿದ ಘಟನೆ ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈಗಾಗಲೇ ಸರಕಾರದಿಂದ ಈ ಕುರಿತಾಗಿ ಸುತ್ತೋಲೆ ಬಂದಿದ್ದು ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳ ಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ಎಸ್‌ಡಿಎಂಸಿ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯ ಸಂಪನ್ಮೂಲ ಬಳಸಿಕೊಂಡು

ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯ ರಕ್ಷಣೆ

ಉಡುಪಿಯಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿರುವ ಘಟನೆ ನಡೆದಿದೆ. ಮನನೊಂದು ಮನೆ ಬಿಟ್ಟ ಮಹಿಳೆಯು ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದಿಂದ ಉಡುಪಿಗೆ ಬಂದಿದ್ದಳು. ಶ್ರೀಕೃಷ್ಣ ಮಠದಲ್ಲಿ ಅನ್ನಪ್ರಸಾದ ಸೇವಿಸಿ ಕೆಲವು ದಿನಗಳಿಂದ ದಿನಕಳೆಯುದಿದ್ದಳೆಂದು ತಿಳಿದುಬಂದಿದೆ. ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಬೀದಿ ಕಾಮಣ್ಣರು,ಹಿಂಬಾಲಿಸುತ್ತಿದ್ದರಿಂದ, ಮಹಿಳೆ

ಜೆಸಿಬಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಜೆಸಿಬಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೂರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಶೆಟ್ಟಿ ಮನೆಯ ಆದರ

ಅಡುಗೆಮನೆಯ ನೆಂಟ ಈ ಕವಳೆಕಾಯಿ

ಕರಂಡೆಯು ಹುಳಿ ಕಾಡು ಕಾಯಿಯಾಗಿದ್ದು, ಹಣ್ಣಾದಾಗ ನೀಲಿ ದ್ರಾಕ್ಷಿಯ ರುಚಿ ಹೊಂದಿದೆ. ಬ್ರಿಟನ್, ಅಮೆರಿಕದ ಕ್ರಾನ್‌ಬೆರಿ ಇದೇ ರುಚಿಯದು, ತುಸು ದೊಡ್ಡದು.ವ್ಯಾಪಕವಾಗಿ ಬೆಳೆಸಿ ನಾವು ಬಳಸುವಂತೆಯೇ ಬಳಸುತ್ತಾರೆ. ಕರಂಡೆಯನ್ನು ಉಪ್ಪಿನಕಾಯಿ ಹಾಕುತ್ತಾರೆ, ಉಪ್ಪಿನಲ್ಲಿ ಹಾಕಿ ಇಡುತ್ತಾರೆ. ಬೇಯಿಸಿ ಒಣಗಿಸಿಟ್ಟು ಹುಣಸೆ ಹುಳಿಯ ಬದಲು ಬಳಸುತ್ತಾರೆ. ರೈಲಿನಲ್ಲಿ ಪೂನಾ ಮುಂಬಯಿ ನಡುವೆ ಲೋನಾವಳ ಬಳಿ ಇದರ ಹಣ್ಣನ್ನು ಎಲೆಯಲ್ಲಿ ಕಟ್ಟಿ ಮಾರುವ ಬುಡಕಟ್ಟು ಮಹಿಳೆಯರು