Home Posts tagged #udupi (Page 36)

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ 9 ನೇ ನೂತನ ಹವಾನಿಯಂತ್ರಿತ ಶಾಖೆ

108 ವರ್ಷ ಇತಿಹಾಸದ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಮಟಪಾಡಿಯ 9 ನೇ ನೂತನ ಹವಾನಿಯಂತ್ರಿತ ಶಾಖೆ ಮತ್ತು ನವರತ್ನ ಮಿನಿ ಸಭಾಂಗಣದ ಉದ್ಘಾಟನೆ ಜರುಗಿತು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರು ನೂತನÀ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಸಹಕಾರಿ ಸಂಸ್ಥೆಗಳು ಸರಕಾರದ ಯಾವೂದೇ ಸೌಲಭ್ಯವನ್ನು ಬಯಸದೆ

ಬ್ರಹ್ಮಾವರ: ಒಂದು ತಂತಿಯಿಂದ ನಾದ ಹೊರಹೊಮ್ಮಿಸುವ ಕಿಂದರಜೋಗಿ

ದಸರಾ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕರಾವಳಿ ಭಾಗಕ್ಕೆ ಬಂದು ದಾಸರ ಮತ್ತು ಸಂತರ ಪದಗಳನ್ನು ಹಾಡಿ ಜನರನ್ನು ಬೆರಗುಗೊಳಿಸುತ್ತಿದ್ದರು. ಇದೀಗ ದಾವಣಗೆರೆ ಮೂಲದ ಭೈರಪ್ಪ ಅವರು ಕರಾವಳಿ ಭಾಗಕ್ಕೆ ಆಗಮಿಸಿದ್ದು, ದಾಸರ ಮತ್ತು ಸಂತರ ಪದಗಳನ್ನು ಹಾಡಿ ಜೀವನದ ಮೌಲ್ಯವನ್ನು ಬಿತ್ತರಿಸುವ ಕಾಯಕಕ್ಕೆ ಮುಂದಾಗಿದ್ದಾರೆ. 4 ಅಡಿ ಉದ್ದದ ಬಿದಿರಿನ ದಂಡವೊಂದಕ್ಕೆ 3 ಸ್ಥರದ ಸೋರೆ ಕಾಯಿ ಬುರುಡೆಗೆ ತಂತಿಯೊಂದನ್ನು ಅಳವಡಿಸಿ ಹಾಡು ಹಾಡುವಾಗ ಸ್ವರ ತಂತುಗಳು ತಂತಿ ಮೂಲಕ

ಬೈಂದೂರು: 62ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್, ಮಣಿಕಾಂತ ಹೋಬಳಿದಾರ್‍ಗೆ ಚಿನ್ನದ ಪದಕ

62ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಬೈಂದೂರಿನ ಮಣಿಕಾಂತ ಹೋಬಳಿದಾರ್ ದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿದ್ದಾರೆ. 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಸರ್ವಿಸರ್ಸ್ ತಂಡವನ್ನು ಪ್ರತಿನಿಧಿಸಿದ 21 ವರ್ಷದ ಮಣಿಕಾಂತ ಹೋಬಳಿದಾರ್ ಅವರು 100 ಮೀ. ಓಟದ ಸೆಮಿಫೈನಲನ್ನು ಕೇವಲ 10.23 ಸೆಕೆಂಡ್‍ಗಳಲ್ಲಿ ಓಡುವ ಮೂಲಕ ರಾಷ್ಟ್ರೀಯ ದಾಖಲೆ ಬರೆದು ಅಗ್ರಸ್ಥಾನದೊಂದಿಗೆ ಫೈನಲ್‍ಗೆ

ಉಡುಪಿ: ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟಿಸುವ ಪರಿಸ್ಥಿತಿ ಸೃಷ್ಠಿ ಮಾಡಬೇಡಿ: ಕೋಟ ಶ್ರೀನಿವಾಸ ಪೂಜಾರಿ

ಕರ್ನಾಟಕದ ಎಲ್ಲಾ ವಿರೋಧ ಪಕ್ಷದ ಶಾಸಕರಿಗೆ ಅನ್ವಯಿಸುವ ಸಮಸ್ಯೆ ಇದು. ವಿರೋಧಪಕ್ಷದ ಶಾಸಕರನ್ನ ಸಿದ್ದರಾಮಯ್ಯ ಸರ್ಕಾರ ಹಣೆಯಲು ಹೊರಟಿದೆ. ಹಿಂದಿನ ಸರ್ಕಾರದ ಎಲ್ಲಾ ಯೋಜನೆಯನ್ನು ಈ ಸರ್ಕಾರ ತಡೆ ಹಿಡಿದಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಅನುದಾನ ಬಿಡುಗಡೆಗೆ ಆಗ್ರಹಿಸಿ ಶಾಸಕ ಮುನಿರತ್ನ ಪ್ರತಿಭಟನೆ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಮಂಜೂರಾದ ಯೋಜನೆಯ ಹಣವನ್ನು ಬಿಡುಗಡೆ ಮಾಡದೆ ತಡೆಹಿಡಿಯಲಾಗಿದೆ. ಹೊಸ

