Home Posts tagged #udupi (Page 85)

ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ: ಹೆಜಮಾಡಿಯಲ್ಲಿ ಅದ್ಧೂರಿಯ ಸ್ವಾಗತ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲೆಯ ಗಡಿಭಾಗದ ಹೆಜಮಾಡಿಯಲ್ಲಿ ಸಾಂಪ್ರದಾಯಿಕವಾಗಿ ಮಹಿಳೆಯರು ಆರತಿ ಎತ್ತಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಭದ್ರತೆಯ ದೃಷ್ಠಿಯಿಂದ ಉಡುಪಿ ಜಿಲ್ಲಾ ಗಡಿಭಾಗ ಹೆಜಮಾಡಿ ಟೋಲ್ ಗೇಟ್ ಬಳಿಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಪೆÇಲೀಸರು

ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕ ಬಾವಿಯಲ್ಲಿ ಶವವಾಗಿ ಪತ್ತೆ

ಉಡುಪಿ: ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ, ಲೆಕ್ಕಪರಿಶೋಧಕನ ಶವವು, ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಅಗ್ನಿಶಾಮಕ ದಳದ ಸಹಾಯದಿಂದ ಕಳೇಬರವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಹೇಳಲಾಗುತ್ತಿದೆ. ಕಳೇಬರವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ನೆರವಾದರು.

ಕುಂದಾಪುರದ ನೆರೆಪೀಡಿತ ಪ್ರದೇಶಗಳಿಗೆ ದೋಣಿ ವ್ಯವಸ್ಥೆ..!

ಕುಂದಾಪುರದ ಬೈಂದೂರು ತಾಲೂಕು ನೆರೆ ಪೀಡಿತ ಪ್ರದೇಶಗಳಾದ ನಾಡ, ಮರವಂತೆ, ಬಡಾಕೆರೆ ಮತ್ತು ಹೇರೂರು ಗ್ರಾಮ ಪಂಚಾಯಿತಿಗಳಿಗೆ ದೋಣಿಯನ್ನು ಜಿಲ್ಲಾಡಳಿತದಿಂದ ಹಸ್ತಾಂತರಿಸಿದ್ರು. ಕುಂದಾಪುರದ ಬೈಂದೂರು ತಾಲೂಕಿನ ಪ್ರದೇಶದಲ್ಲಿ  5 ಕಡೆಗಳಲ್ಲಿ ಪ್ರಾಕೃತಿವಿಕೋಪದಿಂದ ಸಾಕಷ್ಟು ತೊಂದರೆ ಆಗಿದ್ದು, ಅಲ್ಲಿನ ಸಮಸ್ಯೆಗಳ ಕುರಿತು ವಿ೪ನ್ಯೂಸ್ ವಿಸ್ಕೃತವಾಗಿ ವರದಿ ಮಾಡಿತ್ತು. ಈ ವರದಿಗೆ ಎಚ್ಚೆತ್ತುಕೊಂಡು, ನೆರೆ ಪೀಡಿತ ಪ್ರದೇಶಗಳಾದ ನಾಡ, ಮರವಂತೆ, ಬಡಾಕೆರೆ ಮತ್ತು

ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ :ಉಡುಪಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ

ಉಡುಪಿಯ ಪೆರ್ಣಂಕಿಲದಲ್ಲಿ ಬೋನಿಗೆ ಬಿದ್ದ ಚಿರತೆ

ಪೆರ್ಣಂಕಿಲದಲ್ಲಿ ಗ್ರಾಮಸ್ಥರನ್ನು ಬಹು ದಿನಗಳಿಂದ ಕಾಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಳೆದ ರಾತ್ರಿ ಪೆರ್ಣಂಕಿಲದ ಗುಂಡುಪಾದೆ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯಲು ಗುಂಡುಪಾದೆಯ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು. ಕಳೆದ ರಾತ್ರಿ ಚಿರತೆ ಇದರೊಳಗೆ ಸೆರೆಯಾಗಿದೆ. ಇಂದು ಬೆಳಗ್ಗೆ

ವಿಶಾಲ ಗಾಣಿಗ ಕೊಲೆಗೆ ದುಬೈನಲ್ಲಿ ಸ್ಕೆಚ್:ಹಣದ ಪಾರ್ಸೆಲ್ ಕಳುಹಿಸಿ ಕೊಲೆ ಮಾಡಿಸಿದ ಪತಿ

ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಒಂದೇ ವಾರದಲ್ಲಿ ಬೇಧಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿಯ ಜೊತೆಯಲ್ಲಿದ್ದಾಗಲೇ ಪತಿ ರಾಮಕೃಷ್ಣ ವಿಶಾಲ ಗಾಣಿಗ ಹತ್ಯೆಗೆ ಸುಫಾರಿ ಕೊಟ್ಟಿದ್ದ. ಅಲ್ಲದೇ ಮನೆಗೆ ಹಣದ ಪಾರ್ಸೆಲ್ ಕಳುಹಿಸಿ ಪತ್ನಿಯನ್ನು ಕೊಂದು ಮುಗಿಸಿದ್ದಾನೆ. ಉಡುಪಿ ಜಿಲ್ಲೆಯ ಉಪ್ಪಿನಕೋಟೆಯಲ್ಲಿರುವ ಅಪಾರ್ಟ್‍ಮೆಂಟ್ ನಲ್ಲಿ ಜುಲೈ 12ರಂದು ಕೊಲೆಯಾಗಿದ್ದ ವಿಶಾಲ ಗಾಣಿಗ ಕೊಲೆಯನ್ನು ಪತಿಯೇ

