ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆದಿದೆ. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೋಟಿ ಕಂಠ ಗಾಯನ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ ಜರುಗಿತ್ತು. ಉಡುಪಿ ಅಪರ ಜಿಲ್ಲಾಧಿಕಾರಿಯಾದ ವೀಣಾ ಬಿ ಎಸ್,