Home Posts tagged #ullala (Page 11)

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತರಾಮ್ ಭೇಟಿ

ಉಳ್ಳಾಲ: ಸ್ಯಾಂಡಲ್‍ವುಡ್‍ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ,ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ

ಉಳ್ಳಾಲ: ವಿವಾಹಿತ ನಿಗೂಢ ನಾಪತ್ತೆ

ಉಳ್ಳಾಲ: ವಿವಾಹಿತರೋರ್ವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಣಾಜೆ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ನಾಪತ್ತೆಯಾದವರು. ಪತ್ನಿ ಮೂರು ತಿಂಗಳ ಗರ್ಭಿಣಿಯಾಗಿದ್ದು, ಅವರ ಆರೋಗ್ಯ ತಪಾಸಣೆ ನಡೆಸಿದ ನಂತರ ಜೆಪ್ಪು ಕಂರ್ಭಿಸ್ಥಾನ ಸಮೀಪ ತಾಯಿ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳುವುದಾಗಿ ತಿಳಿಸಿ ಹೋದವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ

ಉಳ್ಳಾಲ. ಕಾರು ಮತ್ತು ಬೈಕ್ ನಡುವೆ ಅಪಘಾತ – ಸವಾರರಿಬ್ಬರಿಗೆ ಗಾಯ

ಉಳ್ಳಾಲ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಂದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಾಯಾಳುಗಳಿಬ್ಬರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು

ಮೇ 27. ಉಳ್ಳಾಲ ಕಪ್-2023 – ವಾಲಿಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗಲಿರುಳು ವಾಲಿಬಾಲ್ ಪಂದ್ಯಾಟ ಜಿಲ್ಲಾ ಚಾಂಪಿಯನ್ ಶಿಪ್ ಉಳ್ಳಾಲ ಕಪ್-2023 ಮೇ 27ರಂದು ಮುಡಿಪುವಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್

ಜೂಜಾಟಗಾರರ ಜತೆ ಶಾಮೀಲು ಆರೋಪ – ಉಳ್ಳಾಲ ಠಾಣೆ ಎಸ್.ಬಿ ಅಮಾನತು

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ

ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು-ಶಾಸಕ ಖಾದರ್ ಆದೇಶ

ಉಳ್ಳಾಲ: ಮಳೆಗಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ತಕ್ಷಣದಿಂದ ಕ್ರಮಕೈಗೊಳ್ಳಬೇಕು, ಉಳ್ಳಾಲ ನಗರಸಭೆಯಾದ್ಯಂತ 8 ಟ್ಯಾಂಕರ್ಗಳ ಮೂಲಕ ಸರಬರಾಜು ಆಗುತ್ತಿರುವ ಕುಡಿಯುವ ನೀರು ಸಮರ್ಪಕವಾಗಿ ಎಲ್ಲರ ಉಪಯೋಗಕ್ಕೆ ಬರಬೇಕು. ಕಡಲ್ಕೊರೆತದಿಂದ ಹಾನಿಗೊಳಗಾದ ಮುಕ್ಕಚ್ಚೇರಿ ಸೀಗ್ರೌಂಡ್ ಮತ್ತು ಉಚ್ಚಿಲ ಸೋಮೇಶ್ವರದಲ್ಲಿ ಅನುದಾನ ಮಂಜೂರುಗೊಳಿಸಿದ ತಕ್ಷಣ ಕಾಮಗಾರಿ ಆರಂಭಿಸಿ ಮುಗಿಸಬೇಕು ಎಂದು ಶಾಸಕ ಯು.ಟಿ ಖಾದರ್ ಅಧಿಕಾರಿಗಳಿಗೆ ಆದೇಶ

ಉತ್ತಮ ಸಮಾಜ, ಸಾಮರಸ್ಯಕ್ಕಾಗಿ ಕಾಂಗ್ರೆಸ್‍ಗೆ ಮತ ಕೊಟ್ಟಿದ್ದಾರೆ: ಖಾದರ್

ಸತ್ಯ- ಅಸತ್ಯ, ಪ್ರಚಾರ-ಅಪಪ್ರಚಾರದ ಬಗ್ಗೆ ರಾಜ್ಯದಲ್ಲಿ ಚುನಾವಣೆ ಆಗಿತ್ತು. ರಾಜ್ಯದ ಜನತೆ ಸತ್ಯಕ್ಕೆ ಜಯ ಕೊಟ್ಟಿದ್ದಾರೆ. ಜನರು ಬೆಲೆಯೇರಿಕೆ, ದ್ವೇಷ ಭಾವನೆಯಿಂದ ಕಂಗೆಟ್ಟು ನಿರಾಶರಾಗಿದ್ದರು. ಉತ್ತಮ ಸಮಾಜ, ಸಾಮರಸ್ಯಕ್ಕಾಗಿ ಕಾಂಗ್ರೆಸಿಗೆ ಮತ ಕೊಟ್ಟಿದ್ದಾರೆ. ಕರಾವಳಿಯಲ್ಲಿ ಜನರ ವಿಶ್ವಾಸಗಳಿಸಬೇಕಾಗಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಡಿದರು. ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದ ವ್ಯತ್ಯಾಸವನ್ನು

ಸರ್ವರಿಗೂ ನ್ಯಾಯ ಕೊಟ್ಟು ಗ್ಯಾರಂಟಿ ಕಾರ್ಡ್ ಶೀಘ್ರದಲ್ಲಿ ಅನುಷ್ಠಾನಕ್ಕೆ : ಯು.ಟಿ ಖಾದರ್

ಉಳ್ಳಾಲ: ಸಮಾಜವನ್ನು ಒಗ್ಗಟ್ಟು ಮಾಡುವ ಮೂಲಕ ಬಿಕ್ಕಟ್ಟು ಮಾಡಲು ಬಿಡದೆ ಮುಂದಿನ ಸರಕಾರ ಕಾರ್ಯಾಚರಿಸಲಿದ್ದು, ಸರ್ವ ಧರ್ಮದವರನ್ನು ಪ್ರೀತಿಸಿಕೊಂಡು ಸರ್ವರಿಗೂ ನ್ಯಾಯ ಕೊಟ್ಟು ಗ್ಯಾರಂಟಿ ಕಾರ್ಡ್ ಅತಿಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ತೊಕ್ಕೊಟ್ಟುವಿನಿಂದ ಉಳ್ಳಾಲಕ್ಕೆ ಬೈಕ್ ರ್‍ಯಾಲಿ ಮತ್ತು ರೋಡ್ ಷೋನಲ್ಲಿ ಭಾಗವಹಿಸಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆ ಮತ್ತು ಉಳ್ಳಾಲ ಸೈಯದ್ ಮದನಿ ದರ್ಗಾ ಭೇಟಿ ನೀಡಿ

ಕುಂಪಲದ ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ

ಉಳ್ಳಾಲ: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಕುತ್ತಾರು,ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20)ಆತ್ಮ ಹತ್ಯೆಗೈದ ಯುವಕ.ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ನಿನ್ನೆ

ಉಳ್ಳಾಲ : ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಾವು

ಉಳ್ಳಾಲ: ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ.ಮಂಗಳೂರಲ್ಲಿ ಬಿಕಾಂ ಕಲಿಯುತ್ತಿರುವ ಮೂಲತ: ಬಾಗಲಕೋಟೆ ಜಿಲ್ಲೆಯ,ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಕಾವೇರಿ(20)ಮೃತ ಪಟ್ಟ ಯುವತಿ.ಕಾವೇರಿ ನಿನ್ನೆ ಹುಟ್ಟು ಹಬ್ಬ ಆಚರಿಸಿದ್ದು ಇಂದು ತನ್ನ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದಳು. ಸ್ನೇಹಿತೆಯರಿಬ್ಬರು ಸಮುದ್ರ