Home Posts tagged ullala

ಉಳ್ಳಾಲ : ರಾಜು ಕೋಟ್ಯಾನ್ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗವೀರ ಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬುವವರ ಕೊಲೆ ನಡೆಸಿದ್ದ ನಾಲ್ಕು ಮಂದಿ ಆರೋಪಿಗಳಿಗೆ  ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಠಾಣಾ ವ್ಯಾಪ್ತಿಯಲ್ಲಿ ಉಳ್ಳಾಲ ಮೊಗವೀರಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬವರನ್ನು 2016ಎಪ್ರಿಲ್ 12 ರಂದು

ಉಳ್ಳಾಲದ ಮೊಗವೀರ ಬಾಲಕಿಯ ಮಹತ್ತರ ಸಾಧನೆ

ಉಳ್ಳಾಲ: 2024ರ ಮೇ, ತಿಂಗಳಲ್ಲಿ ಅಮರಿಕಾದ ನ್ಯೂಯಾರ್ಕ್‌ನಲ್ಲಿ ಜರಗುವ ವರ್ಲ್ಡ್ ಸೈನ್ಸ್ ಸ್ಕಾಲರ್ ಕಾರ್ಯಕ್ರಮಕ್ಕೆ ಉಳ್ಳಾಲದ ಮೊಗವೀರ ಸಮಾಜದ ಬಾಲಕಿ ಸಿಂಧೂರಳಿಗೆ ಆಹ್ವಾನ ಬಂದಿದ್ದು, ಮುಂದಿನ ತಿಂಗಳು ತಾಯಿ ಮಗಳು ಇಬ್ಬರು ಭಾಗಿಯಾಗಲಿದ್ದಾರೆ ಎಂದು ಬಾಲಕಿಯ ತಾಯಿ ಶಿಬಾನಿ ರಾಜಾ ಹೇಳಿದರು. ತೊಕ್ಕೊಟ್ಟು ಸೇವಾಸೌಧದಲ್ಲಿನ ಉಳ್ಳಾಲ ಪ್ರೆಸ್‌ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ನ್ಯೂಯಾರ್ಕ್‌ನಲ್ಲಿ ನಡೆಯುವ ವರ್ಲ್ಡ್ ಸೈನ್ಸ್ ಸ್ಕಾಲರ್

ಉಳ್ಳಾಲ: ಕಿಂಗ್ಸ್ ಕಲ್ಲಾಪು ವತಿಯಿಂದ ಭಂದುತ್ವ ಸೌಹಾರ್ದ ಇಫ್ತಾರ್ ಕೂಟ

ಉಳ್ಳಾಲ: ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಕಿಂಗ್ಸ್ ಕಲ್ಲಾಪು ಅಯೋಜಿಸಿದ ಬಂಧುತ್ವ ಸೌಹಾರ್ದ ಇಫ್ತಾರ್ ಕೂಟ ತೊಕ್ಕೋಟ್ಟು ಯುನಿಟಿ‌ ಹಾಲ್‌ ಮೈದಾನದಲ್ಲಿ ನಡೆಯಿತು. ಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಮುಖ್ಯ ಅತಿಥಿಯಾಗಿ ‌ಭಾಗವಹಿಸಿ‌ ಮಾತನಾಡಿ, ಪವಿತ್ರವಾದ ತಿಂಗಳ ಪವಿತ್ರವಾದ ದಿನದಲ್ಲಿ ಶ್ರದ್ಧಾಪೂರ್ವಕ ಉಪವಾಸ ವೃತ ‌ಮಾಡಿಕೊಂಡು ಇಫ್ತಾರ್ ಸಂದರ್ಭದಲ್ಲಿ ಎಲ್ಲಾ ಜಾತಿ ಎಲ್ಲಾ ಧರ್ಮದ ಸಮಾಜಿಕ ಧಾರ್ಮಿಕ ಮುಖಂಡರನ್ನು ಸೇರಿಸಿಕೊಂಡು ಭಂದುತ್ವ

ಉಳ್ಳಾಲ: ನಾಟೆಕಲ್ ಬೈಕ್ ಅಪಘಾತ – ಬೈಕ್‌ನಲ್ಲಿದ್ದ ಇಬ್ಬರು ಮೃತ್ಯು

ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು

ಉಳ್ಳಾಲ: ಮೂಲಭೂತ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಯು.ಟಿ ಖಾದರ್

ಉಳ್ಳಾಲ: ಚುನಾವಣಾ ಸಂದರ್ಭದಲ್ಲಿ ಅಭಿವೃದ್ಧಿ ಗೆ ಸಂಬಂಧಿಸಿದಂತೆ ಯಾವುದೆಲ್ಲ ಭರವಸೆ ನೀಡಿದ್ದೇನೆ ಯೊ ಅದನ್ನು ಮುಂದಿನ ವರ್ಷದಲ್ಲಿ ಕಾರ್ಯಗತ ಗೊಳಿಸಲಾಗುವುದು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.ಅವರು ಕೋಟೆಕಾರ್ ಪ.ಪಂ‌ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ರಸ್ತೆಗಳ ಅಭಿವೃದ್ಧಿ ಆಗಿದೆ.ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಗೆ 70 ಕೋಟಿ ರೂ. ಮಂಜೂರು ಮಾಡಲಾಗಿದೆ.ಈ ಪೈಕಿ 25 ಕೋಟಿ ರೂ

