ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ
ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್ನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ. ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಅವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ತನ್ನ ತಾಯಿಯ ಜೊತೆ ತೆರಳುತ್ತಿದ್ದ ವೇಳೆ
ಉಪ್ಪಿನಂಗಡಿ: ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ಗದಗ ಮೂಲದ ಕಾರ್ಮಿಕ ಕುಟುಂಬದ ಬಾಲಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ, ಮೀನಾಕ್ಷಿ ದಂಪತಿ ಮಕ್ಕಳಾದ ನಿಂಗರಾಜು (16), ಸತೀಶ್ (14) ಮೃತಪಟ್ಟವರು. ನಿಂಗರಾಜು ಗದಗ ಮುರಾರ್ಜಿ ದೇಸಾಯಿ ವಸತಿ ಶಾಲೆ ಹತ್ತನೇ ತರಗತಿ ವಿದ್ಯಾರ್ಥಿ. ಸತೀಶ 8 ನೇ ತರಗತಿಯಲ್ಲಿ ಕಲಿಯುತ್ತಿದ್ದ. ವಿದ್ಯಾರ್ಥಿಗಳು