ಕುಂದಾಪುರ: ಸೇನಾಪುರ ರೈಲ್ವೇ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆಗೆ ಹೋರಾಟ ಸಮಿತಿಯಿಂದ ಆಗ್ರಹ

ಕುಂದಾಪುರದ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಆಗ್ರಹಿಸಿ ಚಲೋ ಸೇನಾಪುರ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್ ಪ್ರತಿಭಟನೆ ಮೆರವಣಿಗೆ ನಾಡಾ ಗ್ರಾಮ ಪಂಚಾಯತ್‍ನಿಂದ ಆರಂಭಗೊಂಡು ಸೇನಾಪುರ ರೈಲ್ವೇ ನಿಲ್ದಾಣದವರೆಗೆ ಸಾಗಿಬಂದು, ಬಳಿಕ ರೈಲ್ವೇ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿಯ ಸಂಚಾಲಕ ರಾಜೀವ್

ಉಡುಪಿ: ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ: ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಹುಟ್ಟೂರ ಪ್ರಶಸ್ತಿ ಪ್ರದಾನ

ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಆಗಮಿಸಿದ್ದ ರಾಜ್ಯಪಾಲ ಥಾವರ್‍ಚಂದ್ ಗೇಹಲೋಟ್‍ರವರಿಗೆ

ಕುಂದಾಪುರ: ಕೊಲ್ಲೂರು ಕ್ಷೇತ್ರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಶೇಷ ಪೂಜೆ ಸಲ್ಲಿಕೆ

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ದೇವರ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ರಾಜ್ಯಪಾಲರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್

ಉಡುಪಿ: ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್ ಉಡುಪಿ ಪ್ರವೇಶಕ್ಕೆ ನಿರ್ಬಂಧ

ಉಡುಪಿ: ವಿಎಚ್‌ಪಿ- ಬಜರಂಗದಳ ವತಿಯಿಂದ ಇಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ

ಬೈಂದೂರು: ವಿಹೆಚ್‍ಪಿ ಬಜರಂಗದಳದಿಂದ ಸರಣಿ ಗೋವುಗಳ ಹತ್ಯೆ ಖಂಡಿಸಿ ಪ್ರತಿಭಟನೆ

ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದಲ್ಲಿ ಗುಂಡೇಟಿನಿಂದ ಬಲಿಯಾದ ಸರಣಿ ಗೋ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಯಾದ ನರಸಿಂಹ ಕುಲಾಲ್‍ನನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡದ ವತಿಯಿಂದ ಪ್ರತಿಭಟನೆ ಕೊಲ್ಲೂರಿನಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿಯಾದ ಶರಣ್ ಪಂಪ್ವೆಲ್ ಅವರು ಸಂತ್ರಸ್ತ ಕುಟುಂಬದ ಮನೆಗೆ ತೆರಳಿ ಸದಾಕಾಲ ವಿಶ್ವ ಹಿಂದು ಪರಿಷತ್ ನಿಮ್ಮೊಂದಿಗೆ

ಅ.10ರಂದು ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ – ಅನಧಿಕೃತ ಬ್ಯಾನರ್ ಗಳ ತೆರವು

ಶಿವಮೊಗ್ಗದ ಈದ್ ಮಿಲಾದ್ ಗಲಾಟೆ ಬಳಿಕ ಎಚ್ಚೆತ್ತಿರುವ ಉಡುಪಿ ನಗರಸಭೆ, ನಗರ ವ್ಯಾಪ್ತಿಯ ಅನಧಿಕೃತ ಬ್ಯಾನರ್ ಮತ್ತು ಕಟೌಟ್‍ಗಳನ್ನು ತೆರವುಗೊಳಿಸಿದೆ. ಉಡುಪಿಯಲ್ಲಿ ಅಕ್ಟೋಬರ್ ಹತ್ತರಂದು ಹಿಂದೂ ಸಮಾಜೋತ್ಸವ ಆಯೋಜನೆಗೊಂಡಿದ್ದು, ಹಿಂದೂ ಸಮಾಜೋತ್ಸವದ ಎಲ್ಲಾ ಬ್ಯಾನರ್ ಗಳನ್ನೂ ತೆರವುಗೊಳಿಸಲಾಗಿದೆ. ಉಡುಪಿ ನಗರ ಸುತ್ತಮುತ್ತ ಅಳವಡಿಸಿದ್ದ ಬ್ಯಾನರ್‍ಗಳ ತೆರವು ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ಎಸ್ಪಿ ಡಾ. ಅರುಣ್ ಅವರನ್ನು