Home Posts tagged #udupi (Page 86)

ಗ್ರಂಥಾಲಯದಲ್ಲೇ ತ್ಯಾಜ್ಯಗಳ ರಾಶಿ..

ಗ್ರಾಮದಲ್ಲಿ ಸಂಗ್ರಹಿಸಿದ ತ್ಯಾಜ್ಯಗಳನ್ನ ವಿಲೇವಾರಿ ಮಾಡೋ ಬದಲು ಗ್ರಾಮ ಪಂಚಾಯಿತಿನ ಗ್ರಂಥಾಲಯದಲ್ಲಿ ತುಂಬಿಸಿಟ್ಟಿದ್ದಾರೆ.ಇಲ್ಲಿ ಗ್ರಾಮಸ್ಥರು ಪುಸ್ತಕಗಳನ್ನು ದಿನಪತ್ರಿಕೆಗಳನ್ನ ಓದಬೇಕಾದರೆ ಈ ಕಸದ ರಾಶಿಗಳ ಮಧ್ಯೆ ಹಾಕಿರುವ ಟೇಬಲ್ ನಲ್ಲಿ ಮೂಗುಮುಚ್ಚಿಕೊಂಡು ಓದಬೇಕಾದ ಪರಿಸ್ಥಿತಿ ನಿರ್ಮಿಸಿದೆ. ಇದು ಅಂಬಲಪಾಡಿ ಗ್ರಾಮ ಪಂಚಯತ್ ವ್ಯಾಪ್ತಿಯ ಅವ್ಯವಸ್ಥೆ.

ತೆಂಕನಿಡಿಯೂರು ಕಾಲೇಜು : ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ

ಉಡುಪಿ : ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ವಿಫುಲ ಅವಕಾಶವಿದ್ದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಒಳ್ಳೆಯ ಉದ್ಯೋಗವನ್ನು ಪಡೆಯಲು ಕೌಶಲ್ಯಗಳು ಅತಿ ಅಗತ್ಯ. ಅದರಲ್ಲೂ ಸಂವಹನ ಕೌಶಲ್ಯ ಮತ್ತು ಭಾಷಾ ಕೌಶಲ್ಯ ಬಹು ಮುಖ್ಯ ಎಂದು ಉಡುಪಿಯ ಪ್ರೈಮ್ ಸಂಸ್ಥೆಯ ಸ್ಥಾಪಕರಾದ ಶ್ರೀ ರತ್ನಕುಮಾರ್ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನಲ್ಲಿ ನಡೆದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮವನ್ನು

ಡೆಹ್ರಾಡೂನ್‌ನಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ಕುಂದಾಪುರದ ಹನೀಶ್ ಕುಮಾರ್‌ಗೆ ಬೆಳ್ಳಿ ಪದಕ

ಪಿಯೊನಿಕ್ಸ್ ಅಕಾಡೆಮಿ ಇಂಡಿಯಾ ಕುಂದಾಪುರದ ಸದಸ್ಯ ಹನೀಶ್ ಕುಮಾರ್ ರವರಿಗೆ ಡೆಹ್ರಾಡೂನ್‌ನಲ್ಲಿ ನಡೆದ ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೀನಿಯರ್ ಐವತ್ತು ಕೆ.ಜಿ ವಿಭಾಗದಲ್ಲಿ ಬೆಳ್ಳಿ ಹಾಗೂ ಇಪ್ಪತ್ತೊಂದು ವರ್ಷ ಒಳಗಿನ ವಯೋಮಿತಿಯ ವಿಭಾಗದಲ್ಲಿ ಬೆಳ್ಳಿ ಪದಕ ಲಭಿಸಿದೆ. ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ಪರವಾಗಿ ಕುಂದಾಪುರದ ಆರು ಮಂದಿ ಕರಾಟೆ ಪಟುಗಳು ಪ್ರತಿನಿಧಿಸಿದ್ದರು. ಹನೀಶ್ ಕುಮಾರ್ ರವರು ಉಪ್ಪುಂದದ

ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ಬಗೆಗೆ ಕಾರ್ಯಾಗಾರ

ಪರಿಸರಸ್ನೇಹಿ ಮತ್ತು ರೈತಸ್ನೇಹಿ ಸಂಸ್ಥೆ ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ( ಎಂ.ಸಿ.ಎಲ್) ಘಟಕವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸುವ ಉದ್ದೇಶದಿಂದ ಸ್ವರ್ಣಮಂದಿರದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ಪ್ರಕೃತಿ ವಿರುದ್ಧವಾಗಿ ಬದುಕುದನ್ನು ನಾವು ನಿಲ್ಲಿಸಬೇಕು. ಪ್ರಕೃತಿಯನ್ನು ಆರಾಧಿಸುವ ಜೊತೆಗೆ

ಅದಮಾರು ಪದವಿ ಕಾಲೇಜಿಗೆ ಸಿಎಂ ಅವರಿಂದ ಶಿಲಾನ್ಯಾಸ

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರಿನಲ್ಲಿ ಮಾತೃ ಸಂಸ್ಥೆಯ ಅಧ್ಯಕ್ಷ ವಿಶ್ವಪ್ರೀಯ ತೀರ್ಥರ ಸಮಕ್ಷಮದಲ್ಲಿ ನೆರವೇರಿಸಿದ್ದಾರೆ. ಆರಂಭದಲ್ಲಿ ಅದ್ಧೂರಿಯಾಗಿ ಮುಖ್ಯಮಂತ್ರಿಗಳನ್ನು ಶಿಲಾನ್ಯಾಸ ಪ್ರದೇಶಕ್ಕೆ ಬರಮಾಡಿಕೊಳ್ಳಲಾಯಿತು. ಶಿಲಾನ್ಯಾಸ ಸಹಿತ ನಾಮಫಲಕ ಅನಾವರಣದ ಬಳಿಕ ವಿದ್ಯಾಸಂಸ್ಥೆಯ ರಾಜ್ ಕಿರಣ್ ರಂಗಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ರಾಜ್ಯ ಸಚಿವರುಗಳಾದ ಕೋಟ

ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ

ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾ ಹಾಗೂ ಯುವ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ ಇಂಧನ ಸಚಿವ ವಿ.ಸುನೀಲ್ ಕುಮಾರ್ ಉಪಸ್ಥಿಯಲ್ಲಿ ಸಾಂಗವಾಗಿ ನೆರವೇರಿತು. ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಆಜಾದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಮಾಜಿ ಸೈನಿಕ ಶ್ರೀ ಗಣಪತಿ ಗೌಡ ಯೆಳ್ ಜಿತ್ ಇವರಿಗೆ ಯುವ ಮೋರ್ಚಾದ ವತಿಯಿಂದ ಮೂಕಾಂಬಿಕಾ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶರತ್

ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್‌ದಾರರ ಸಭೆ

ದಕ್ಷಿಣ ಕನ್ನಡ ಮತ್ತು ಉಡುಪಿ ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್ದಾರರ ಸಂಘ ರಿಜಿಸ್ಟರ್ಡ್ ಮಂಗಳೂರು ವತಿಯಿಂದ ತಮಿಳುನಾಡು ರಿಗ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಇಂದು ಮಂಗಳೂರಿನಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಡ್ರಿಲ್ಲಿಂಗ್ ದರ ಹೆಚ್ಚಳದ ಕುರಿತಾಗಿ ಚರ್ಚಿಸಿ, ಹೆಚ್ಚಾಗಿರುವ ಇಂಧನ ಬೆಲೆಗೆ ಅನುಗುಣವಾಗಿ ಡ್ರಿಲ್ಲಿಂಗ್ ದರವನ್ನು ನಿಗಧಿಪಡಿಲಾಗಿದೆ. ಒಂದು ಅಡಿ ಡ್ರಿಲ್ಲಿಂಗ್‌ಗೆ ಈ ಮೊದಲು 115 ರೂಪಾಯಿ ಇತ್ತು, ಈಗ ಈ ದರ 130 ಆಗಿದ್ದು, ಇದ್ರ ಜೊತೆಗೆ

ಗೋ ಹತ್ಯೆ, ಗೋ ಕಳ್ಳತನದಲ್ಲಿ ಭಾಗಿಯಾದ ಆರೋಪ : ಉಡುಪಿ ಎಸ್ಪಿ ವಿಷ್ಣುವರ್ಧನ್ ಎಚ್ಚರಿಕೆ

ಠಾಣೆಯಲ್ಲಿ ಇದುವರೆಗೆ ಗೋ ಕಳ್ಳತನ, ಗೋ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಗಳನ್ನು ಹಾಗೂ ದನದ ದಲ್ಲಾಳಿ ಮಾಡುವವರನ್ನು ಮತ್ತು ದನಸಾಗಾಟ ಮಾಡುವ ವಾಹನಚಾಲಕರ ಪರೇಡ್ ನಡೆಸಿದರು. ಇವರುಗಳು ಮುಂದಕ್ಕೆ ಯಾವುದೇ ಗೋ ಕಳ್ಳತನ ಗೋ ಹತ್ಯೆ ಪ್ರಕರಣದಲ್ಲಿ ಬಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣು ವರ್ದನ್ ರವರು ಎಚ್ಚರಿಕೆಯನ್ನು ನೀಡಿದ್ದಾರೆ. ಸಭೆಯಲ್ಲಿ ಪೊಲೀಸ್ ಉಪಾದೀಕ್ಷಕರಾದ ಎಸ್ ವಿಜಯಪ್ರಸಾದ್, ಕಾರ್ಕಳ ವೃತ್ತ

ಗಿರಿಜಾ ಹೆಲ್ತ್‍ ಕೇರ್ & ಸರ್ಜಿಕಲ್ ಸಂಸ್ಥೆಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ

ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್‍ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿಯ ರಸಾಯನಶಾಸ್ತ್ರಜ್ಞ ಮತ್ತು ಔಷಧ ತಜ್ಞರ ಸಂಘದ ಅಧ್ಯಕ್ಷರಾದ ವಿ.ಜಿ. ಶೆಟ್ಟಿ ಅವರು 2012ರಿಂದ ವಿಶ್ವ ಔಷಧ ತಜ್ಞರ ದಿನವನ್ನಾಗಿ ಆಚರಿಸಲಾಗುತ್ತಿದೆ. ಉಡುಪಿಯ ಗಿರಿಜಾ ಹೆಲ್ತ್ ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ಆಚರಿಸಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಔಷಧ ತಜ್ಞರ

ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಸ್ಕೀಂಮ್ ನೌಕರರ ಅಖಿಲ ಭಾರತ ಮುಷ್ಕರ ಭಾಗವಾಗಿ ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಿದರು. ಅಕ್ಷರ ದಾಸೋಹ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನ ರಾಜ್ಯ ಹಾಗೂ ಕೇಂದ್ರ ಸರಕಾರ ಈಡೇರಿಸುವಂತೆ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಯವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