ಮುಡಿಪು : ಕುರ್ನಾಡು ಗ್ರಾ.ಪಂ ಎದುರು ಪ್ರತಿಭಟನೆ

ಮುಡಿಪು : ಪೌರಕಾರ್ಮಿಕನಾಗಿ ಕಳೆದ 20 ವರ್ಷಗಳಿಂದ ದುಡಿಯುತ್ತಿದ್ದ ಬಾಬಣ್ಣ ಅವರನ್ನು ಏಕಾಏಕಿ ಕೆಲಸದಿಂದ ತೆಗೆದು, ಯಾವುದೇ ಸರಕಾರಿ ಸೌಲಭ್ಯವನ್ನು ನೀಡದ ಕುರ್ನಾಡು ಗ್ರಾಮದ ಅಭಿವೃದ್ಧಿ ಅಧಿಕಾರಿ ಹಾಗೂ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಮುಡಿಪು ಕುರ್ನಾಡುವಿನ ಗ್ರಾ.ಪಂ ಕಚೇರಿಯೆದುರು ಪ್ರತಿಭಟನೆ ನಡೆಯಿತು. ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಪ್ರತಿಭಟೆನೆ ಉದ್ದೇಶಿಸಿ ಮಾತನಾಡಿ, ಕೊರಗ ಸಮುದಾಯದ ಬಾಬಣ್ಣ

ಉಳ್ಳಾಲ: ಕಾರ್, ಬೈಕ್ ಗೆ ಢಿಕ್ಕಿ: ಕೊಲ್ಯ ನಿವಾಸಿ ದಾರುಣ ಸಾವು

ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಇಂದು ಮಧ್ಯಾಹ್ನ ಸಂಭವಿಸಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ

ಉಳ್ಳಾಲ: ಕೊಂಡಾಣ ದೈವಸ್ಥಾನದ ಭಂಡಾರ ಮನೆ ಧ್ವಂಸ ಪ್ರಕರಣ: ಮೂವರ ಬಂಧನ

ಕೊಂಡಾಣದಲ್ಲಿ ಕಟ್ಟುತ್ತಿದ್ದ ದೈವದ ಭಂಡಾರ ಮನೆಯನ್ನು ಜೆಸಿಬಿ ಬಳಸಿ ಉರುಳಿಸಿದ ಸಂಬಂಧ ಮುತ್ತಣ್ಣ ಶೆಟ್ಟಿ, ಧೀರಜ್, ಶಿವರಾಜ್ ಎಂಬ ಮೂವರನ್ನು ಬಂಧಿಸಿರುವುದಾಗಿ ಪೋಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ.ಈ ಭಂಡಾರ ಮನೆಯನ್ನು ಮತ್ತು ದೈವಾಲಯವನ್ನು ಎಂಡೋಮೆಂಟಿಗೆ ಒಪ್ಪಿಸಿದ್ದರ ಸಂಬಂಧ ಮೂಲ ಕುಟುಂಬದವರ ನಡುವೆ ಇದ್ದ ಭಿನ್ನಾಭಿಪ್ರಾಯಗಳೇ ಈ ಭಂಡಾರ ಮನೆ ಉರುಳಿಸಿದ್ದಕ್ಕೆ ಕಾರಣ ಎಂದು ಆರೋಪಿಗಳು ತಿಳಿಸಿದ್ದಾರೆ.

ದುಬೈ ರಸ್ತೆ ಅಪಘಾತಕ್ಕೆ ತಾ.ಪಂ ಮಾಜಿ ಉಪಾಧ್ಯಕ್ಷೆ ಏಕೈಕ ಪುತ್ರಿ ದಾರುಣ ಸಾವು

ಉಳ್ಳಾಲ : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ

ನಾಪತ್ತೆಯಾದ ವಿವಾಹಿತನ ಮೃತದೇಹ ಪತ್ತೆ

ಉಳ್ಳಾಲ: ಕಳೆದ ಸೋಮವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಠೆ , ಕಲಶಾಭಿಷೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