ಯುವ ಜನಾಂಗ ಮತ್ತೆ ಕೃಷಿಯತ್ತ ಮುಖ ಮಾಡಿದೆ ಅನ್ನೋದಕ್ಕೆ ಈ ಸ್ಟೋರಿಯೇ ಸಾಕ್ಷಿ ಹಡಿಲು ಬಿದ್ದಿರುವ ಭೂಮಿಯನ್ನು ಮತ್ತೆ ಹಸನಾಗಿಸಲು ಇಲ್ಲೊಂದು ಯುವಕರ ಗುಂಪು ಮುಂದಾಗಿದೆ. ಹೀಗೆ..ಭತ್ತದ ಪೈರು ಹಿಡ್ಕೊಂಡು ಗದ್ದೆಗಿಳಿದ ಯುವಕರು, ಉಡುಪಿಯ ಮೂಡುಪೆರಂಪಳ್ಳಿ ಶೀಂಭ್ರಾ ಎಂಬಲ್ಲಿನ ಯುವಕರು.ತನ್ನೂರಲ್ಲಿ ಬೇಸಾಯನೇ ಮಾಡದೇ ಹಡಿಲು ಬಿದ್ದಿದ್ದ ಭೂಮಿಯನ್ನ ಕೃಷಿ ಮಾಡಲು
ಉಡುಪಿಯ ವಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮದಲ್ಲಿ ಚಿತ್ರನಟ ರಕ್ಷಿತ್ ಶೆಟ್ಟಿ ಭಾಗಿಯಾದರು. ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಪ್ರತಿಷ್ಠಾನದ ಸಂಯೋಜನೆಯಲ್ಲಿ ಕೃಷಿ ಕಾರ್ಯ ಆಯೋಜಿಸಲಾಗಿತ್ತು. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ವಾರಂಬಳ್ಳಿ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ನಟ ರಕ್ಷಿತ್ ಶೆಟ್ಟಿ, ಶಾಸಕ ರಘುಪತಿ ಭಟ್ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೂ ಮಾತೆಗೆ ಹಾಲನ್ನು ಅರ್ಪಿಸಿ
ಅಗ್ನಿ ಶಾಮಕ ದಳ ಹಾಗೂ ತುರ್ತು ಸೇವಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಮೂವರು ಸಿಬ್ಬಂದಿಗಳಿಗೆ ಕರ್ನಾಟಕ ಸರಕಾರದಿಂದ ನೀಡುವ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೀಡಿ ಗೌರವಿಸಿದ್ದಾರೆ. ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪದಕ ಪ್ರಧಾನ ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳ ಜಿಲ್ಲಾ ಮುಖ್ಯ ಅಧಿಕಾರಿ ಹೆಚ್ ಎಂ ವಸಂತ್ ಕುಮಾರ್, ಅಶ್ವಿನ್ ಸನಿಲ್ ಹಾಗೂ ಎಂ. ಕೇಶವ್ ಇವರಿಗೆ ಮುಖ್ಯಮಂತ್ರಿಗಳಿಂದ
ಉಡುಪಿಯ ಕರಾವಳಿ ಬೈಪಾಸ್ ಬಳಿ ಶಿವರಾಜ್ ಎನ್ನುವ ಎರಡುವರೆ ವರುಷದ ಮಗುವೊಂದನ್ನ ಅಪಹರಣ ಮಾಡಲಾಗಿತ್ತು.ಕಾರವಳಿ ಬೈಪಾಸ್ ಬಳಿಯ ಭಾರತಿ ಮತ್ತು ಅರುಣ್ ಎನ್ನುವವರ ಮಗುವನ್ನು ಪರಿಚಯದ ವ್ಯಕ್ತಿಯೇ ಅಪಹರಿಸಿದ್ದ. ಮಗುವಿಗೆ ಚಾಹಾ ಕುಡಿಸ್ತೇನೆ ಎಂದು ಕರೆದುಕೊಂಡು ಹೋಗಿದ್ದ ಬಾಗಲಕೋಟೆ ಮೂಲದ ಪರುಶರಾಮ ಎನ್ನುವ ವ್ಯಕ್ತಿ ವಾಪಸ್ಸು ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡ ನಗರ ಠಾಣಾ ಪೊಲೀಸರು ಕಾರ್ಯ
ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಸೀನಿಯರ್ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹಾಗೂ ಎಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ನಟೇಶ್ ಆರ್. ಅವರು ತಿಳಿಸಿದ್ದಾರೆ. ಅವರು
ರಜ್ಯ ಕಾಂಗ್ರೆಸ್ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ ನ್ಯಾಯ ಒದಗಿಸೋಣ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೊರೋನಾ ಕಾಲದಲ್ಲಿ ಜೀವ ಇದ್ದರೆ ಜೀವನ ಎಂದು ಹೇಳಿದರು. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ವಿಚಾರದ ಬಗ್ಗೆ
ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ… ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ಸ್ಟಾಲಿನ್ಗೆ ಪತ್ರ ಬರೆದಿರುವುದು ಸರಿಯಲ್ಲ. ಮೊದಲು ಟೆಂಡರ್ ಕರೆದು ಮೇಕೆದಾಟು ಡ್ಯಾಮ್ ಕಟ್ಟುವ ಕೆಲಸ ಮಾಡಿ. ಡ್ಯಾಮ್ ವಿಚಾರದಲ್ಲಿ ಏರುಪೇರು ಇದ್ದರೆ
ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು
ಉಡುಪಿ ; ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ಕಾನೂನಿನ ಪ್ರಕ್ರಿಯೆಗಳು ನಡೆದ ಬಳಿಕ, ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಅವರ, ಸಮಕ್ಷಮದಲ್ಲಿ ನಡೆಸಿದರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ, ಅಪರಿಚಿತ ಮಹಿಳೆಯ ಶವ, ಮತ್ತು ನಗರದ ಸಾರ್ವಜನಿಕ ಸ್ಥಳದಲ್ಲಿ ಮೃತಪಟ್ಟಿರುವ ಅಪರಿಚಿತ
ಕಾಪು: ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ ಕಿಲಿಂಜೆ ವಾರ್ಡ್ನಲ್ಲಿ ಕೊರೊನ ಬಂದು ಸೀಲ್ ಡೌನ್ ಅದ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ರೇಷನ್ ಕಿಟ್ ವಿತರಿಸಲಾಯಿತು. ಜಿಲ್ಲಾದ್ಯಂತ ಈ ವರೆಗೆ 54೦೦ ಕಿಟ್ಗಳನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಮಾತನಾಡಿ, ಈ ಸಮಯದಲ್ಲಿ ಕೊರೊನ ಪೀಡಿತರಿಗೆ ಫುಡ್ ಕಿಟ್ ನೀಡಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಬಡವರಿಗೆ ನೀಡುವ ಸೌಲಭ್ಯಗಳಿಗೆ