ಉಡುಪಿಯಲ್ಲಿ ಕೃಷಿಯತ್ತ ಮುಖಮಾಡಿದ ಯುವ ಜನಾಂಗ

ಯುವ ಜನಾಂಗ ಮತ್ತೆ ಕೃಷಿಯತ್ತ ಮುಖ ಮಾಡಿದೆ ಅನ್ನೋದಕ್ಕೆ ಈ ಸ್ಟೋರಿಯೇ ಸಾಕ್ಷಿ ಹಡಿಲು ಬಿದ್ದಿರುವ ಭೂಮಿಯನ್ನು ಮತ್ತೆ ಹಸನಾಗಿಸಲು ಇಲ್ಲೊಂದು ಯುವಕರ ಗುಂಪು ಮುಂದಾಗಿದೆ. ಹೀಗೆ..ಭತ್ತದ ಪೈರು ಹಿಡ್ಕೊಂಡು ಗದ್ದೆಗಿಳಿದ ಯುವಕರು, ಉಡುಪಿಯ ಮೂಡುಪೆರಂಪಳ್ಳಿ ಶೀಂಭ್ರಾ ಎಂಬಲ್ಲಿನ ಯುವಕರು.ತನ್ನೂರಲ್ಲಿ ಬೇಸಾಯನೇ ಮಾಡದೇ ಹಡಿಲು ಬಿದ್ದಿದ್ದ ಭೂಮಿಯನ್ನ ಕೃಷಿ ಮಾಡಲು ಮುಂದಾಗಿರುವ ವಿದ್ಯಾವಂತ ಯುವಕರು. ಮೂಡು ಪೆರಂಪಳ್ಳಿಯ ಹಲವು ಎಕ್ರೆ ಕೃಷಿ ಭೂಮಿ ಬೇಸಾಯನೇ ಮಾಡದೇ

ಗದ್ದೆಗಿಳಿದ ಚಿತ್ರನಟ ರಕ್ಷಿತ್ ಶೆಟ್ಟಿ

ಉಡುಪಿಯ ವಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮದಲ್ಲಿ ಚಿತ್ರನಟ ರಕ್ಷಿತ್ ಶೆಟ್ಟಿ ಭಾಗಿಯಾದರು. ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಪ್ರತಿಷ್ಠಾನದ ಸಂಯೋಜನೆಯಲ್ಲಿ ಕೃಷಿ ಕಾರ್ಯ ಆಯೋಜಿಸಲಾಗಿತ್ತು. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ವಾರಂಬಳ್ಳಿ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ನಟ ರಕ್ಷಿತ್ ಶೆಟ್ಟಿ, ಶಾಸಕ ರಘುಪತಿ ಭಟ್ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೂ ಮಾತೆಗೆ ಹಾಲನ್ನು ಅರ್ಪಿಸಿ

ಉಡುಪಿ ಜಿಲ್ಲೆಯ ಮೂವರು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪ್ರದಾನ

ಅಗ್ನಿ ಶಾಮಕ ದಳ ಹಾಗೂ ತುರ್ತು ಸೇವಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಮೂವರು ಸಿಬ್ಬಂದಿಗಳಿಗೆ ಕರ್ನಾಟಕ ಸರಕಾರದಿಂದ ನೀಡುವ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೀಡಿ ಗೌರವಿಸಿದ್ದಾರೆ.  ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪದಕ‌ ಪ್ರಧಾನ ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳ ಜಿಲ್ಲಾ ಮುಖ್ಯ ಅಧಿಕಾರಿ ಹೆಚ್ ಎಂ ವಸಂತ್ ಕುಮಾರ್, ಅಶ್ವಿನ್ ಸನಿಲ್ ಹಾಗೂ ಎಂ. ಕೇಶವ್ ಇವರಿಗೆ ಮುಖ್ಯಮಂತ್ರಿಗಳಿಂದ

ಉಡುಪಿಯಲ್ಲಿ ಮಗು ಅಪಹರಣ ಪ್ರಕರಣ: ಆರೋಪಿಯ ಬಂಧನ

ಉಡುಪಿಯ ಕರಾವಳಿ ಬೈಪಾಸ್ ಬಳಿ ಶಿವರಾಜ್ ಎನ್ನುವ ಎರಡುವರೆ ವರುಷದ ಮಗುವೊಂದನ್ನ ಅಪಹರಣ ಮಾಡಲಾಗಿತ್ತು.ಕಾರವಳಿ ಬೈಪಾಸ್ ಬಳಿಯ ಭಾರತಿ ಮತ್ತು ಅರುಣ್ ಎನ್ನುವವರ ಮಗುವನ್ನು ಪರಿಚಯದ ವ್ಯಕ್ತಿಯೇ ಅಪಹರಿಸಿದ್ದ. ಮಗುವಿಗೆ ಚಾಹಾ ಕುಡಿಸ್ತೇನೆ ಎಂದು ಕರೆದುಕೊಂಡು ಹೋಗಿದ್ದ ಬಾಗಲಕೋಟೆ ಮೂಲದ ಪರುಶರಾಮ ಎನ್ನುವ ವ್ಯಕ್ತಿ ವಾಪಸ್ಸು ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡ ನಗರ ಠಾಣಾ ಪೊಲೀಸರು ಕಾರ್ಯ