Home Posts tagged #ujire

ಜು.6: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ‘ಸಮ್ಯಗ್ದರ್ಶನ’ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ

ಎಸ್.ಡಿ.ಎಂ ಕಾಲೇಜಿನ ಸಾಧಕರಿಗೆ ಸನ್ಮಾನದ ಗರಿ

ಎಸ್.ಡಿ.ಎಮ್ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ನಿವೃತ್ತ ಸಿಬ್ಬಂದಿ ಸಾಧಕ ಭೋಧಕರು ಮತ್ತು ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಧರ್ಮಸ್ಥಳದ ಧರ್ಮಧಿಕಾರಿಗಳೂ ಆದ ಡಾ. ಡಿ. ವೀರೆಂದ್ರ ಹೆಗಡೆ ಸನ್ಮಾನಿಸಿದರು. ಇತ್ತೀಚೆಗೆ ನಿವೃತ್ತರಾದ ವಿಶ್ರಾಂತ ಪ್ರಾಂಶುಪಾಲರಾಧ ಡಾ. ಸತೀಶ್ಚಂದ್ರ ಎಸ್, ಡಾ. ಉದಯ ಚಂದ್ರ ಪಿ, ಡಾ. ಜಯಕುಮಾರ್ ಶೆಟ್ಟಿ, ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ವಿ. ನಾಗರಾಜಪ್ಪ, ಪ್ರೊ. ಅಜಯ್ ಕೊಂಬ್ರಬೈಲು, ಡಾ. ಶಂಕರ್ ನಾರಾಯಣ, ಡಾ. ಬಿ.ಪಿ

ಉಜಿರೆಯ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗದಿಂದ ಶೈಕ್ಷಣಿಕ ಅಧ್ಯಯನ ಪ್ರವಾಸ 

ಉಜಿರೆಯ‌ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗವು  ಕುಪ್ಪಳಿಗೆ ವಿದ್ಯಾರ್ಥಿಗಳಿಗಾಗಿ ಎರಡು ದಿನದ ಶೈಕ್ಷಣಿಕ  ಅಧ್ಯಯನ ಪ್ರವಾಸವನ್ನು ಆಯೋಜಿಸಿತ್ತು.ರಾಷ್ಟ್ರಕವಿ ಕುವೆಂಪು ಅವರ ಕುರಿತು ವಿದ್ಯಾರ್ಥಿಗಳಲ್ಲಿ ಮಾಹಿತಿ ಮತ್ತು ಆಸಕ್ತಿ ಮೂಡಿಸುವ ದೃಷ್ಟಿಯಿಂದ ಕುವೆಂಪು ಅವರ ಜನ್ಮಸ್ಥಳವಾದ ಕುಪ್ಪಳಿಗೆ ಅಧ್ಯಯನ ಪ್ರವಾಸ ಮಾಡಲಾಯಿತು.  ಈ ಸಂದರ್ಭದಲ್ಲಿ ಕುವೆಂಪು ಅವರು ವಾಸವಾಗಿದ್ದ ಕವಿಮನೆ, ಕವಿಶೈಲದ ಜೊತೆಯಲ್ಲಿ ಕುವೆಂಪು ಅವರ ಸಾಹಿತ್ಯ ರಚನೆಗೆ ಪ್ರೇರಣೆ ನೀಡಿದ ನವಿಲು

ಎಸ್.ಡಿ.ಎಂ ಬಿ.ವೋಕ್‌ನಿಂದ ‘ಸೀನ್ ಟು ಸ್ಕ್ರೀನ್’ ಸಿನಿಮಾ ಕಾರ್ಯಾಗಾರ

ಉಜಿರೆ : ಸಿನಿಮಾದ ಪ್ರಾಯೋಗಿಕಜ್ಞಾನ ವಿದ್ಯಾರ್ಥಿಗಳ ಬೌದ್ಧಿಕ ಸಂಪತ್ತನ್ನು ವೃದ್ಧಿಸುತ್ತದೆ ಎಂದು ಖ್ಯಾತ ಚಿತ್ರಕಥೆ ಬರಹಗಾರ ರಾಷ್ಟ್ರ ಪ್ರಶಸ್ತಿ ವಿಜೇತ ಶ್ರೀನಿಧಿ ಡಿ.ಎಸ್. ಅಭಿಪ್ರಾಯಪಟ್ಟರು. ಶ್ರೀ.ಧ.ಮ ಸ್ನಾತಕೋತ್ತರ ಕಾಲೇಜಿನ ಬಿವೋಕ್ ‌ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ ಸಿದ್ಧವನ ಗುರುಕುಲದ ಅಮೃತ ಸಿದ್ಧಿ ಸಭಾಂಗಣದಲ್ಲಿಆಯೋಜಿಸಲಾದ ನಾಲ್ಕು ದಿನಗಳ ಚಲನಚಿತ್ರ ನಿರ್ಮಾಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾಕ್ಕೆ

