ಉಡುಪಿ: ಉಡುಪಿ ನಗರದ ಬ್ರಹ್ಮಗಿರಿಯ ಅಪಾರ್ಟ್ಮೆಂಟ್ ನ ಕಿಟಕಿ ಪೊರಂನಲ್ಲಿ ಎಂಟು ವರ್ಷದ ವಿಶೇಷಚೇತನ ಬಾಲಕ ಸಿಲುಕಿಕೊಂಡಿರುವ ಘಟನೆ ನಡೆದಿದೆ. 11ನೇ ಮಹಡಿಯ ಬಾಲ್ಕನಿ ಮೂಲಕ ಹೊರ ಹೋಗಿ 10ನೇ ಮಹಡಿಯ ಕಿಟಕಿ ಪೋರಂನಲ್ಲಿ ಸಿಲುಕಿಕೊಂಡಿದ್ದ ಆರುಷ್ ಎಂಬ ಬಾಲಕನನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಅಗ್ನಿಶಾಮಕ ದಳದ ಯಶಸ್ವಿ ಕಾರ್ಯಚರಣೆಯಿಂದ ಆರುಷ್
ಉಡುಪಿ : ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಇಂದು ಉಡುಪಿಯಲ್ಲಿ ಮಾತನಾಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ವಿಚಾರ ತಿಳಿದು ನನಗೆ ಅತೀವ ದುಃಖವಾಗಿದೆ. ಇದು ಜನತೆಯಲ್ಲಿ ಗಾಬರಿ ಹುಟ್ಟಿಸುವ ಘಟನೆ. ಓರ್ವ ಸಾಧುವನ್ನು ಸ್ವತಂತ್ರ ಭಾರತದಲ್ಲಿ ಈ ರೀತಿ ಹತ್ಯೆ ಮಾಡಿರುವುದು ದುರಂತ. ಹೀಗಾದರೆ ಸಾಮಾನ್ಯ ಜನರ ಪಾಡೇನು? ಇಂತಹ ಕೃತ್ಯ ಎಂದೂ ಎಲ್ಲೆಲ್ಲೂ ನಡೆಯಬಾರದು. ಈ ಘಟನೆಯನ್ನು ತೀಕ್ಷ್ಣ ಮಾತುಗಳಿಂದ ಖಂಡಿಸುತ್ತೇವೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು
ಉಡುಪಿಯ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಂತೆಕಟ್ಟೆ ಪ್ರದೇಶದಲ್ಲಿ ಆರಂಭಗೊಂಡಿರುವ ಅಂಡರ್ ಪಾಸ್ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಮಣ್ಣು ಕುಸಿಯಲು ಆರಂಭವಾಗಿದ್ದು, ಇದರಿಂದ ಇಲ್ಲಿ ನಿರ್ಮಿಸಲಾದ ತಡೆಗೋಡೆಗಳಿಗೂ ಹಾನಿಯಾಗಿದೆ. ಅಷ್ಟು ಮಾತ್ರವಲ್ಲದೆ ಮಣ್ಣು ಕುಸಿತ ಹೆಚ್ಚಾಗುತ್ತಿದ್ದು
ಉಡುಪಿ : 1949 ಜುಲೈ 9 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರದಪುನರ್ ರ್ನಿರ್ಮಾಣದ ಧ್ಯೇಯದೊಂದಿಗೆ ಅಧಿಕೃತವಾಗಿ ನೊಂದಾಯಿಸಲ್ಪಟ್ಟು ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಪ್ರತೀ ವರ್ಷ ಎಬಿವಿಪಿ ಈ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿವಸನ್ನಾಗಿ ಆಚರಿಸಿಕೊಂಡು ಬಂದಿದೆ. ಈ ಬಾರಿ ಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಅನ್ನು ರಾಷ್ಟ್ರಾದ್ಯಂತ ಪ್ರತೀ ಶಾಖೆಗಳಲ್ಲಿ ಧ್ವಜಾರೋಹಣ ಮಾಡುವುದರೊಂದಿಗೆ ಕಾರ್ಯಕ್ರಮದ ಸಂಭ್ರಮಾಚರಣೆ
ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅವರು ಪಡುಬಿದ್ರಿಯ ನಡಿಪಟ್ಣದಲ್ಲಿ ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಮತ್ತು
ಬೈಂದೂರು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದ ಪರಿಣಾಮವಾಗಿ ಕೆಲವೆಡೆ ಅಪಾರ ಹಾನಿ ಸಂಭವಿಸಿದೆ. ಬೈಂದೂರಿನ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೃಷಿಗೂ ಹಾನಿ ಸಂಭವಿಸಿದೆ. ಇಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು. ಕಳೆದ 5 ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದೆ. ನದಿಯ ಅಕ್ಕ ಪಕ್ಕ ಪ್ರದೇಶಗಳಾದ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ ಮತ್ತೊಂದು ಸಾವು ಸಂಭವಿಸಿದೆ. ತಡರಾತ್ರಿ ಉಡುಪಿ ಜಿಲ್ಲೆಯ ಬೆಳ್ಮಣ್ ಪೇಟೆ ಬಳಿಯಲ್ಲಿ, ಬೈಕ್ ಸವಾರನ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಪಿಲಾರುಕಾನದ ಪ್ರವೀಣ್ ಆಚಾರ್ಯ (30), ಕಾರ್ಕಳದಿಂದ ತನ್ನ ಮನೆಯತ್ತ ತೆರಳುತ್ತಿದ್ದಾಗ ಏಕಾಏಕಿ ಉರುಳಿಬಿದ್ದ ಬೃಹತ್ ಮರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಕೆಲವೆಡೆ ಹಾನಿ ಸಂಭವಿಸಿದೆ. ಜುಲೈ 7 ರಂದು ಮಳೆ ಮುಂದುವರೆಯುವ ಮುನ್ಸೂಚನೆಯಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಕೂಡ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ,
ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಕೃಷ್ಣಮಠ ಬಳಿ ಬೈಲಕೆರೆ ಪ್ರದೇಶದಲ್ಲಿ ಏಳೆಂಟು ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಬನ್ನಂಜೆ-ಗರಡಿ ರಸ್ತೆ
ಸೋಲು- ಗೆಲುವು ಎಲ್ಲಾ ರಂಗಗಳಲ್ಲಿಯೂ ಸಹಜ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ, ಸೋಲಿನ ಪರಾಮರ್ಶೆ ನಡೆಸಿ ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಕ್ರೀಡಾಸ್ಪೂರ್ತಿಯೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಸಂಘಟನಾತ್ಮಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷ ಬಲವರ್ಧನೆಗೆ ಪಣ ತೊಡೋಣ ಎಂದು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಕಾಪು