Home Posts tagged #udupi (Page 9)

ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ “ಆಳ್ವಾಸ್ *ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೂಡುಬಿದಿರೆ ವತಿಯಿಂದ ಆಗಸ್ಟ್ 01 ಮತ್ತು 02 ತಾರೀಖಿನಂದು ಮೂಡುಬಿದಿರೆವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಇಂದು ದಿನಾಂಕ 22-07-2025 ರಂದು ಹಿಂದೂ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ “ಉದ್ಯೋಗ ಮಾಹಿತಿ ಶಿಬಿರ”

ಕನ್ನಡ ಜಾನಪದ ಪರಿಷತ್ ಉಡುಪಿ ಮತ್ತು ಕುಂದಾಪುರ ಘಟಕದ ವತಿಯಿಂದ “ವಿಕಾಸಕ್ಕಾಗಿ ಜಾನಪದ” ಕಾರ್ಯಕ್ರಮ

“ಹಳ್ಳಿಯ ಶ್ರಮದ ಬದುಕು ಜಾನಪದ ಸಾಹಿತ್ಯದ ಮೂಲ. ಜೀವನಾನುಭವದ ವಿಶ್ವವಿದ್ಯಾನಿಲಯ. ಇಲ್ಲಿ ಬದುಕಿನ ಮೂಲ ಶಿಕ್ಷಣದ ಪಾಠವನ್ನು ಒಳಗೊಂಡ, ಅರಿವನ್ನು ವಿಸ್ತರಿಸುವ ಜೀವನಾನುಭವದ ಅಮೃತವಿದೆ. ನೋವು ನಲಿವುಗಳನ್ನು ಒಳಗೊಂಡಿರುವ ಜನಪದ ನಮ್ಮೆಲ್ಲರ ಬದುಕಿಗೆ ಹತ್ತಿರವಾದ ಶ್ರೀಮಂತ ಸಮೃದ್ಧ ಸಾಹಿತ್ಯ , ಈ ಜನಪದ ಸಾಹಿತ್ಯವನ್ನು ಜತನದಿಂದ ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜನಪದ ಪರಿಷತ್ ಉಡುಪಿ ಘಟಕ ಅಧ್ಯಕ್ಷರು ಡಾ.ಗಣೇಶ್ ಗಂಗೊಳ್ಳಿ ಹೇಳಿದರು. ಇವರು

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್‌ ನ CSR ನಿಧಿಯಿಂದ ಹೈಟೆಕ್ ಶೌಚಾಲಯ ನಿರ್ಮಾಣ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್‌ ನ CSR ನಿಧಿಯಿಂದ ಶೌಚಾಲಯ ಉದ್ಘಾಟನೆ ಕಾರ್ಯಕ್ರಮ ಶಾಲಾ ವಠಾರದಲ್ಲಿ ನಡೆಯಿತು. ಸತೀಶ್ ಎಮ್ ನಾಯಕ್ ನೂತನ ಶೌಚಾಲಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್‌ ನ CSR ನಿಧಿಯಿಂದ ಶೌಚಾಲಯ 12 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯಾಗಿ ನಿರ್ಮಾಣವಾಗಿದೆ ಇದರ ಮುಖ್ಯ ಉದ್ದೇಶ ಶಾಲೆಯ ಪರಿಸರವನ್ನು ಸ್ವಚ್ಛ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು

ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವದಲ್ಲಿ”ಸ್ವಚ್ಛ ಮರವಂತೆ-ಸುಂದರ ಮರವಂತೆ ” ಅಭಿಯಾನ

ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವ ದಲ್ಲಿ”ಸ್ವಚ್ಛ ಮರವಂತೆ-ಸುಂದರ ಮರವಂತೆ ” ಅಭಿಯಾನ ಮರವಂತೆ ಗ್ರಾಮ ಪಂಚಾಯತ್ ವಠಾರದಲ್ಲಿ ಚಾಲನೆಯನ್ನು ನೀಡಲಾಯಿತು. ಬೈಂದೂರು ಕ್ಷೇತ್ರದ ಶಾಸಕರು ಗುರುರಾಜ್ ಗಂಟೆಹೊಳೆ ಯವರು ಸ್ವಚ್ಛತೆ ಅರಿವಿನ ಬಗ್ಗೆ ಕರಪತ್ರ ಬಿಡುಗಡೆ ಮಾಡುದರ ಮೂಲಕ ಚಾಲನೆ ನೀಡಿ ಮಾತನಾಡಿ ಸ್ವಚ್ಛತೆ ದೃಷ್ಟಿಯಿಂದ ಮರವಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ

ಜು.22ರಂದು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಜನ್ಮ ವರ್ಧಂತ್ಯುತ್ಸವ

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವವಾಸು ಸಂವತ್ಸರದ ೨೧ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಜಗದ್ಗುರುಗಳ ಜನ್ಮ ವರ್ಧಂತ್ಯುತ್ಸವ ಜುಲೈ ೨೨ರಂದು ನಡೆಯಲಿದ್ದು, ವಿದ್ಯಾರ್ಥಿ ಅಭಿನಂದನೆ ಜುಲೈ ೨೭ರಂದು ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆಯಲಿದೆ.ಪಡುಕುತ್ಯಾರು ಚಾತುರ್ಮಾಸ್ಯ ವೃತ ನಿರ್ವಹಣಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ವಿ.

ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮಣಿಪಾಲ ಕಸ್ತುರ್ಬಾ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ|ಶ್ವೇತ ಸಿನ್ಹರವರು ಮಾತನಾಡಿ ರೋಗಿಯ ರಕ್ಷಣೆಯಲ್ಲಿ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ಪಾತ್ರ ಮಹತ್ತರವಾಗಿದೆ ಎಂದರು. ಇನ್ನೊರ್ವ ಅತಿಥಿ ಉಡುಪಿ ಜಿಲ್ಲಾ ಆಸ್ಪತ್ರೆಯ ಅರಿವಳಿಕೆ

ಮಾಧವ ಕೃಪಾ ಶಾಲೆ ಮತ್ತು ಶಾರದಾ ರೆಸಿಡೆನ್ಶಿಯಲ್ ಶಾಲೆಯಲ್ಲಿ ಯೋಗ ಸಮಾವೇಶ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್‌ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ ಶಾಲೆ (ಎಂ ಕೆ ಎಸ್), ಮಣಿಪಾಲ ಮತ್ತು ಶಾರದಾ ರೆಸಿಡೆನ್ಷಿಯಲ್ ಶಾಲೆ (ಎಸ್ ಆರ್ ಎಸ್), ಕುಂಜಿಬೆಟ್ಟು, ಉಡುಪಿ ಇದರ ಸಹಯೋಗದಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ರ ಭಾಗವಾಗಿ ಯೋಗ ಸಮಾವೇಶ ಎಂಬ ಸಮಗ್ರ ಕಾರ್ಯಕ್ರವನ್ನು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಭಾರತ ಸರ್ಕಾರದ

ಬೈಂದೂರು ರೋಟರಿ ಕ್ಲಬ್: ನೂತನ ಪದಾಧಿಕಾರಿಗಳ ಪದಪ್ರದಾನ

ಬೈಂದೂರು: ರೋಟರಿ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಸದಾನಂದ ಚಾತ್ರ ಹೇಳಿದರು. ಅವರು ಬುಧವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ ೨೦೨೫-೨೬ನೇ ಸಾಲಿನ ಪದಪ್ರದಾನ ಸಮಾರಂಭದಲ್ಲಿ ಬೈಂದೂರು ರೋಟರಿ ಕ್ಲಬ್ ನ

ತೋಕೂರು: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, : ಜೀರ್ಣೋದ್ಧಾರ ಸಮಿತಿ ರಚನೆ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, ತೋಕೂರು ,ಇದರ ಜೀರ್ಣೋದ್ಧಾರ ಸಮಿತಿಯ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಹರಿಪಾದೆಯವರ ಅಧ್ಯಕ್ಷತೆಯಲ್ಲಿ ಮತ್ತು ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಶಾಂತಾ ಎ ಕರ್ಕೇರ ಹಾಗೂ ಯುವ ವೇದಿಕೆಯ ಅಧ್ಯಕ್ಷರಾದ ಪವನ್ ಕುಮಾರ್ ರವರ ಉಪಸ್ಥಿತಿಯಲ್ಲಿ ಹಾಗೂ ಸಂಘದ ಸದಸ್ಯರ ಸಮಕ್ಷಮದಲ್ಲಿ ನೆರವೇರಿಸಲಾಯಿತು. ನೂತನ

ನೇತ್ರ ಜ್ಯೋತಿ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ, ಆಚರಣೆ

ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ವೈದ್ಯರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಅರೋಗ್ಯ ಅಧಿಕಾರಿಗಳಾದ ಡಾಕ್ಟರ್ ಬಸವರಾಜ್ ಹುಬ್ಬಳ್ಳಿಯವರು ಮಾತನಾಡಿ ಅರೋಗ್ಯ ಕ್ಷೇತ್ರದಲ್ಲಿ ತಮ್ಮ ಸೇವೆಗಳನ್ನು ನಿರಂತರವಾಗಿ ನೀಡುತಿರುವ ವೈದ್ಯರಿಗೆ ಗೌರವಿಸುತಿರುವುದು ಸಂತೋಷದ ವಿಷಯ ಎಂದರು. ಇನ್ನೊರ್ವ ಮುಖ್ಯ ಅತಿಥಿಯಾಗಿ ಬಂದಿರುವ ಖ್ಯಾತ ವೈದ್ಯರೂ ಹೈ ಟೆಕ್ ಹಾಸ್ಪಿಟಲ್