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಮಕ್ಕಳ ಹಕ್ಕುಗಳ ಕಾರ್ಯಾಗಾರ

ಉಜಿರೆ : ಸರ್ವತೋಮುಖ ಬೆಳವಣ ಗೆಗೆ ಪೂರಕವಾಗುವ ಮಕ್ಕಳ ಹಕ್ಕುಗಳ ಕುರಿತ ಅರಿವು ವ್ಯಾಪಕವಾಗಬೇಕು ಎಂದು ಟೋಕಿಯೊದ ಪ್ರೆಸ್ ಆಲ್ಟರ್ನೇಟಿವ್ ಪತ್ರಿಕೆಯ ಸಲಹೆಗಾರ್ತಿ ಮನೋರಮ ಭಟ್ ಜಿ.ವಿ ಅಭಿಪ್ರಾಯಪಟ್ಟರು. ಎಸ್ .ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಮಕ್ಕಳ ಹಕ್ಕುಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಮಕ್ಕಳು ಸಬಲರಾಗಬೇಕಾದರೆ ಅವರ ಕುಟುಂಬ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಎಲ್ಲ

ಮನೋರಂಜನಾ ಕ್ಷೇತ್ರದಲ್ಲಿ ಬೆಳೆಯಲು ವಿಪುಲ ಅವಕಾಶಗಳಿವೆ: ಚರಿಷ್ಮಾ ಚೋಂದಮ್ಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ “ಮನೋರಂಜನೆ ಮಾಧ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶಗಳು” ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಫ್ರೀಲಾನ್ಸ್ ಕಂಟೆಂಟ್ ರೈಟರ್ ಹಾಗೂ ಎಸ್‌ಡಿಎಂಇ ಸೊಸೈಟಿಯ ಸೋಶಿಯಲ್ ಮೀಡಿಯಾ ಹೆಡ್ ಚರಿಷ್ಮಾ ಚೋಂದಮ್ಮ, ಇಂದಿನ ಡಿಜಿಟಲ್ ಯುಗದಲ್ಲಿ ಮಾಧ್ಯಮ

ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ – ‘ಎಸ್.ಡಿ.ಎಂ. ನೆನಪಿನಂಗಳ’

ಉಜಿರೆ: ಜ್ಞಾನ, ಧನಾತ್ಮಕ ಮನೋಧೋರಣೆ ಹಾಗೂ ಕೌಶಲದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮೇ 31ರಂದು ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) ‘ಎಸ್.ಡಿ.ಎಂ. ನೆನಪಿನಂಗಳ’ದ ನಾಲ್ಕನೆಯ ಕಂತಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಹಿತ್ಯಕ ಅನುಸಂಧಾನದ ಸಾಮಥ್ರ್ಯ ರೂಢಿಯಾಗಲಿ: ಪ್ರೊ.ಟಿ.ಪಿ.ಅಶೋಕ

ಉಜಿರೆ : ಸಾಹಿತ್ಯದಲ್ಲಿ ಬಳಕೆಯಾಗುವ ಭಾಷೆ ಸಂವಹಿಸುವ ವಿವಿಧ ಬಗೆಯ ಅರ್ಥವಿನ್ಯಾಸಗಳೊಂದಿಗೆ ಅನುಸಂಧಾನ ನಡೆಸುವ ಸಾಮಥ್ರ್ಯ ರೂಢಿಸಿಕೊಳ್ಳಬೇಕು ಎಂದು ವಿಮರ್ಶಕ ಪ್ರೋ. ಟಿ.ಪಿ.ಅಶೋಕ ಅಭಿಪ್ರಾಯಪಟ್ಟರು. ಉಜಿರೆ ಎಸ್. ಡಿ. ಎಂ ಸ್ವಾಯಕ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿತ 25ನೆ ಸಾಹಿತ್ಯ ಶಿಬಿರ ರಜತ ಸಂಭ್ರಮದ ಕಲಾನುಸಂದಾನ ಶಿಬಿರದ ಮೊದಲನೇ ಗೋಷ್ಟಿ ಕಾವ್ಯಾನುಸಂದಾನದಲ್ಲಿ ಅವರು ಮಾತನಾಡಿದರು.

‘ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ’

ಉಜಿರೆ: ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ ಎಂದು ಎಸ್.ಡಿ.ಎಂ ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ಪ್ರೊ. ಶೈಲಜಾ ಅಭಿಪ್ರಾಯಪಟ್ಟರು.ಎಸ್.ಡಿ.ಎಂ. ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗವು ಗುರುವಾರ ‘ವಿಶ್ವ ದೂರ ಸಂಪರ್ಕ ದಿನ ಆಯೋಜಿಸಿದ್ದ ಗುರುತ್ವ-2023 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ದೂರ ಸಂಪರ್ಕ ಸೌಲಭ್ಯದಿಂದಾಗಿ ವಿಶ್ವದ ಗಾತ್ರ ಸಣ್ಣದಾಗಿದೆ. ಪ್ರಪಂಚದ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ತಕ್ಷಣ ವಿಶ್ವದಾದ್ಯಂತ ಪಸರಿಸುವ

ವಿಜ್ಞಾನ ಸ್ಪರ್ಧೆಯಲ್ಲಿ ಎಸ್.ಡಿ. ಎಂ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರಿನ ಸಂತ  ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದೇ ಶುಕ್ರವಾರದಂದು ಸಂತ ಅಲೋಶಿಯಸ್ ಕಾಲೇಜಿನ ವಾರ್ಷಿಕ ಉತ್ಸವದ ಅಂಗವಾಗಿ ಇಂಪ್ರಿಂಟ್ಸ್ ಎಂಬ ಅಂತರ್ ಕಾಲೇಜು ವಿಜ್ಞಾನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ ವಿಭಾಗಗಳಿಂದ ವಿವಿಧ ಹಂತಗಳ