ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಮತ್ತು ಬೈಂದೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಮೂಕಾಂಬಿಕಾ ಸಹಕಾರಿ ಸೇವಾ ಸಂಘ ಸೊಸೈಟಿ ದರೋಡೆ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಠಾಣಾ ಪೊಲೀಸರು ದ.ಕ ಜಿಲ್ಲೆಯ ಪುತ್ತೂರು ಬನ್ನೂರಿನ ನೌಶಾದ್ (ಹಾಲಿ ವಾಸ ಮಡಿಕೇರಿ ಜಿಲ್ಲೆಯ ಕುಶಾಲನಗರ) ಎಂಬಾತನನ್ನು
ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಸಭಾಧ್ಯಕ್ಷರು, ಸಚಿವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಪಮುಖ್ಯಮಂತ್ರಿ ಶ್ರೀ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆ.18 ಮತ್ತು 19 ರಂದು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು ಜಿಲ್ಲೆಯ ಅಂಗನವಾಡಿ ,ಪ್ರಾಥಮಿಕ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರಜೆ ಘೋಷಣೆ ಮಾಡಿದ್ದಾರೆ.ಮುಂದಿನ ಎರಡು ದಿನ ಅರಬ್ಬಿ
ಪಡುಬಿದ್ರಿ:ಮೊಹಮ್ಮದನ್ ಹೆಲ್ಸಿಂಗ್ ಹ್ಯಾಂಡ್ ದೀನ್ ಸ್ಟ್ರೀಟ್, ಪಡುಬಿದ್ರಿ ಇವರ ವತಿಯಿಂದ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆನ್ಲೈನ್ (Online) ವೀಡಿಯೊ ಭಾಷಣ ಸ್ಪರ್ಧೆ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭ ಸುಜ್ಲಾನ್ ಕಾಲೊನಿ ಸಭಾಂಗಣದಲ್ಲಿ 17 ರ ಭಾನುವಾರದಂದು ಸಂಜೆ ಜರುಗಿತು. ಮೊಹಮ್ಮದನ್ ಹೆಲ್ಪಿಂಗ್ ಹ್ಯಾಂಡ್ಸ್ ಅಧ್ಯಕ್ಷರಾದ ನಿಯಾಜ್ ಸ್ವಾಗತಿಸಿ ಮಾತನಾಡಿ, “ಮೊಹಮ್ಮದನ್ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆ ಸಮಾಜಮುಖಿ ಚಟುವಟಿಕೆಗಳಿಗೆ ಸದಾ ಬದ್ಧವಾಗಿದೆ.
ಪಡುಬಿದ್ರಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಭಾರತ ಬೃಹತ್ ಸಮಾವೇಶವನ್ನು ಪಡುಬಿದ್ರಿಯಲ್ಲಿ ಭವ್ಯವಾಗಿ ಹಮ್ಮಿಕೊಳ್ಳಲಾಯಿತು. ಈ ಸಮಾವೇಶಕ್ಕೆ ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ನೇತೃತ್ವ ವಹಿಸಿದ್ದರು. ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವಿಫ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮ್ಮದ್ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ತತ್ವ ಮತ್ತು ಮೌಲ್ಯಗಳನ್ನು ಜನರೊಳಗೆ ತಲುಪಿಸುವ ಅಗತ್ಯವನ್ನು
2024-25 ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಗೆ ಗರಿಷ್ಠ 8000 ವರೆಗೆ ಉಚಿತ ಸುಧಾರಿತ ಉಪಕರಣಗಳು ಕಾಪು ಕ್ಷೇತ್ರದ 67 ಫಲಾನುಭವಿಗಳಿಗೆ ಮಂಜೂರಾಗಿದ್ದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಕಾಪು ಶಾಸಕರ ಕಚೇರಿಯಲ್ಲಿ ಸಾಂಕೇತಿಕವಾಗಿ 9 ಫಲಾನುಭವಿಗಳಿಗೆ ವಿತರಿಸಿದರು.
ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ಪರಿಷತ್ ಸ್ಥಾನದಿಂದ ವಜಾಗೊಳಿಸಲು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ. ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಜಾಗೊಳಿಸಬೇಕೆಂದು ವಿಧಾನ ಪರಿಷತ್ತಿನ ಸಭಾಪತಿಯವರಿಗೆ ಮನವಿ ಸಲ್ಲಿಸಲಾಯಿತು.
ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 9 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸಮಿತಿಯುಲ್ಲಿ ಮಂಡಿಸಲಾಯಿತು. ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ
ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ವರಮಹಾಲಕ್ಷ್ಮೀ ಪೂಜೆಯುಶ್ರೀ ದುರ್ಗಾದೇವಿ ಮಂದಿರದಲ್ಲಿ ಜರುಗಿತು. ಶ್ರೀ ವರಲಕ್ಷ್ಮಿ ವ್ರತಾಚರಣೆ ಪ್ರಯುಕ್ತ ವಿಶೇಷ ಪೂಜೆಯು ಸುಮಂಗಲಿಯರಿಂದ ವಿಜ್ರಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಸರ್ವಸದಸ್ಯರು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು
ಮಣಿಪಾಲ: ವಿಶ್ವವಿದ್ಯಾಲಯವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಸ್ವಯಂಸೇವಕ ಸಂಸ್ಥೆಯ ವತಿಯಿಂದ ಹಸಿರು ಉಪಕ್ರಮ “ಸಸ್ಯಶ್ಯಾಮಲ”ವನ್ನು ಯಶಸ್ವಿಯಾಗಿ ಪ್ರಾರಂಭಿಸಿದರು. ಮಾಹೆ ಕ್ಯಾಂಪಸ್ನಲ್ಲಿ ನಡೆಯಲಿರುವ ೬ ನೇ ರಾಷ್ಟ್ರೀಯ ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಕುರಿತ ಸಮ್ಮೇಳನಕ್ಕೆ ಅರ್ಥಪೂರ್ಣ ಮುನ್ನುಡಿಯಾಗಿ ಕಾರ್ಯನಿರ್ವಹಿಸಿತು. ಈ ಕಾರ್ಯಕ್ರಮವು ಹೆಬ್ರಿ ಹೆದ್ದಾರಿಯಲ್ಲಿರುವ ಶಿವಪುರ ಗ್ರಾಮದಲ್ಲಿ 2ಕಿಲೋಮೀಟರ್ ರಸ್ತೆ ವಿಭಜಕಗಳ